ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

ಬಂಟ್ವಾಳ ರೈಲು ನಿಲ್ದಾಣದಿಂದ ಬಿ.ಸಿ.ರೋಡ್‌ ಸಮೀಪ ಸಂಪರ್ಕ

Team Udayavani, Oct 20, 2021, 5:13 AM IST

ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

ಬಂಟ್ವಾಳ: ಬಂಟ್ವಾಳ ರೈಲ್ವೇ ನಿಲ್ದಾಣನಿಂದ ನಗರಕ್ಕೆ ಸಮೀಪ ಸಂಪರ್ಕ ಕಲ್ಪಿಸುವ ಆದರ್ಶ ರೈಲು ನಿಲ್ದಾಣ ಯೋಜನೆಯ ಮೂಲಕ ನಡೆಯಬೇಕಿದ್ದ ಫೂಟ್ ಬ್ರಿಡ್ಜ್ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಯೋಜನೆಯ ಇತರ ಕಾಮಗಾರಿಗಳು ಬಹುತೇಕ ಅಂತಿಮ ಹಂತದಲ್ಲಿ ಇದೆ.

ಕಳೆದ ಕೆಲವು ವರ್ಷಗಳ ಹಿಂದೆ ರೈಲ್ವೇ ಇಲಾಖೆಯಿಂದ ಆದರ್ಶ ರೈಲು ನಿಲ್ದಾಣ ಯೋಜನೆಯ ಮೂಲಕ ಬಂಟ್ವಾಳ ರೈಲು ನಿಲ್ದಾಣಕ್ಕೆ 5.56 ಕೋ.ರೂ. ಮಂಜೂರುಗೊಂಡು ಕಾಮಗಾರಿ ಆರಂಭಗೊಂಡಿತ್ತು. ನಿರೀಕ್ಷೆಯಂತೆ ಕಾಮಗಾರಿ ನಡೆದಿದ್ದರೆ 2020ರ ಫೆಬ್ರವರಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ ಕೊರೊನಾ ಕಾರಣದಿಂದ ನಿಂತ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ.

2019ರಲ್ಲಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ್ದ ದ.ಕ.ಸಂಸದ ನಳಿನ್‌ಕುಮಾರ್‌ ಕಟೀಲು ಅವರು ನಿಲ್ದಾಣದ ಕಾಮಗಾರಿಯನ್ನು ಪರಿಶೀಲಿಸಿ ವೇಗವಾಗಿ ಮುಗಿಸುವಂತೆ ಸೂಚನೆಯನ್ನೂ ನೀಡಿದ್ದರು. ಒಟ್ಟು 2 ಫ್ಲ್ಯಾಟ್ ಫಾರ್ಮ್ ಗಳನ್ನು ಒಳಗೊಂಡಿರುವ ನಿಲ್ದಾಣದಲ್ಲಿ ಫ್ಲ್ಯಾಟ್ ಫಾರ್ಮ್ ಒಂದಕ್ಕೆ 1.57 ಕೋ.ರೂ. ಹಾಗೂ ಫ್ಲ್ಯಾಟ್ ಫಾರ್ಮ್ ಎರಡಕ್ಕೆ 2.60 ಕೋ.ರೂ. ಅನುದಾನ ಮಂಜೂರಾಗಿರುವ ಕುರಿತು ಸಂಸದರು ಮಾಹಿತಿ ನೀಡಿದ್ದರು.

ಬಿ.ಸಿ.ರೋಡ್‌ ತಲುಪಲು ಸಮೀಪದ ವ್ಯವಸ್ಥೆ
ಪ್ರಸ್ತುತ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರವೇಶಿಸಬೇಕಾದರೆ ಬಿ.ಸಿ.ರೋಡ್‌ ನಗರ ಕೇಂದ್ರದಿಂದ ಪಾಣೆಮಂಗಳೂರು ರಸ್ತೆಯ ಮೂಲಕ ಸಾಗಿ ನಿಲ್ದಾಣ ಸೇರಬೇಕಿದೆ. ಆದರೆ ಇದು ಕೊಂಚ ದೂರದ ವ್ಯವಸ್ಥೆಯಾದ ಕಾರಣ ಜನರು ನಗರ ಕೇಂದ್ರದಿಂದ ಆಟೋ ರಿಕ್ಷಾ ಅಥವಾ ಇತರ ವಾಹನಗಳನ್ನು ಬಳಸಿ ಸಾಗಬೇಕಿದೆ.

