ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ: ಯೋಜನೆಗಳಲ್ಲಿ ಶೇ.100ರಷ್ಟು ಪ್ರಗತಿ
Team Udayavani, Jul 15, 2019, 5:04 AM IST
ಉಡುಪಿ: ಜಿಲ್ಲೆಯ ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ 2018-19ನೇ ಸಾಲಿನ ಸ್ವಯಂ ಉದ್ಯೋಗ, ಶ್ರಮಶಕ್ತಿ ಯೋಜನೆ, ಗಂಗಾ ಕಲ್ಯಾಣ ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದೆ. ನಿಗಮ ನೀಡುವ ಗುರಿಗಿಂತ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆ ದುಪ್ಪಟ್ಟಾಗಿದೆ.
ಸ್ವಯಂ ಉದ್ಯೋಗ ಯೋಜನೆ
ಜಿಲ್ಲೆಯಲ್ಲಿ “ಸ್ವಯಂ ಉದ್ಯೋಗ’ ಯೋಜನೆಯಡಿ ನಿಗಮಕ್ಕೆ ನೀಡುವ ಗುರಿಗಿಂತ ಮೂರುಪಟ್ಟು ಅಧಿಕ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. 2018-19ರಲ್ಲಿ 59 ಭೌತಿಕ ಗುರಿ, 52.90 ಲ.ರೂ. ಆರ್ಥಿಕ ಗುರಿ ನೀಡಲಾಗಿತ್ತು. 2.37 ಕೊ.ರೂ. ಮೊತ್ತದ 172 ಅರ್ಜಿಗಳು ಸ್ವೀಕೃತಗೊಂಡಿವೆ. ಈ ಯೋಜನೆಯಡಿಯಲ್ಲಿ ಬ್ಯಾಂಕ್, ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ಗರಿಷ್ಠ 5 ಲ.ರೂ. ಮಿತಿ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. 5 ಲ.ರೂ.ಗೆ ಶೇ. 33ರಷ್ಟು ಹಾಗೂ 1 ಲ.ರೂ. ಮಿತಿಯೊಳಗಿರುವ ಯೋಜನೆಗೆ ಶೇ. 50ರಷ್ಟು ಸಹಾಯಧನ ನಿಗಮ ನೀಡಲಿದೆ.
ಶ್ರಮಶಕ್ತಿ; ಸ್ವೀಕೃತ ಅರ್ಜಿ 5,908
ನಿಗಮದಿಂದ ಶ್ರಮಶಕ್ತಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಜಿಲ್ಲೆಗೆ ಕೇವಲ 77 ಭೌತಿಕ ಹಾಗೂ 38.35 ಲ.ರೂ. ಆರ್ಥಿಕ ಗುರಿ ನೀಡಲಾಗಿದೆ. ಆದರೆ 29.54 ಕೊ.ರೂ. ಮೊತ್ತದ 5,908 ಅರ್ಜಿಗಳು ಸ್ವೀಕೃತಗೊಂಡಿವೆ. 2016-17ರಲ್ಲಿ 262 ಭೌತಿಕ ಹಾಗೂ ಆರ್ಥಿಕ 1.31ಕೋ. ಗುರಿ ನಿಗದಿ ಪಡಿಸಿದ್ದು, ಆದರೆ ಸಲ್ಲಿಕೆಯಾದ ಅರ್ಜಿಗಳ ಸಂಖ್ಯೆ 673. ಈ ಯೋಜನೆಯಡಿ 50,000 ರೂ. ಮೊತ್ತವನ್ನು ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ನಿಗದಿತ ಸಮಯದೊಳಗೆ ಸಾಲ ಮರುಪಾವತಿ ಮಾಡಿದರೆ ಅರ್ಜಿದಾರರಿಗೆ ಶೇ.50ರಷ್ಟು ಬ್ಯಾಕ್ ಎಂಡ್ ಸಹಾಯಧನ ಸಿಗಲಿದೆ.
ಗಂಗಾ ಕಲ್ಯಾಣ ಯೋಜನೆ
ಈ ಯೋಜನೆಯಡಿ 2018-19ನೇ ಸಾಲಿನಲ್ಲಿ ನಿಗಮಕ್ಕೆ ಭೌತಿಕ 41, ಆರ್ಥಿಕ 82 ಲ.ರೂ., ಗುರಿ ನೀಡಿದ್ದು, 43 ಅರ್ಜಿ ಸ್ವೀಕೃತವಾಗಿದೆ. 2016-17ರಲ್ಲಿ 58 ಭೌತಿಕ ಹಾಗೂ ಆರ್ಥಿಕ 87 ಕೋ. ರೂ. ಗುರಿ ನಿಗದಿಪಡಿಸಿದ್ದು, 58 ಅರ್ಜಿಗಳು ಸಲ್ಲಿಕೆಯಾಗಿವೆೆ. ಈ ಯೋಜನೆಯಡಿ ಕೃಷಿ ಭೂಮಿ ಹೊಂದಿರುವ ರೈತರಿಗೆ ಕೊಳವೆ ಬಾವಿ, ಪಂಪ್, ವಿದ್ಯುದೀಕರಣಕ್ಕೆ, ಬಾವಿ ನಿರ್ಮಿಸಲು ಆರ್ಥಿಕ ನೆರವು ನೀಡಲಾಗುತ್ತದೆ.
ಸ್ಪಂದನೆ ಉತ್ತಮವಾಗಿದೆ ಯಾಕೆ?
ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಶ್ರಮಶಕ್ತಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ಹಾಗೂ ಗರಿಷ್ಠ ಮಿತಿಯಲ್ಲಿ ಸಹಾಯಧನ ನೀಡಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಯುವ ಜನರು ಸ್ವ ಉದ್ಯೋಗ ಪ್ರಾರಂಭಿಸಲು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ.
ಫಲಾನುಭವಿಗಳ ಆಯ್ಕೆ
ಯೋಜನೆಗಳಿಗೆ ಉತ್ತಮ ಸ್ಪಂದನೆ ಇದೆ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
-ಮುಹಮ್ಮದ್ ಶಾಫಾÌನ್, ಅಲ್ಪಸಂಖ್ಯಾಕ ನಿಗಮದ ವ್ಯವಸ್ಥಾಪಕ, ಉಡುಪಿ ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.