Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
ರಾಜ್ಯದಲ್ಲಿ ಪ್ರತಿ ಮನೆಗೂ ತೆರಳಿ ತಪಾಸಣೆ, ಉಚಿತ ಔಷಧ ವಿತರಣೆ
Team Udayavani, Sep 29, 2024, 1:04 AM IST
ಬೆಂಗಳೂರು: ಮುಂದಿನ ಒಂದು ತಿಂಗಳೊಳಗೆ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯಡಿ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆಗೆ ಒಳಪಡಿಸಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುವವರನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಹಾಗೂ ಔಷಧ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಹಾರ್ಟ್-ಟು-ಹಾರ್ಟ್ ಸಮ್ಮೇಳನವನ್ನು ಅವರು ಉದ್ಘಾಟಿಸಿ ಮಾತನಾಡಿ, ಉತ್ತಮ ಆರೋಗ್ಯ ಎನ್ನುವುದು ಹೊಟ್ಟೆಯಲ್ಲಿರುವ ಮಗುವಿನಿಂದ ಪ್ರಾರಂಭವಾಗುತ್ತದೆ. ಗರ್ಭಿಣಿ ಆರೋಗ್ಯ ಉತ್ತಮವಿದ್ದರೆ, ಶಿಶುವಿನ ಬೆಳವಣೆಗೆ ಆರೋಗ್ಯಕರವಾಗಿರಲಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಪ್ರಾರಂಭಿಕ ಹಂತದಲ್ಲಿ ರೋಗ ಲಕ್ಷಣಗಳನ್ನು ಪತ್ತೆ ಮಾಡಿ, ಅಗತ್ಯ ಚಿಕಿತ್ಸೆಯನ್ನು ನೀಡಲು ಮುಂದಾಗಿದೆ. ಜತೆಗೆ ರೋಗ ತಡೆಗೆ ಅಗತ್ಯವಿರುವ ಅರಿವು ಮೂಡಿಸಲು ಸಿದ್ಧತೆ ನಡೆಸುತ್ತಿದೆ. ಗೃಹ ಆರೋಗ್ಯ ಯೋಜನೆಯಡಿ ಆಶಾ ಕಾರ್ಯಕರ್ತರು ಮತ್ತು ಪ್ರಾ. ಆರೋಗ್ಯ ಅಧಿಕಾರಿಗಳನ್ನು ಒಳಗೊಂಡ ತಂಡ ಮನೆ-ಮನೆಗೆ ತಪಾಸಣೆ ನಡೆಸಿ ಔಷಧ ವಿತರಿಸುವುದರ ಜತೆಗೆ ಗರ್ಭಕಂಠದ, ಸ್ತನ ಮತ್ತು ಬಾಯಿಯ ಕ್ಯಾನ್ಸರ್ ಸ್ಕ್ರೀನಿಂಗ್ ನಡೆಸಲಿದ್ದಾರೆ ಎಂದರು.
ತಂತ್ರಜ್ಞಾನದ ಬಳಕೆಯೊಂದಿಗೆ ಮುಂದೆ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಬಹುದು. ಈ ವಿಧಾನವನ್ನು ಆರೋಗ್ಯ ಇಲಾಖೆ ತನ್ನ ವ್ಯವಸ್ಥೆಯಲ್ಲಿ ಆಳವಡಿಸಿಕೊಂಡಿದೆ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯ ಡಿ 83 ಸರಕಾರಿ ಆಸ್ಪತ್ರೆಯನ್ನು ಬೆಂಗಳೂರಿನ ಕೇಂದ್ರದೊಂದಿಗೆ ಸಂಪರ್ಕ ಕಲ್ಪಿಸಲಾಗಿದೆ. ಹೃದಯ ಸಮಸ್ಯೆಗಳೊಂದಿಗೆ ಸಮುದಾಯ, ತಾಲೂಕು, ಜಿಲ್ಲಾಸ್ಪತ್ರೆಗಳಿಗೆ ಬರುವವರಿಗೆ ಉಚಿತವಾಗಿ ಇಸಿಜಿ ಮಾಡಲಾಗುತ್ತದೆ. ಇಲ್ಲಿ ಏರುಪೇರುಗಳು ಕಂಡು ಬಂದರೆ ಆನ್ಲೈನ್ ಮೂಲಕ ಬೆಂಗಳೂರು ಕೇಂದ್ರವನ್ನು ಸಂಪರ್ಕಿಸಲಾಗುತ್ತದೆ. ಇಲ್ಲಿನ ವೈದ್ಯರು ವರದಿಯನ್ನು ಪರಿಶೀಲಿಸಿ ಅಗತ್ಯವಿರುವ ಕ್ರಮಕೈಗೊಳ್ಳಲು ವೈದ್ಯರಿಗೆ ಸೂಚಿಸುತ್ತಾರೆ. ಈ ವ್ಯವಸ್ಥೆಯಿಂದ ತುರ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 75 ರೋಗಿಗಳ ಜೀವ ಉಳಿಸಲು ಸಾಧ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.