ಕೋವಿಡ್ ವಾರಿಯರ್ ಗೆ ಸಕಾಲಕ್ಕೆ ಸಂಬಳ ನೀಡದೆ ಶಿಕ್ಷೆ

 ಮನೆ ಬಾಡಿಗೆ, ಇಎಂಐ ಕಟ್ಟಲು ಹಣವಿಲ್ಲದೆ ಪರದಾಟ

Team Udayavani, Oct 6, 2020, 2:56 AM IST

ಕೋವಿಡ್ ವಾರಿಯರ್ಗೆ ಸಕಾಲಕ್ಕೆ ಸಂಬಳ ನೀಡದೆ ಶಿಕ್ಷೆ

ಸಾಂದರ್ಭಿಕ ಚಿತ್ರ

ಮಹಾನಗರ: ಒಂದು ದಿನವೂ ರಜೆ ಪಡೆದುಕೊಳ್ಳದೆ, ಆರು ತಿಂಗಳುಗಳಿಂದ ನಿರಂತರ ಕೊರೊನಾ ಸಂಬಂಧಿ ಸೇವೆ ಯಲ್ಲಿದ್ದ ಕೊರೊನಾ ವಾರಿಯರ್ಗಳಿಗೆ ಸರಕಾರ ಸಕಾಲಕ್ಕೆ ಸಂಬಳವನ್ನೇ ನೀಡುತ್ತಿಲ್ಲ. ಇದರಿಂದ ತಿಂಗಳಾರಂಭದಿಂದಲೇ ಮನೆ ಬಾಡಿಗೆ, ಇಎಂಐ ಸಹಿತ ಹಲವು ಆವಶ್ಯಕತೆಗಳಿಗೆ ಹಣವಿಲ್ಲದೆ ಪರದಾಟ ನಡೆಸುವ ಸ್ಥಿತಿ ಬಂದೊದಗಿದೆ.

ವೆನ್ಲಾಕ್‌ ಆಸ್ಪತ್ರೆಯಲ್ಲಿ ಕೊರೊನಾ ಸಂಬಂಧಿ ಸೇವೆಗಾಗಿ 6 ತಿಂಗಳುಗಳ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಸಿಬಂದಿ, ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬಂದಿ, ಹಿರಿಯ, ಕಿರಿಯ ಆರೋಗ್ಯ ಸಹಾಯಕರು ಸರಿಯಾಗಿ ಸಂಬಳ ಸಿಗದಿರುವುದರಿಂದ ಸಂಕಷ್ಟಕ್ಕೊಳಗಾಗಿದ್ದಾರೆ.

ಕೋವಿಡ್‌-19 ಸೋಂಕು ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಕಳೆದೈದು ತಿಂಗಳುಗಳ ಹಿಂದೆ ಸೋಂಕಿತರ ಸೇವೆಗಾಗಿ ಗುತ್ತಿಗೆ ಆಧಾರದಲ್ಲಿ ಸಿಬಂದಿ ನೇಮಿಸಿಕೊಳ್ಳಲಾಗಿತ್ತು. ಐದು ತಿಂಗಳುಗಳ ಹಿಂದೆ ಏಳು ಮಂದಿ ಮತ್ತು ಅನಂತರದಲ್ಲಿ 23 ಮಂದಿ ಸೇರಿ ಸದ್ಯ ಒಟ್ಟು 30 ಮಂದಿ ಸಿಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಸೇವೆಗೆ ತಕ್ಕಂತೆ ಸಂಬಳ ನೀಡಬೇಕಾದ ಆಸ್ಪತ್ರೆ, ತೀರಾ ತಡವಾಗಿ ನೀಡುವುದರಿಂದ ಸಿಬಂದಿ ಸಂಕಷ್ಟಕ್ಕೊಳಗಾಗಿದ್ದಾರೆ. ತಿಂಗಳ ಸಂಬಳವನ್ನೇ ನಂಬಿ ಜೀವನ ಸಾಗಿಸುತ್ತಿರುವ ಹಿರಿಯ, ಕಿರಿಯ ಆರೋಗ್ಯ ಸಹಾಯಕಿಯರಿಗೆ ಕಳೆದ ಏಳು ತಿಂಗಳುಗಳಲ್ಲಿ ಎರಡು ಬಾರಿ ಮಾತ್ರ ಸಂಬಳ ಜಮೆ ಮಾಡಲಾಗಿದೆ. ಈ ಬಾರಿ ವಿಚಾರಿಸಿದಾಗ ಸೆಪ್ಟಂಬರ್‌ ತಿಂಗಳದ್ದು ಸೇರಿ ಮುಂದಿನ ಮೂರು ತಿಂಗಳುಗಳ ಸಂಬಳ ಸದ್ಯ ಸಿಗುವುದು ಅನುಮಾನ. ಬಜೆಟ್‌ ಬಿಡುಗಡೆಯಾಗುವುದು ಇನ್ನೂ ತಡವಾಗಲಿದೆ ಎಂಬ ಉತ್ತರ ಬಂದಿದೆ.

