Mangaluru ವಿವಾಹ ನಿರಾಕರಿಸಿದ್ದ ಪ್ರಿಯತಮೆಯ ಹ*ತ್ಯೆ: ಅಪರಾಧಿಗೆ ಜೀವಾವಧಿ ಸಜೆ


Team Udayavani, Sep 5, 2024, 7:20 AM IST

Mangaluru ವಿವಾಹ ನಿರಾಕರಿಸಿದ್ದ ಪ್ರಿಯತಮೆಯ ಹತ್ಯೆ: ಅಪರಾಧಿಗೆ ಜೀವಾವಧಿ ಸಜೆ

ಮಂಗಳೂರು: ವಿವಾಹಕ್ಕೆ ನಿರಾಕರಿಸಿದ್ದ ಪ್ರಿಯತಮೆಯನ್ನು ಕೊಲೆಗೈದು ಆಕೆಯ ಮೊಬೈಲ್‌, ಎಟಿಎಂ ಕಾರ್ಡ್‌ ಸೊತ್ತುಗಳೊಂದಿಗೆ ಪರಾರಿಯಾಗಿದ್ದ ಯುವಕನಿಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಂಡಾ ನಿವಾಸಿ ಸಂದೀಪ್‌ ರಾಥೋಡ್‌ (23) ಶಿಕ್ಷೆಗೊಳಗಾದ ಅಪರಾಧಿ.

ಪ್ರಕರಣದ ಹಿನ್ನೆಲೆ
ಸಂದೀಪ್‌ ರಾಥೋಡ್‌ ಮತ್ತು ಮೃತ ಅಂಜನಾ ವಸಿಷ್ಠ 2018ರಲ್ಲಿ ಫೇಸ್‌ಬುಕ್‌ ಮೂಲಕ ಪರಿಚಯವಾಗಿದ್ದರು. ಬಳಿಕ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ. ಇಬ್ಬರ ನಡುವೆ ವಿವಾಹದ ಪ್ರಸ್ತಾಪ ಬಂದಿದ್ದು, ಉದ್ಯೋಗ ಸಿಕ್ಕಿದ ಬಳಿಕ ಮದುವೆಯಾಗುವ ಯೋಜನೆ ರೂಪಿಸಿದ್ದರು. ಈ ನಡುವೆ ರಾಥೋಡ್‌ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗೆ ಲಿಖಿತ ಪರೀಕ್ಷೆಯ ಪೂರ್ವ ತಯಾರಿಗೆ ಮಂಗಳೂರಿಗೆ ಬಂದಿದ್ದ. ತಾವಿಬ್ಬರು ಗಂಡ-ಹೆಂಡತಿ ಎಂದು ಮನೆ ಮಾಲಕರಿಗೆ ನಂಬಿಸಿ ಅತ್ತಾವರ 6ನೇ ಕ್ರಾಸ್‌ನಲ್ಲಿರುವ ಪಾಯಿಸ್‌ ಕಾಟೇಜ್‌ನ ಮೊದಲ ಮಹಡಿಯಲ್ಲಿ ಅಂಜನಾ ಜತೆ ಉಳಿದುಕೊಂಡಿದ್ದ.

“ತನ್ನನ್ನು ಮರೆತು ಬಿಡು’ ಎಂದಿದ್ದಕ್ಕೆ ಹತ್ಯೆ!
ಅಂಜನಾ ಊರಿಗೆ ತೆರಳಿದ್ದ ಸಂದರ್ಭದಲ್ಲಿ ಆಕೆಯ ಮನೆಯವರು ಆಕೆಯ ವಿವಾಹಕ್ಕೆ ನಿರ್ಧರಿಸಿ ಹುಡುಗನನ್ನು ತೋರಿಸಿದ್ದರು. ತಂದೆ ತಾಯಿಯ ಆಸೆಯಂತೆ ಅವನೊಂದಿಗೆ ವಿವಾಹವಾಗಲು ಅಂಜನಾ ಒಪ್ಪಿಕೊಂಡಿದ್ದಳು. ಈ ವಿಚಾರವನ್ನು ಸಂದೀಪ್‌ ರಾಥೋಡ್‌ಗೆ ತಿಳಿಸಿ, ತನ್ನನ್ನು ಮರೆತು ಬಿಡುವಂತೆ ಹೇಳಿದ್ದಳು.

