Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ
Team Udayavani, Oct 12, 2024, 5:51 PM IST
ಬರೋಡಾ: ಟೀಂ ಇಂಡಿಯಾ ಪರ ಇನ್ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಡಿದ್ದ ಆಟಗಾರ ಇದೀಗ ಐತಿಹಾಸಿಕ ರಾಜಮನೆತನದ ಉತ್ತರಾಧಿಕಾರಿಯಾಗಿದ್ದಾರೆ.
ಹೌದು, ಮಾಜಿ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಅಜಯ್ ಜಡೇಜಾ (Ajay Jadeja) ಅವರನ್ನು ನವನಗರ (ಜಾಮ್ನಗರ) ದ ಮುಂದಿನ ಜಾಮ್ ಸಾಹೇಬ್ (Jam Saheb of Nawanagar) ಎಂದು ಘೋಷಿಸಲಾಗಿದೆ. ಇದು ಗುಜರಾತ್ನ ಗಲ್ಫ್ ಆಫ್ ಕಚ್ನ ದಕ್ಷಿಣ ತೀರದಲ್ಲಿರುವ ಐತಿಹಾಸಿಕ ಹಲಾರ್ ಪ್ರದೇಶದ ರಾಜಪ್ರಭುತ್ವದ ರಾಜ್ಯವಾಗಿದೆ. ಅಧಿಕೃತ ಹೇಳಿಕೆಯಲ್ಲಿ, ಈ ಘೋಷಣೆಯನ್ನು ನವನಗರದ ಮಹಾರಾಜ ಜಾಮ್ ಸಾಹೇಬ್ ಖಚಿತಪಡಿಸಿದ್ದಾರೆ.
ಜಡೇಜಾ ಅವರು 1992 ರಿಂದ 2000 ರ ನಡುವೆ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದರು. ಅವರು 15 ಟೆಸ್ಟ್ ಮತ್ತು 196 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದರು. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ಪತ್ರದಲ್ಲಿ, ಶತ್ರುಸಲ್ಯಸಿಂಹಜಿ ದಿಗ್ವಿಜಯ್ ಸಿಂಹಜಿ ಜಡೇಜಾ ಅವರು ಅಜಯ್ ಅವರ ಉತ್ತರಾಧಿಕಾರಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಅಜಯ್ ಜಡೇಜಾ ಅವರು ರಣಜಿ ಟ್ರೋಫಿ ಮತ್ತು ದುಲೀಪ್ ಟ್ರೋಫಿ ಹೆಸರಿಗೆ ಕಾರಣವಾದ ಕೆ ರಣಜಿತ್ಸಿಂಗ್ ಜಿ ಮತ್ತು ಕೆಎಸ್ ದುಲೀಪ್ ಸಿಂಗ್ ಜಿ ಅವರ ಸಂಬಧಿಕರು.
196 ಏಕದಿನ ಪಂದ್ಯವಾಡಿರುವ ಅಜಯ್ ಜಡೇಜಾ 5,359 ರನ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ಆಗಿದ್ದ ಜಡೇಜಾ ಆರು ಶತಕ ಮತ್ತು 30 ಅರ್ಧ ಶತಕ ಬಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hong Kong Cricket Sixes: ಟೀಂ ಇಂಡಿಯಾ ಪ್ರಕಟ; ರಾಬಿನ್ ಉತ್ತಪ್ಪ ನಾಯಕತ್ವ
IPL 2025: ಡೆಲ್ಲಿ ಕ್ಯಾಪಿಟಲ್ಸ್ ತೊರೆಯುತ್ತಾರಾ ಪಂತ್; ಕುತೂಹಲ ಕೆರಳಿಸಿದ ರಿಷಭ್ ಟ್ವೀಟ್
Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ
1st Test; ಪಾಕಿಸ್ಥಾನಕ್ಕೆ ತವರಿನಲ್ಲೇ ಶಾಕ್:ಇಂಗ್ಲೆಂಡ್ ಗೆ ಇನಿಂಗ್ಸ್ & 47 ರನ್ಗಳ ಜಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.