ಇದನ್ನೂ ಓದಿ:ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ

ಪ್ರಯಾಣಿಕರು ನಿಲ್ದಾಣದಿಂದ ಇನ್ನೊಂದು ಭಾಗಕ್ಕೆ ನಡೆದುಕೊಂಡು ಹೋಗುವ ವ್ಯವಸ್ಥೆ ಇದ್ದರೆ ಕೈಕುಂಜೆ ಮಾರ್ಗವಾಗಿ ಬಿ.ಸಿ.ರೋಡ್‌ ನಗರವನ್ನು ಸುಲಭವಾಗಿ ತಲುಪಬಹುದಾಗಿದೆ. ಹೀಗಾಗಿ ಫ‌ೂಟ್‌ ಬ್ರಿಡ್ಜ್ ಬೇಡಿಕೆಯ ಹಿನ್ನೆಲೆಯಲ್ಲಿ ಸುಮಾರು 78 ಲಕ್ಷ ರೂ.ಗಳಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಆದರೆ ಅದು ಇನ್ನೂ ಅನುಷ್ಠಾನ ಹಂತದಲ್ಲೇ ಇರುವ ಕಾರಣ ಹತ್ತಿರದ ನಗರ ಸಂಪರ್ಕ ವ್ಯವಸ್ಥೆ ಇನ್ನೂ ಈಡೇರಿಲ್ಲ. ರೈಲು ನಿಲ್ದಾಣದಿಂದ ಕೈಕುಂಜೆ ಭಾಗಕ್ಕೆ ಬರುವವರು ಪ್ರಸ್ತುತ ರೈಲ್ವೇ ಹಳಿಯನ್ನು ದಾಟಿ ಬರುತ್ತಿದ್ದು, ರಸ್ತೆಯ ಮಾಹಿತಿ ಇರುವ ಪ್ರಯಾಣಿಕರು ಕೂಡ ಹಳಿ ದಾಟಿ ಬಿ.ಸಿ.ರೋಡ್‌ಗೆ ಬರುತ್ತಿದ್ದಾರೆ. ಆದರೆ ಹಳಿ ದಾಟುವುದು ಬಹಳ ತ್ರಾಸದಾಯಕವಾಗಿರುವುದರಿಂದ ಫ‌ೂಟ್‌ ಬ್ರಿಡ್ಜ್ ನಿರ್ಮಾಣ ಗೊಂಡರೆ ಹಳಿದಾಟುವುದಕ್ಕೆ ಅನುಕೂಲವಾಗಲಿದೆ.

ಆದರ್ಶ ಯೋಜನೆಯ ಕಾಮಗಾರಿಗಳೇನು?
ಆದರ್ಶ ನಿಲ್ದಾಣ ಯೋಜನೆಯ ಮೂಲಕ ಫ್ಲ್ಯಾಟ್ ಫಾರ್ಮ್ ಮೇಲ್ಛಾವಣಿ, ವಿದ್ಯುದ್ದೀಪ, ಪ್ರಯಾಣಿಕರಿಗೆ ಆಸನಗಳ ವ್ಯವಸ್ಥೆ, ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕ, ಅಂಗವಿಕಲರಿಗೆ ವಿಶೇಷ ಶೌಚಗೃಹ, ಹೊಸ ಶೌಚಾಲಯ ಕಾಂಪ್ಲೆಕ್ಸ್‌ ರಚನೆ, ಫ್ಲ್ಯಾಟ್ ಫಾರ್ಮ್ ಸುತ್ತಲೂ ಆವರಣಗೋಡೆ ನಿರ್ಮಾಣ, ಫ್ಲ್ಯಾಟ್ ಫಾರ್ಮ್ ನಲ್ಲಿ ಬೆಂಚು, ರೈಲ್ವೇ ಭದ್ರತೆ ವ್ಯವಸ್ಥೆ ಗಟ್ಟಿಗೊಳಿಸುವುದು, ಕಿತ್ತು ಹೋಗಿರುವ ಶೀಟ್‌ಗಳನ್ನು ಮತ್ತೆ ಹಾಕಿಸುವುದು, ರೈಲು ನಿಲ್ದಾಣದಲ್ಲಿ ಸಮರ್ಪಕವಾಗಿ ಸಿಸಿ ಕೆಮರಾ ಅಳವಡಿಸುವುದು ಮೊದಲಾದ ಕಾಮಗಾರಿಗಳು ನಡೆಯಬೇಕಿದೆ. ಇವುಗಳಲ್ಲಿ ಬಹುತೇಕ ಕಾಮಗಾರಿಗಳು ಅಂತಿಮ ಹಂತದಲ್ಲಿವೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.