
ನಗರದ 12 ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರ ನಡೆಸಲು ಬಿಬಿಎಂಪಿ ಆದೇಶ
Team Udayavani, Apr 21, 2021, 10:16 PM IST

ಬೆಂಗಳೂರು: ಕೊರೊನಾ ಸೋಂಕಿತರ ಶವ ಸಂಸ್ಕಾರ ಸಮಸ್ಯೆ ಮತ್ತು ನಿರ್ದಿಷ್ಟ ವಿದ್ಯುತ್ ಚಿತಾಗಾರಗಳ ಮೇಲೆ
ಹೊರೆ ಆಗುತ್ತಿರುವ ಹಿನ್ನೆಲೆಯಲ್ಲಿ ನಗರದ ಎಲ್ಲ 12 ವಿದ್ಯುತ್ ಚಿತಾರಗಳಲ್ಲೂ ಕೊರೊನಾ ಹಾಗೂ ಕೊರೊನೇತರ ಕಾರಣದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಬಿಬಿಎಂಪಿ ಆದೇಶ ಮಾಡಿದೆ.
ನಗರದಲ್ಲಿ ಮೊದಲು ನಾಲ್ಕು ಮತ್ತು ನಂತರದಲ್ಲಿ ಏಳು ವಿದ್ಯುತ್ ಚಿತಾಗಾರಗಳನ್ನು ಕೊರೊನಾ ಸೋಂಕಿತರ ಶವ ಸಂಸ್ಕಾರಕ್ಕೆ ಮೀಸಲಿಡಲಾಗಿತ್ತು. ಇತ್ತೀಚೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಅಧಿಕವಾಗಿ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ 12 ವಿದ್ಯುತ್ ಚಿತಾಗಾರದಲ್ಲಿ ಎಲ್ಲ ಮಾದರಿ ಶವ ಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.
ಷರತ್ತುಗಳು: ವಿದ್ಯುತ್ ಚಿತಾಗಾರ ಸಿಬ್ಬಂದಿ ವೇತನ ಬಾಕಿ ಬಿಡುಗಡೆ ಮಾಡುವಂತೆ, ಶವ ಸಂಸ್ಕಾರಕ್ಕೆ ಯಾವುದೇ ವಿಳಂಬವಾಗಬಾರದು. ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಕಾರ್ಯನಿರ್ವಹಣೆ, ಬೆಳಗ್ಗೆ 11ಕ್ಕೆ ಹಿಂದಿನ ದಿನದ ಶವ ಸಂಸ್ಕಾರದ ಪೂರ್ಣ ವಿವರ ನೀಡಬೇಕು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಾಗಾಣಿಕೆ ಮತ್ತು ಅಂತ್ಯಕ್ರಿಯೆಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎನ್ನುವುದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ.
ಲೋಪವಾಗದಂತೆ ಎಚ್ಚರಿಕೆ: ವಿದ್ಯುತ್ ಚಿತಾಗಾರಗಳ ಮೇಲೆ ಹೊರೆ ತಪ್ಪಿಸಲು ಹಾಗೂ ಶವ ಸಂಸ್ಕಾರ ವಿಳಂಬ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ಗುಪ್ತ ಹೇಳಿದರು.
ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹದಿಂದ ಕೊರೊನಾ ಹಬ್ಬುವುದಿಲ್ಲ. ಆದರೆ, ಪ್ಯಾಕ್ ವಿಧಾನದಲ್ಲಿ ಲೋಪವಾಗುವಂತಿಲ್ಲ ಎಂದು ಆಸ್ಪತ್ರೆಗಳಿಗೆ ನಿರ್ದೇಶನ ನೀಡಲಾಗಿದೆ. ಚಿತಾಗಾರಗಳಲ್ಲಿ ಗರಿಷ್ಠ ಜನ ಮಿತಿ ನಿಯಮ ಪಾಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಚಿತಾಗಾರದ ವಿವರ:
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.