![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, May 7, 2024, 1:33 PM IST
ಬೆಂಗಳೂರು: ಶೀಲ ಶಂಕಿಸಿ ಪತಿಯೊಬ್ಬ ಪತ್ನಿಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈಯಲು ಯತ್ನಿಸಿರುವ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ತಿಂಡ್ಲು ಸರ್ಕಲ್ ನಿವಾಸಿ ದೀಪಿಕಾ (28) ಹಲ್ಲೆಗೊಳಗಾದ ಮಹಿಳೆ. ಆಕೆಯ ಪತಿ ಅನಿಲ್ (30) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಅನಿಲ್ ಮತ್ತು ದೀಪಿಕಾ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಅನಿಲ್ ಪೇಟಿಂಗ್ ಕೆಲಸ ಮಾಡುತ್ತಿದ್ದ. ದೀಪಿಕಾ ಮನೆ ಕೆಲಸಕ್ಕೆ ಹೋಗುತ್ತಿದ್ದರು. ಈ ಮಧ್ಯೆ ಪತ್ನಿಯ ಶೀಲ ಶಂಕಿಸಿ ಆರೋಪಿ ಪ್ರತಿದಿನ ಗಲಾಟೆ ಮಾಡುತ್ತಿದ್ದ.
ಭಾನುವಾರ ರಾತ್ರಿ ಕೂಡ ದಂಪತಿ ನಡುವೆ ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ಅದು ವಿಕೋಪಕ್ಕೆ ಹೋದಾಗ, ಮದ್ಯದ ಅಮಲಿನಲ್ಲಿದ್ದ ಆರೋಪಿ, ಆಕೆಯ ಮೈಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಪರಿಣಾಮ ಆಕೆಯ ತಲೆ, ಹೊಟ್ಟೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ.
ಕೃತ್ಯ ಎಸಗಿದ ಬಳಿಕ ಆರೋಪಿ ರಾತ್ರಿ ಮಧುಗಿರಿಗೆ ಪರಾರಿಯಾಗಿದ್ದ. ಇತ್ತ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೀಪಿಕಾರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೀಪಿಕಾ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮತ್ತೂಂದೆಡೆ ಪ್ರಕರಣ ದಾಖಲಿಸಿಕೊಂಡು ಸೋಮವಾರ ಮುಂಜಾನೆಯೇ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
You seem to have an Ad Blocker on.
To continue reading, please turn it off or whitelist Udayavani.