Dr G. Shankar: ಡಾ| ಜಿ. ಶಂಕರ್‌ 68ನೇ ಹುಟ್ಟು ಹಬ್ಬದ ಸಂಭ್ರಮ

ಉಚ್ಚಿಲ ದೇವಸ್ಥಾನದಲ್ಲಿ ಲಕ್ಷ್ಮೀನಾರಾಯಣ ಹೃದಯ ಹೋಮ, ಗೌರವಾರ್ಪಣೆ

Team Udayavani, Oct 6, 2023, 1:05 AM IST

DR G SHANKAR

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಉಚ್ಚಿಲ ದಸರಾ ರೂವಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌ ಅವರ 68ನೇ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ಲಕ್ಷ್ಮೀ ನಾರಾಯಣ ಹೃದಯ ಹೋಮ, ಗೌರವಾರ್ಪಣೆ ಮತ್ತು ಅನ್ನಸಂತರ್ಪಣೆ ನಡೆಯಿತು.
ದೇವಸ್ಥಾನಕ್ಕೆ ಆಗಮಿಸಿದ ಡಾ| ಜಿ. ಶಂಕರ್‌ ಮತ್ತು ಶಾಲಿನಿ ಜಿ. ಶಂಕರ್‌ ದಂಪತಿಯನ್ನು ಪೂರ್ಣಕುಂಭ ಸಹಿತ ಮಲ್ಲಿಗೆ ಹಾರ, ಕಮಲದ ಹೂವನ್ನು ನೀಡಿ ಪುಷ್ಪವೃಷ್ಟಿಯೊಂದಿಗೆ ಬರಮಾಡಿಕೊಳ್ಳಲಾಯಿತು. ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಹೋಮ, ಶ್ರೀ ಮಹಾಲಕ್ಷ್ಮೀ, ಭದ್ರಕಾಳಿ, ಗಣಪತಿ ದೇವರ ಸನ್ನಿಧಾನದಲ್ಲಿ ಸರ್ವಾಲಂಕಾರ ಸೇವೆ ಮತ್ತು ಮಹಾಪೂಜೆ ನಡೆಯಿತು. ದೀರ್ಘಾಯುಷ್ಯದ ಹಾರೈಕೆಯೊಂ ದಿಗೆ ದೇವರ ಪ್ರಸಾದ ಸಹಿತವಾಗಿ ಗೌರವಿಸಲಾಯಿತು.

ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಮಾತನಾಡಿ, ಉಚ್ಚಿಲ ದೇವಸ್ಥಾನದ ಜೀರ್ಣೋದ್ಧಾರದ ಪ್ರೇರಕ ಶಕ್ತಿಯಾಗಿ, ಮೊಗವೀರ ಸಮಾಜ ಸೇರಿದಂತೆ ಎಲ್ಲ ಸಮಾಜದ ನೊಂದವರಿಗೆ ಸಹಾಯ ಹಸ್ತವನ್ನು ಚಾಚಿರುವ ಡಾ| ಜಿ. ಶಂಕರ್‌ ಹೃದಯವಂತ ನಾಯಕರಾಗಿದ್ದಾರೆ. ಸಮಾಜದ ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿರುವ ಅವರಿಗೆ ದೇವರು ಇನ್ನಷ್ಟು ಸಮಾಜ ಸೇವೆಗೈಯ್ಯುವ ಭಾಗ್ಯವನ್ನು ಒದಗಿಸಲಿ ಎಂದು ಹಾರೈಸಿದರು.

ಉಚ್ಚಿಲ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಅಮೀನ್‌, ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್‌, ಕೋಶಾಧಿಕಾರಿ ಭರತ್‌ ಎರ್ಮಾಳ್‌, ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ಪ್ರಮುಖರಾದ ಕೇಶವ್‌ ಕುಂದರ್‌, ಮೋಹನ್‌ ಬೆಂಗ್ರೆ, ಕೇಶವ್‌ ಕೋಟ್ಯಾನ್‌, ಶಂಕರ ಸಾಲ್ಯಾನ್‌, ಚೇತನ್‌ ಬೆಂಗ್ರೆ, ನಾರಾಯಣ ಸಿ. ಕರ್ಕೇರ, ವಿನಯ ಕರ್ಕೇರ, ವಿಜಯ ಕುಂದರ್‌, ಎನ್‌.ಟಿ. ಅಮೀನ್‌, ಎಚ್‌.ಟಿ. ಕಿದಿಯೂರು, ಸತೀಶ ಕುಂದರ್‌, ದಿನೇಶ ಮೂಳೂರು, ಸರ್ವೋತ್ತಮ ಕುಂದರ್‌, ರವೀಂದ್ರ ಶ್ರೀಯಾನ್‌, ವಿಶ್ವಾಸ್‌ ಅಮೀನ್‌, ಗಣೇಶ ಸಾಲ್ಯಾನ್‌ ಕೊಳ, ಮಂಜು ಕೊಳ, ರಾಮಚಂದ್ರ ಕುಂದರ್‌, ಮೋಹನ್‌ ಬಂಗೇರ ಕಾಪು, ಮನೋಜ್‌ ಕಾಂಚನ್‌, ಶರಣ್‌ ಮಟ್ಟು, ಸುಗುಣಾ ಕರ್ಕೇರ, ಸರಳಾ ಕಾಂಚನ್‌, ಅಪ್ಪಿ ಸಾಲ್ಯಾನ್‌, ವ್ಯವಸ್ಥಾಪಕ ಸತೀಶ್‌ ಅಮೀನ್‌ ಮೊದಲಾದವರಿದ್ದರು.

