ಸಂಸದ್ ಟಿವಿಯ ಯೂಟ್ಯೂಬ್ ಚಾನಲ್ ತಾತ್ಕಾಲಿಕ ಸ್ಥಗಿತ
Team Udayavani, Feb 16, 2022, 6:35 AM IST
ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ನೇರಪ್ರಸಾರ ಮಾಡುವ ಸಂಸದ್ ಟಿವಿಯ ಯೂಟ್ಯೂಬ್ ವಾಹಿನಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದಕ್ಕೆ ಕಾರಣ ಹ್ಯಾಕರ್ಗಳು.
ಈ ವಾಹಿನಿಯ ಹೆಸರನ್ನು ಅವರು ಎಥೆರಿಯಮ್ ಎಂದು ಬದಲಿಸಿದ್ದರು. ಇದನ್ನು ಗಮನಿಸಿ ಯುಟ್ಯೂಬ್, ಸಂಸದ್ ಟಿವಿಯ ಯೂಟ್ಯೂಬ್ ಚಾನೆಲ್ ಅನ್ನು ನಿಷ್ಕ್ರಿಯಗೊಳಿಸಿದ್ದರು. ಆದರೆ, ಆರಂಭದಲ್ಲಿ ಯೂಟ್ಯೂಬ್ನ ನಿಯಮಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಇದನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಯಿತು.
ಇವೆಲ್ಲ ನಡೆದಿದ್ದು ಸೋಮವಾರ ತಡರಾತ್ರಿ 1 ಗಂಟೆಗೆ. ವಿಷಯ ಗಮನಕ್ಕೆ ಬಂದ ತಕ್ಷಣ ಸಂಸದ್ ಟಿ.ವಿ.ಯ ಸಾಮಾಜಿಕ ತಾಣ ಪಡೆ ಕಾರ್ಯಪ್ರವೃತ್ತವಾಯಿತು. ಯೂಟ್ಯೂಬ್ ಕೂಡ ರಂಗಪ್ರವೇಶ ಮಾಡಿತು. ಅಂತೂ ಮಂಗಳವಾರ ಮುಂಜಾನೆ 3.45ಕ್ಕೆ ಕಾರ್ಯಾರಂಭ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.