![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 25, 2024, 11:55 AM IST
ಬೀದರ್: ವಕ್ಫ್ ಭೂಮಿ ವಿರುದ್ಧ ಐದು ಜಿಲ್ಲೆಗಳಲ್ಲಿ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ನೇತೃತ್ವದ ಬಿಜೆಪಿಯ ರೆಬಲ್ಸ್ ಟೀಂ ಆಯೋಜಿಸಿರುವ ‘ವಕ್ಫ್ ಹಠಾವೋ -ಭಾರತ್ ದೇಶ್ ಬಚಾವೋʼ ಹೋರಾಟಕ್ಕೆ ಸೋಮವಾರ (ನ.25) ಗಡಿ ಜಿಲ್ಲೆ ಬೀದರನಿಂದ ಚಾಲನೆ ನೀಡಲಾಗಿದೆ.
ನಗರದ ಝರಣಿ ನರಸಿಂಹ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ವಕ್ಫ್ ವಿರುದ್ಧ ಈ ತಂಡ ಹೋರಾಟ ಶುರು ಮಾಡಿದ್ದು, ಡಿ. 1ರ ವರೆಗೆ ಐದು ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದೆ. ಈ ವೇಳೆ ವಕ್ಫ್ ಬೋರ್ಡ್ ನಿಂದ ಅನ್ಯಾಯಕ್ಕೆ ಒಳಗಾದ ರೈತರು ಮತ್ತು ಮಠಾಧಿಶರಿಂದ ಅಹವಾಲು ಸ್ವೀಕರಿಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಿದ್ದಾರೆ. ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಮಾಜಿ ಸಂಸದರಾದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ್, ಹೊಳಲ್ಕೆರೆ ಚಂದ್ರಪ್ಪ ಸೇರಿ ಹಲವರು ಅವರ ಸಾಥ್ ನೀಡಿದ್ದಾರೆ.
ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಬೀದರ ತಾಲೂಕಿನ ಧರ್ಮಾಪುರ, ಚಟ್ನಳ್ಳಿ ಗ್ರಾಮಗಳಿಗೆ ರೆಬಲ್ಸ್ ಟೀಂ ಭೇಟಿ ನೀಡಲಿದೆ. ಅಲ್ಲಿ ವಕ್ಫ್ನಿಂದ ತೊಂದರೆಗೆ ಒಳಗಾದ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಲಿದೆ. ಕೆಲ ದಿನಗಳ ಹಿಂದೆಯಷ್ಟೇ 26 ಎಕ್ರೆಯ ಇಡೀ ಗ್ರಾಮವೇ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಾಗಿತ್ತು, ಇದರಿಂದ ಜನ ಕಂಗಾಲಾಗಿದ್ದರು. ಹಾಗಾಗಿ ಇಲ್ಲಿನ ಜನರೊಟ್ಟಿಗೆ ಈ ತಂಡ ಸಮಾಲೋಚನೆ ನಡೆಸಲಿದೆ.
ಮ. 12 ಗಂಟೆ ಸುಮಾರಿಗೆ ಬೀದರನ ಗಣೇಶ ಮೈದಾನದಲ್ಲಿ ಸಭೆ ನಡೆಸಿ ರೈತರು, ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದೆ.
ಸಂಜೆ 4 ಗಂಟೆಗೆ ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದೆ. ಸುಮಾರು 300 ರೈತ ಕುಟುಂಬಗಳ 960 ಎಕರೆ ಜಮೀನಿನಲ್ಲಿ ವಕ್ಫ್ ಹೆಸರು ಉಲ್ಲೇಖವಾಗಿದ್ದ ಚಟ್ನಳ್ಳಿ ಗ್ರಾಮಕ್ಕೆ ಶಾಸಕರ ತಂಡ ಭೇಟಿ ನೀಡಲಿದೆ.
ಸ್ಥಳೀಯ ಶಾಸಕರು ಗೈರು
ವಕ್ಫ್ ಮಂಡಳಿ ವಿರುದ್ಧ ಬೀದರನಿಂದ ಆರಂಭವಾಗಲಿರುವ ಯತ್ನಾಳ್ ನೇತೃತ್ವದ ಹೋರಾಟದಲ್ಲಿ ಜಿಲ್ಲೆಯ ಯಾವುದೇ ಬಿಜೆಪಿ ಶಾಸಕರು ಭಾಗವಹಿಸಿಲ್ಲ. ಇದು ಬಿಜೆಪಿ ಅಧಿಕೃತ ಕಾರ್ಯಕ್ರಮ ಅಲ್ಲ, ಪಕ್ಷದಿಂದ ಯಾವುದೇ ಸಂದೇಶ ಬಂದಿಲ್ಲ. ಹಾಗಾಗಿ ಪಾಲ್ಗೊಳ್ಳುತ್ತಿಲ್ಲ ಎಂದಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.