ಕಾಯಕಯೋಗಿ
ಡಾ| ಜಿ. ಶಂಕರ್‌ ಅವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳ ಓರ್ವ ಸಹೃದಯ ದಾನಿಯಾಗಿದ್ದಾರೆ. ಉಡುಪಿ ಜಿಲ್ಲೆಯನ್ನು ರಕ್ತದಾನಿಗಳ ಜಿಲ್ಲೆಯನ್ನಾಗಿಸುವ ಹಿಂದಿನ ಪ್ರೇರಕ ಶಕ್ತಿ, ಉಚ್ಚಿಲ ದೇವಸ್ಥಾನದ ಪುನರ್‌ ನಿರ್ಮಾಣದ ರೂವಾರಿ, ಬಡತನವನ್ನು ಮೆಟ್ಟಿನಿಂತು ಕಠಿಣ ಪರಿಶ್ರಮದಿಂದ ಜೀವನವನ್ನು ರೂಪಿಸಿಕೊಂಡ ಕಾಯಕಯೋಗಿ ಎನಿಸಿರುವ ಅವರು ನೂರು ಕಾಲ ಬಾಳಿ ಬೆಳಗುವಂತಾಗಲಿ ಎಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಶುಭ ಹಾರೈಸಿದರು.

ಜಿಲ್ಲಾ ಮೊಗವೀರ ಯುವ ಸಂಘಟನೆ- ವಿವಿಧ ಸಮಾಜಸೇವಾ ಚಟುವಟಿಕೆ

ಉಡುಪಿ: ಅಂಬಲಪಾಡಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌ ಅವರ 68ನೇ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಮೊಗವೀರ ಯುವ ಸಂಘಟನೆಯ ವತಿಯಿಂದ ಗುರುವಾರ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಸಂಘಟನೆಯ ವಿವಿಧ ಘಟಕಗಳ ವ್ಯಾಪ್ತಿಯಲ್ಲಿ ಹಲವಾರು ಸಮಾಜಮುಖೀ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ ಹೆಮ್ಮಾಡಿ, ಕುಂದಾಪುರ, ಕೋಟೇಶ್ವರ, ಕೋಟ, ಸಾಲಿಗ್ರಾಮ, ಹಾಲಾಡಿ, ಮಂದಾರ್ತಿ, ಬ್ರಹ್ಮಾವರ, ಕೋಡಿ ಬೆಂಗ್ರೆ, ಪಡುತೋನ್ಸೆ ಬೆಂಗ್ರೆ, ಕಲ್ಯಾಣಪುರ, ಹಿರಿಯಡ್ಕ, ಮಲ್ಪೆ, ಉಪ್ಪೂರು, ಬೆಳ್ಳಂಪಳ್ಳಿ, ಉದ್ಯಾವರ, ದೊಡ್ಡಣಗುಡ್ಡೆಯ ಮೊಗವೀರ ಘಟಕಗಳಲ್ಲಿ ಅಶಕ್ತರಿಗೆ ಧನಸಹಾಯ, ವೃದ್ಧಾಶ್ರಮ, ಅನಾಥಾಶ್ರಮದ ಮಕ್ಕಳಿಗೆ, ಶಾಲಾ ಮಕ್ಕಳಿಗೆ ಸಿಹಿತಿಂಡಿ ಹಾಗೂ ಊಟ, ದಿನಸಿ ಸಾಮಗ್ರಿ, ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಅಂಗವಿಕಲ ಸ್ವ ಉದ್ಯೋಗಿಗೆ ಗೌರವ, ನೀಲಾವರದ ಗೋಶಾಲೆಗೆ ಹುಲ್ಲು ನೀಡಲಾಯಿತು.

ಯುವ ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ಶಿವರಾಮ ಕೆ.ಎಂ., ಮಾಜಿ ಅಧ್ಯಕ್ಷ ಸಂಜೀವ ಎಂ.ಎಸ್‌., ಉಪಾಧ್ಯಕ್ಷರಾದ ಅಶೋಕ್‌ ತೆಕ್ಕಟ್ಟೆ, ಜಯಂತ್‌ಅಮೀನ್‌, ಮಂಜುನಾಥ ಸುವರ್ಣ, ಪ್ರಧಾನ ಕಾರ್ಯದರ್ಶಿ ರವೀಶ್‌ ಎಸ್‌. ಕೊರವಡಿ, ಸಲಹಾ ಸಮಿತಿ ಸದಸ್ಯ ರಮೇಶ್‌ ವಿ. ಕುಂದರ್‌ ಕೋಟ, ಸಂಘಟನೆಯ ಸರ್ವಸದಸ್ಯರು ಉಪಸ್ಥಿತರಿದ್ದರು.

ಜಿ. ಶಂಕರ್‌ ಪ್ರೇರಕ ಶಕ್ತಿ

ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ ಮಾತನಾಡಿ, ಸಮಸ್ತರ ಒಳಿತನ್ನು ಬಯಸುವ ಡಾ| ಜಿ. ಶಂಕರ್‌ ಸಮಾಜದ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಅನಾರೋಗ್ಯ ಪೀಡಿತರ ಪಾಲಿನ ಜೀವರಕ್ಷಕ, ವಿದ್ಯಾರ್ಜನೆಗೆ ವಿದ್ಯಾಪೋಷಕ, ಮೊಗವೀರ ಯುವ ಸಂಘಟನೆಯ ಮಾರ್ಗದರ್ಶಕರಾಗಿ ಇಡೀ ಸಮಾಜವನ್ನು ಒಗ್ಗಟ್ಟಿನಲ್ಲಿ ತೆಗೆದುಕೊಂಡು ಹೋಗುವ ದೊಡ್ಡ ಪ್ರೇರಕ ಶಕ್ತಿ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.