ಜೀವ ಬಿಟ್ಟೇವು ಭೂಮಿ ನೀಡಲ : ಹಿರೇಕೆರೂರು – ರಟ್ಟಿಹಳ್ಳಿ ಬಡ ರೈತರ ಆಕ್ರೋಶ


Team Udayavani, Dec 11, 2020, 12:25 PM IST

ಜೀವ ಬಿಟ್ಟೇವು ಭೂಮಿ ನೀಡಲ : ಹಿರೇಕೆರೂರು – ರಟ್ಟಿಹಳ್ಳಿ ಬಡ ರೈತರ ಆಕ್ರೋಶ

ಹಾವೇರಿ: ಜೀವ ಬಿಡುತ್ತೇವೆ ಹೊರತು ಭೂಮಿ ನೀಡಲ್ಲ. ರೈತರಿಂದ ಸ್ವಾ ಧೀನಪಡಿಸಿಕೊಳ್ಳುತ್ತಿರುವ ಜಮೀನುಗಳಲ್ಲಿ ಯಾವುದೇ ಕಾರಣಕ್ಕೂ ಪೈಪ್‌ಲೈನ್‌ ಹಾಕಲು ಬಿಡಲ್ಲ. ಇದು ಹಿರೇಕೆರೂರು-ರಟ್ಟಿಹಳ್ಳಿ ತಾಲೂಕಿನ ನೂರಾರು ಬಡ ರೈತರ ಆಕ್ರೋಶದ ಮಾತುಗಳು…

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನೂರಾರು ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಾಗಿ ಜಿಲ್ಲೆಯ ಹಿರೇಕೆರೂರು-ರಟ್ಟಿಹಳ್ಳಿ ಭಾಗದ ರೈತರ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು,
ಕಳೆದ ಒಂದು ವಾರದಿಂದ ಭೂಸ್ವಾಧೀನ ವಿರೋಧಿಸಿ ಸಾಮಾಜಿಕ ಹೋರಾಟಗಾರ, ನ್ಯಾಯವಾದಿ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ನಡೆಸುತ್ತಿರುವ ಆಮರಣ ಉಪವಾಸ ಸತ್ಯಾಗ್ರಹ ರಾಜ್ಯದ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ : ಒತ್ತುವರಿದಾರರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

ಏನಿದು ಯೋಜನೆ:
ಉಡುಗಣಿ-ತಾಳಗುಂದ-ಹೊಸೂರು ಏತ ನೀರಾವರಿ ಯೋಜನೆಯಡಿ ಹಿರೇಕೆರೂರು ತಾಲೂಕಿನ ಚಟ್ನಳ್ಳಿ ಸಮೀಪ ತುಂಗಭದ್ರಾ ನದಿಯಿಂದ ಪೈಪ್‌ ಲೈನ್‌ ಮೂಲಕ ನೀರನ್ನು ಶಿಕಾರಿಪುರ ತಾಲೂಕಿನ ನೂರಾರು ಕೆರೆಗಳನ್ನು ತುಂಬಿಸುವ ಯೋಜನೆಯನ್ನು ನೀರಾವರಿ ನಿಗಮದಿಂದ ಅನುಷ್ಠಾನ ಗೊಳಿಸಲಾಗುತ್ತಿದೆ. ಯೋಜನೆಯನ್ನು ಏಳು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಯಡಿಯೂಪ್ಪನವರ ತವರು ಕ್ಷೇತ್ರವಾಗಿದ್ದರಿಂದ ಸರ್ಕಾರ ಈ ಯೋಜನೆಗೆ ಹೆಚ್ಚಿನ ಆಸಕ್ತಿ ವಹಿಸಿ
ಪೈಪ್‌ಲೈನ್‌ ಕಾಮಗಾರಿಯೂ ಆರಂಭಗೊಂಡಿದೆ.

