Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Team Udayavani, Sep 19, 2024, 10:14 PM IST
ದಾವಣಗೆರೆ:ನಗರದ ಬೇತೂರು ರಸ್ತೆಯ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ.
ಗುರುವಾರ ಸಂಜೆ ಬೇತೂರು ರಸ್ತೆಯಲ್ಲಿ ಗಣೇಶನ ಮೆರವಣಿಗೆ ನಡೆಯುತ್ತಿದ್ದ ವೇಳೆ ಏಕಾಏಕಿ ಕಲ್ಲುಗಳ ತೂರಾಟ ನಡೆದಿದ್ದು ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ 5ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಕೂಡಲೇ ಪೊಲೀಸ್ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ವೆಂಕಾಭೋವಿ ಕಾಲೋನಿಯ ಗಣೇಶನ ಮೆರವಣಿಗೆ ಪ್ರತಿ ವರ್ಷದ ಮಾರ್ಗದಲ್ಲೇ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ತಾವು ಒಳಗೊಂಡಂತೆ ಎಲ್ಲ ಅಧಿಕಾರಿಗಳು ರೌಂಡ್ಸ್ ಮಾಡುತ್ತಿದ್ದೇವೆ. ಪರಿಸ್ಥಿತಿ ಶಾಂತ ವಾಗಿದೆ. ಗಣೇಶನ ಮೂರ್ತಿಯನ್ನು ವಿಸರ್ಜನೆಗೆ ಕಳಿಸಿಕೊಡಲಾಗಿದೆ ಎಂದು ತಿಳಿಸಿದರು.
ಬುಧವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
144 ಸೆಕ್ಷನ್ ಜಾರಿ ಸಂಬಂಧಿಸಿದಂತೆ ಜಿಲ್ಲಾ ಧಿಕಾರಿಗಳ ಜೊತೆ ಮಾತನಾಡಲಾಗಿದೆ. ಬೇತೂರು ರಸ್ತೆಯಲ್ಲಿನ ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ವಶಕ್ಕೆ ತೆಗೆದು ಕೊಂಡಿಲ್ಲ. ಎಲ್ಲವನ್ನೂ ಪರಿಶೀಲನೆ ನಡೆಸಿದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.