![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2024, 1:12 AM IST
ಶಿಮ್ಲಾ: ಆರ್ಥಿಕ ಬಿಕ್ಕಟ್ಟು ಹಾಗೂ ಸಾಲದಿಂದ ನಲುಗುತ್ತಿರುವ ಹಿಮಾಚಲ ಪ್ರದೇಶ ಸರಕಾರಕ್ಕೆ ಸಾಲದ ಹೊರೆಯಿಂದ ಹೊರಬರುವ ದಾರಿಯೆಂಬಂತೆ, ನಷ್ಟದಲ್ಲಿರುವ 18 ಸರಕಾರಿ ಸ್ವಾಮ್ಯದ ಹೊಟೇಲ್ಗಳನ್ನು ಮುಚ್ಚುವಂತೆ ರಾಜ್ಯ ಹೈಕೋರ್ಟ್ ಸೂಚಿಸಿದೆ. ದಿಲ್ಲಿಯಲ್ಲಿರುವ ಹಿಮಾಚಲ ಭವನವನ್ನು ಮುಟ್ಟುಗೋಲು ಹಾಕುವ ಆದೇಶ ಹೊರಬಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಹಿಮಾಚಲ ಪ್ರದೇಶ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹಣಕಾಸು ಅಸಮರ್ಪಕ ನಿರ್ವಹಣೆ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಜೈ ಕೃಷ್ಣ ಮೆಹ್ತಾ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, “ದಿ ಪ್ಯಾಲೇಸ್, ಗೀತಾಂಜಲಿ ಸೇರಿದಂತೆ 18 ಹೊಟೇಲ್ಗಳಿಗೆ ಜನರೇ ಬರುತ್ತಿಲ್ಲ. ಇವುಗಳು ಬಿಳಿಯಾನೆಗಳಿದ್ದಂತೆ. ಇವುಗಳ ನಿರ್ವಹಣೆಯಿಂದ ಸರಕಾರದ ಬೊಕ್ಕಸಕ್ಕೆ ಮತ್ತಷ್ಟು ಹೊರೆಯಾಗಲಿದೆ. ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೂಡ ಸರಕಾರಕ್ಕೆ ಹಲವು ಅವಕಾಶಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಅವುಗಳನ್ನು ಮುಚ್ಚುವುದೇ ಉತ್ತಮ’ ಎಂದು ಅಭಿಪ್ರಾಯಪಟ್ಟಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.