![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Dec 31, 2022, 2:45 PM IST
ನವದೆಹಲಿ : ಬಿಹಾರದಲ್ಲಿ ಕನಿಷ್ಠ 80 ಜನರ ಪ್ರಾಣಕ್ಕೆ ಸಂಚಕಾರ ತಂದಿದ್ದ ಕಳ್ಳ ಭಟ್ಟಿ ದುರಂತಕ್ಕೆ ಕಾರಣವಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ದುರಂತದ ಪ್ರಮುಖ ಆರೋಪಿ ಬಿಹಾರದ ಸರನ್ ಜಿಲ್ಲೆಯ ನಿವಾಸಿ ರಾಮ್ ಬಾಬು ಮಹ್ತೋ ನನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ
ನೈಋತ್ಯ ದೆಹಲಿಯ ದ್ವಾರಕಾದಲ್ಲಿ ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮದ್ಯ ಮಾರಾಟವನ್ನು ನಿಷೇಧಿಸಲಾಗಿರುವ ಬಿಹಾರದ ಸರನ್ ಜಿಲ್ಲೆಯಲ್ಲಿ ತಿಂಗಳ ಆರಂಭದಲ್ಲಿ ನಕಲಿ ಮದ್ಯದಿಂದ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದರು. ಪೊಲೀಸರು ಅಕ್ರಮ ಮದ್ಯ ಪೂರೈಕೆಗೆ ಸಂಬಂಧಿಸಿ ಏಳು ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.
ಮಹತೋ ದೆಹಲಿಯಲ್ಲಿ ಎಲ್ಲೋ ಅಡಗಿಕೊಂಡಿದ್ದಾನೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
You seem to have an Ad Blocker on.
To continue reading, please turn it off or whitelist Udayavani.