ಏಳನೇ ಹಂತವಾಗಿ ಚಟ್ನಳ್ಳಿ ಸಮೀಪ ಪೈಪ್‌ಲೈನ್‌ ಹಾಕುವ ಕಾರ್ಯ ಆರಂಭಿಸಲಾಗಿದೆ. ಆದರೆ ಈ ಯೋಜನೆಗೆ ಬಡ ರೈತರ ಜಮೀನುಗಳನ್ನು ಭೂಸ್ವಾಧೀನ ಮಾಡಿಕೊಳ್ಳುತ್ತಿರುವುಕ್ಕೆ ವಿರೋಧ ವ್ಯಕ್ತಪಡಿಸಿ ನ್ಯಾಯವಾದಿ ಬಿ.ಡಿ.ಹಿರೇಮಠ ಅವರು ಒಂದು
ವಾರದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ರೈತರ ವಿರೋಧಕ್ಕೆ ಕಾರಣ: ಈ ಯೋಜನೆಗಾಗಿ ರಟ್ಟಿಹಳ್ಳಿ ಮತ್ತು ಹಿರೇಕೆರೂರು ತಾಲೂಕುಗಳ 18 ಗ್ರಾಮಗಳ 1292 ರೈತರ ಜಮೀನು ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಸುಮಾರು 18 ಕಿಲೋ ಮೀಟರ್‌ವರೆಗೆ 5 ಅಡಿ ವ್ಯಾಸದ ಪೈಪ್‌ ಲೈನ್‌ ಅಳವಡಿಸುವ ಕಾಮಗಾರಿ ಆರಂಭವಾಗಿದೆ. ಜೊತೆಗೆ ಪೈಪ್‌ಲೈನ್‌ಗುಂಟ 30 ಅಡಿ ಸರ್ವೀಸ್‌ ರಸ್ತೆ ಮಾಡಲಾಗುತ್ತಿದೆ. ಇದರಿಂದ 500ಕ್ಕೂ ಹೆಚ್ಚು
ಎಕರೆ ಫಲವತ್ತಾದ ಜಮೀನು ಹೋಗಲಿದೆ. ಈ ಹಿಂದೆ ತುಂಗಾ ಮೇಲ್ದಂಡೆ ಯೋಜನೆಗಾಗಿ ಸಾವಿರಾರು ರೈತರು ಭೂಮಿ ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಅನೇಕ ರೈತರಿಗೆ ಪರಿಹಾರ ಸಿಕ್ಕಿಲ್ಲ. ಹೀಗಿರುವಾಗ ಮತ್ತೂಂದು ಯೋಜನೆಗೆ ಜಮೀನು
ವಶಪಡಿಸಿಕೊಂಡರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ ಎಂಬ ಆತಂಕ ರೈತರಲ್ಲಿ ಮನೆ ಮಾಡಿದೆ. ಈ ಹಿನ್ನೆಲೆ ಒಂದು ವಾರದಿಂದ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ತೀವ್ರಗೊಂಡ ಹೋರಾಟ: ಬಡ ರೈತರ ಜಮೀನು ಭೂಸ್ವಾಧೀನ ವಿರೋಧಿಸಿ ಕಳೆದ ಒಂದು ವಾರದಿಂದ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಬಿ.ಡಿ.ಹಿರೇಮಠ ಅವರ ಮನವೊಲಿಸುವಲ್ಲಿ
ಜಿಲ್ಲಾಡಳಿತ ವಿಫಲಗೊಂಡಿದೆ. ಪ್ರಾಣ ಹೋದರೂ ರೈತರ ಜಮೀನುಗಳ ಭೂಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಹಿರೇಮಠ ಪಟ್ಟು ಹಿಡಿದಿದ್ದಾರೆ. ಅಲ್ಲದೇ, ಈ ಯೋಜನೆಯಿಂದ ಜಿಲ್ಲೆಯಲ್ಲಿ ಭವಿಷ್ಯದ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಆತಂಕ ರೈತರನ್ನು ಕಾಡುತ್ತಿದ್ದು, ಭೂಸ್ವಾಧೀನದೊಂದಿಗೆ ಯೋಜನೆಯನ್ನೇ ಸ್ಥಗಿತಗೊಳಿಸಬೇಕು ಎಂಬ
ಒತ್ತಾಯವೂ ರೈತರಿಂದ ಕೇಳಿಬುತ್ತಿದೆ.

– ವೀರೇಶ ಮಡ್ಲುರು

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.