ಇದರಿಂದ ಕೋಪಗೊಂಡ ಆರೋಪಿ ರಾಥೋಡ್‌ ಆಕೆಯನ್ನು 2019ರ ಜೂ. 7ರಂದು ಪುಸಲಾಯಿಸಿ ಅತ್ತಾವರದ ತಾನು ತಂಗಿದ್ದ ಮನೆಗೆ ಕರೆಸಿ, ಆಕೆಯೊಂದಿಗೆ ಜಗಳವಾಡಿ ಟಿವಿ ಕೇಬಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದ.

ಎಟಿಎಂ ಕಾರ್ಡ್‌, ಮೊಬೈಲ್‌ ದೋಚಿದ್ದ
ಅಂಜನಾರನ್ನು ಕೊಲೆ ಮಾಡಿದ ಬಳಿಕ ಮೃತಳ ಎಟಿಎಂ ಕಾರ್ಡ್‌ ಹಾಗೂ ಮೊಬೈಲ್‌ ಕಳವು ಮಾಡಿದ್ದ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯಿರುವ ಬ್ಯಾಂಕ್‌ನಿಂದ 15 ಸಾವಿ ರೂ. ಹಣವನ್ನು ವಿತ್‌ಡ್ರಾ ಮಾಡಿಕೊಂಡು ವಿಜಯಪುರ ಸಿಂದಗಿಯ ಹೊಟೇಲೊಂದರಲ್ಲಿ ಉಳಿದುಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ಕರೆತಂದು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯ ಆಗಿನ ಪಿಎಸ್‌ಐ ರಾಜೇಂದ್ರ ಬಿ. ಹಾಗೂ ಇನ್‌ಸ್ಪೆಕ್ಟರ್‌ ಎಂ. ಕುಮಾರ್‌ ಆರಾಧ್ಯ ಪ್ರಮುಖ ತನಿಖೆ ನಡೆಸಿ, ಇನ್‌ಸ್ಪೆಕ್ಟರ್‌ ಲೋಕೇಶ್‌ ಎ.ಸಿ. ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

45 ಸಾಕ್ಷಗಳು, 100 ದಾಖಲೆಗಳು
ಈ ಪ್ರಕರಣದಲ್ಲಿ ಒಟ್ಟು 45 ಸಾಕ್ಷಿದಾರರನ್ನು ವಿಚಾರಿಸಲಾಗಿತ್ತು. 100 ದಾಖಲೆಗಳನ್ನು ಗುರುತಿಸಲಾಗಿತ್ತು. ಸಂಪೂರ್ಣ ವಿಚಾರಣೆಯ ಬಳಿಕ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಅವರು ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆ ಕಲಂ 302ರ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 3 ತಿಂಗಳ ಸಾದಾ ಸಜೆ, ಭಾರತೀಯ ದಂಡ ಸಂಹಿತೆ ಕಲಂ 380ರ ಅಪರಾಧಕ್ಕೆ 3 ತಿಂಗಳ ಸಜೆ ಹಾಗೂ 1 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 15 ದಿನಗಳ ಸಾದ ಸಜೆ, ಭಾರತೀಯ ದಂಡ ಸಂಹಿತೆ ಕಲಂ 403ರ ಅಪರಾಧಕ್ಕೆ 3 ತಿಂಗಳ ಸಜೆ ಮತ್ತು 500 ರೂ. ದಂಡ, ತಂಡ ತೆರಳು ತಪ್ಪಿದರೆ 15 ದಿನಗಳ ಸಾದ ಸಜೆ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಂತ್ರಸ್ತರ ಪರಿಹಾರ ಯೋಜನೆಯಡಿ ಮೃತಳ ಮನೆಯವರಿಗೆ ಪರಿಹಾರ ನೀಡಬೇಕೆಂದು ನಿರ್ದೇಶಿಸಿ ತೀರ್ಪು ನೀಡಿದೆ.

ಸರಕಾರದ ಪರ ನಿವೃತ್ತ ಸರಕಾರಿ ಅಭಿಯೋಜಕ ಬಿ. ಶೇಖರ್‌ ಶೆಟ್ಟಿ ಸಾಕ್ಷಿ ವಿಚಾರಣೆ ನಡೆಸಿದ್ದಾರೆ. ಸರಕಾರಿ ಅಭಿಯೋಜಕಿ ಜುಡಿತ್‌ ಓಲ್ಗಾ ಮಾರ್ಗರೆಟ್‌ ಕ್ರಾಸ್ತಾ ಹೆಚ್ಚುವರಿ ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.