INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
Team Udayavani, Sep 20, 2024, 3:29 PM IST
ಚೆನ್ನೈ: ಬಾಂಗ್ಲಾ ವಿರುದ್ದದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಭಾರತವು (Team India) ತನ್ನ ನಿಯಂತ್ರಣಕ್ಕೆ ಪಡೆದಿದೆ. ಭಾರತದ ಬೌಲರ್ ಗಳ ಬಿಗು ದಾಳಿಗೆ ನಲುಗಿದ ಬಾಂಗ್ಲಾ ತಂಡವು ಪ್ರಥಮ ಇನ್ನಿಂಗ್ಸ್ ಕೇವಲ 149 ರನ್ ಗಳಿಗೆ ಆಲೌಟಾಗಿದೆ. ಈ ಮೂಲಕ ಭಾರತ 227 ರನ್ ಮುನ್ನಡೆ ಸಾಧಿಸಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತವು 376 ರನ್ ಗಳಿಸಿದ್ದರೆ, ಬಾಂಗ್ಲಾ 149 ರನ್ ಮಾತ್ರ ಮಾಡಿದೆ.
ಭಾರತದ ತ್ರಿವಳಿ ವೇಗಿಗಳು ಬಾಂಗ್ಲಾ ಬ್ಯಾಟರ್ ಗಳ ಮೇಲೆ ಸವಾರಿ ಮಾಡಿದರು. ಮೊದಲ ಓವರ್ ನಲ್ಲಿ ಶದ್ಮಾನ್ ಇಸ್ಲಾಂ ಅವರನ್ನು ಬೌಲ್ಡ್ ಮಾಡುವ ಮೂಲಕ ಬುಮ್ರಾ ವಿಕೆಟ್ ಬೇಟೆ ಆರಂಭಿಸಿದರು. ಬಳಿಕ ಆಕಾಶ್ ದೀಪ್ ಸತತ ವಿಕೆಟ್ ಗಳ ಮೂಲಕ ಬಾಂಗ್ಲಾ ಕುಸಿತಕ್ಕೆ ನಾಂದಿ ಹಾಡಿದರು. ಇವರಿಗೆ ಸಾಥ್ ನೀಡಿದ ಸಿರಾಜ್ ಬಾಂಗ್ಲಾ ಹುಲಿಗಳಿಗೆ ಕಂಟವಾದರು.
ಬಾಂಗ್ಲಾ ಪರ ಶಕೀಬ್ ಅಲ್ ಹಸನ್ 32 ರನ್, ಮೆಹದಿ ಹಸನ್ 27 ರನ್, ಲಿಟನ್ ದಾಸ್ 22 ರನ್ ಮತ್ತು ನಾಯಕ ನಜ್ಮುಲ್ ಶಾಂಟೋ 20 ರನ್ ಗಳಿಸಿದರು.
ಭಾರತದ ಪರ ಜಸ್ಪ್ರೀತ್ ಬುಮ್ರಾ ನಾಲ್ಕು ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.
376 ರನ್ ಪೇರಿಸಿದ ಭಾರತ
ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 339 ರನ್ ಗಳಿಸಿದ್ದ ಭಾರತ ಇಂದಿನ ದಿನದ ಆರಂಭದಲ್ಲಿ ಸತತ ವಿಕೆಟ್ ಕಳೆದುಕೊಂಡಿತು. 86 ರನ್ ಗಳಿಸಿದ್ದ ಜಡೇಜಾ ಇಂದು ಅದೇ ಮೊತ್ತಕ್ಕೆ ಔಟಾದರು. ಆಶ್ವಿನ್ 113 ರನ್ ಮಾಡಿದರು. ಬಾಂಗ್ಲಾ ಪರ ಹಸನ್ ಮೊಹಮೂದ್ ಐದು ವಿಕೆಟ್ ಪಡೆದರೆ, ತಸ್ಕಿನ್ ಮೂರು ವಿಕೆಟ್ ಕಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.