ಯಾಕೆ ಈ ಶಿಕ್ಷೆ ?
ಮನೆ ಬಾಡಿಗೆ, ಕರೆಂಟ್‌ ಬಿಲ್‌, ಸಾಲ ಮರುಪಾವತಿ, ವಿವಿಧ ಇಎಂಐ ಸಹಿತ ತಿಂಗಳಾರಂಭದಲ್ಲೇ ದುಡ್ಡಿನ ಆವಶ್ಯಕತೆ ಇದ್ದು, ಸಂಬಳ ಸಕಾಲಕ್ಕೆ ನೀಡದೇ ಇರುವುದರಿಂದ ಒತ್ತಡದಲ್ಲೇ ಕೆಲಸ ಮಾಡಬೇಕಾದ ಅನಿವಾರ್ಯ ಸೃಷ್ಟಿಯಾ ಗಿದೆ ಎಂದು ಕೆಲವು ಸಿಬಂದಿ ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ, ಇದ್ದ ಮೂರು ಡಿಎಯನ್ನು ತೆಗೆದು ಹಾಕಲಾಗಿದೆ. 15 ಇಎಲ್‌ಗ‌ಳ ಸಂಬಳವನ್ನೂ ನೀಡಲಾಗುವುದಿಲ್ಲ ಎಂದಿದ್ದಾರೆ. ರಜೆಯನ್ನೂ ತೆಗೆದುಕೊಳ್ಳದೆ ಕೆಲಸ ಮಾಡುವವರಿಗೆ ಈ ಶಿಕ್ಷೆ ಯಾಕೆ ಎಂದು ಪ್ರಶ್ನಿಸುತ್ತಾರೆ ಸಿಬಂದಿ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬಂದಿಗೆ ಎರಡು ತಿಂಗಳುಗಳಿಂದ ಸಂಬಳವೇ ಆಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಸರಿಯಾದ ಮಾಹಿತಿ ನೀಡುವುದಿಲ್ಲ
ಎಪ್ರಿಲ್‌, ಮೇ, ಜೂನ್‌ ತಿಂಗಳ ಸಂಬಳವನ್ನು ಜೂನ್‌ನಲ್ಲಿ ನೀಡಲಾಗಿದೆ. ಜುಲೈ ತಿಂಗಳ ಸಂಬಳ ಆಗಸ್ಟ್‌ ಮಧ್ಯಭಾಗದಲ್ಲಿ ನೀಡಲಾಗಿದೆ. ಆಗಸ್ಟ್‌ ಸಂಬಳವನ್ನು ಸೆಪ್ಟಂಬರ್‌ ತಿಂಗಳಾಂತ್ಯವಾದರೂ ನೀಡಿಲ್ಲ. ಇನ್ನು ಸೆಪ್ಟಂಬರ್‌ ಸಂಬಳ ಯಾವಾಗ ಬರುತ್ತದೆ ಎನ್ನುವುದೂ ಗೊತ್ತಿಲ್ಲ ಎನ್ನುತ್ತಾರೆ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬಂದಿ. ಸಂಬಳ ಬಗ್ಗೆ ಚರ್ಚಿಸಿದರೆ ಮೈಸೂರು ವಿಭಾಗೀಯ ಕಚೇರಿಗೆ ಬರೆದು ಕಳುಹಿಸಿದ ಅನಂತರ ಪ್ರಕ್ರಿಯೆಗಳು ಶುರುವಾಗುತ್ತವೆ. ಅಲ್ಲಿಂದ ಆದೇಶ ಬರಲು ತಡವಾಗುತ್ತದೆ ಎಂಬ ಉತ್ತರವನ್ನು ಆಸ್ಪತ್ರೆ ಸಂಬಂಧಿಸಿದ ಕೆಲವು ಅಧಿಕಾರಿಗಳು ನೀಡುತ್ತಾರೆ. ಅಲ್ಲದೆ ಕೆಲವರು ಸರಿಯಾಗಿ ಮಾಹಿತಿಯನ್ನೇ ನೀಡುವುದಿಲ್ಲ ಎಂಬುದು ಸಿಬಂದಿ ಆಪಾದನೆ.

ಧೃತಿಗೆಡಬಾರದು
ಸರಕಾರಿ ವ್ಯವಸ್ಥೆಯಲ್ಲಿ ಸಂಬಳ ಎಲ್ಲರಿಗೂ ನೀಡಲಾಗುತ್ತದೆ. ಆದರೆ ಕೆಲವೊಂದು ಕಾರಣಗಳಿಂದಾಗಿ ಸ್ವಲ್ಪ ತಡವಾಗುತ್ತದೆ. ಅದಕ್ಕೆ ಯಾರೂ ಧೃತಿಗೆಡಬಾರದು. ಒಂದೆರಡು ತಿಂಗಳು ಮುಂದ ಕ್ಕೆ ಹೋದರೂ ಬಳಿಕ ಎಲ್ಲ ತಿಂಗಳಿನದ್ದು ಒಟ್ಟಿಗೇ ನೀಡಲಾಗುತ್ತದೆ. ದುಡಿತಕ್ಕೆ ಸರಿಯಾಗಿ ಸಂಬಳ ನೀಡದೇ ಇರುವುದಿಲ್ಲ.
-ಡಾ| ರಾಮಚಂದ್ರ ಬಾಯರಿ,
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.