Desi Swara: ದುಬೈ -ರಕ್ತದಾನ ಶಿಬಿರ: 500 ಮಂದಿ ನೋಂದಾವಣೆ
Team Udayavani, Aug 24, 2024, 3:38 PM IST
ದುಬೈ: ಭಾರತದ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರತೀ ವರ್ಷ ದುಬೈಯಲ್ಲಿ ಆಯೋಜಿಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರ ಈ ಬಾರಿಯೂ ಸಹ ಕಾನ್ಸುಲೆಟ್ ಜೆನರಲ್ ಅಫ್ ಇಂಡಿಯಾ ಮತ್ತು ಎಫ್.ಒ.ಐ. ಈವೆಂಟ್ಸ್ನ ಸಂಯೋಗದಲ್ಲಿ ಆ.11ರಂದು ದುಬೈ ಹೆಲ್ತ್ ಅಥಾರಿಟಿ ಹೆಡ್ ಕ್ವಾಟ್ರಸ್ ಜಡಾಫ್ ದುಬೈ ರಕ್ತದಾನ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.
ಕಳೆದ ಹದಿನೆಂಟು ವರ್ಷಗಳಿಂದ ಹಲವು ಬಾರಿ ವಿವಿಧ ಸಂದರ್ಭಗಳಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಎಫ್.ಒ.ಐ. ಈವೆಂಟ್ಸ್ನ ಮುಖ್ಯಸ್ಥರಲ್ಲಿ ಓರ್ವರಾಗಿರುವ ಭಾಗ್ಯರಾಜ್ ರಾವ್ ಅವರ ಜತೆಗೆ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಸಮಾಜ ಸೇವಕರ ತಂಡ ಪೂರ್ವಭಾವಿ ತಯಾರಿಯೊಂದಿಗೆ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ ದುಬೈ ಲತಿಫಾ ಹಾಸ್ಪಿಟಲ್ ಮತ್ತು ಹೆಲ್ತ್ ಅಥಾರಿಟಿ ಆರೋಗ್ಯ ಸಿಬಂದಿ ವರ್ಗದವರ ಮೇಲ್ವಿಚಾರಣೆಯಲ್ಲಿ ನಡೆಯಿತು. ರಕ್ತದಾನ ಶಿಬಿರಕ್ಕೆ ಐನೂರು ಮಂದಿ ರಕ್ತದಾನಿಗಳು ಹೆಸರು ನೋಂದಾಯಿಸಿ ಕೊಂಡಿದ್ದರು. ಬ್ಲಿಡ್ ಬ್ಯಾಂಕ್ನ ಅಗತ್ಯಕ್ಕೆ ಅನುಗುಣವಾಗಿ ನೂರ ಎಂಬತ್ತು ಮಂದಿಯ ರಕ್ತವನ್ನು ಸಂಗ್ರಹಿಸಿ ಕೊಳ್ಳಲಾಯಿತು.
ಡೆಪ್ಯೂಟಿ ಕಾನ್ಸೂಲ್ ಜೆನರಲ್ ಯತಿನ್ ಪಟೇಲ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ತಮ್ಮ ಮೆಚ್ಚುಗೆ ಮತ್ತು ಪ್ರಶಂಸೆಯನ್ನು ವ್ಯಕ್ತಪಡಿಸಿದರು. ರಕ್ತದಾನ ಶಿಬಿರದ ಸಂದರ್ಭದಲ್ಲಿ ಭಾರತದ ವಿವಿಧ ಭಾಗಗಳ ಅನಿವಾಸಿ ಭಾರತೀಯರು ಭಾಗವಹಿಸುತ್ತಾರೆ. ಪ್ರತೀ ಶಿಬಿರದಲ್ಲಿ ಉಪಹಾರದ ವ್ಯವಸ್ಥೆ ಇರುತ್ತದೆ. ಈ ಬಾರಿ ಮಣಿಪುರ ರಾಜ್ಯ ಶೈಲಿಯ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.
ರಕ್ತದಾನದಂತ ಮಹಾದಾನ, ಪವಿತ್ರ ದಾನದ ಕಾರ್ಯದಲ್ಲಿ ತೊಡಗಿಸಿಕೊಂಡಿರುವವರಿಗೆ ಕಾನ್ಸುಲೆಟ್ ಜೆನರಲ್ ಆಫ್ ಇಂಡಿಯಾ ಮತ್ತು ಎಫ್.ಒ.ಐ. ಈವೆಂಟ್ಸ್ ತಮ್ಮ ಪ್ರಶಂಸೆಯನ್ನು ಸಲ್ಲಿಸಿದ್ದಾರೆ.
ವರದಿ: ಬಿ. ಕೆ. ಗಣೇಶ್ ರೈ, ದುಬೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.