BJP: ಕೇಂದ್ರ ನಾಯಕರು ಮಧ್ಯಪ್ರವೇಶಿಸದಿದ್ದರೆ ಪಕ್ಷ ಎರಡಾಗುತ್ತದೆ: ಈಶ್ವರಪ್ಪ ಎಚ್ಚರಿಕೆ

ಯಡಿಯೂರಪ್ಪ ಕುಟುಂಬದ ಮೇಲೆ ಕೇಂದ್ರ ನಾಯಕರಿಗೆ ಯಾಕೆ‌ ಮೋಹ?

Team Udayavani, Aug 12, 2024, 1:21 PM IST

ಕೇಂದ್ರ ನಾಯಕರು ಮಧ್ಯಪ್ರವೇಶಿಸದಿದ್ದರೆ ಪಕ್ಷ ಎರಡಾಗುತ್ತದೆ: ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಬಿಜೆಪಿಯ 12 ಜನ ಸಭೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದು ನನಗೆ ಆಘಾತವಾಗಿದೆ. ಇವರು ಸಂಘಟನೆಯಲ್ಲಿದ್ದವರು, ಪಕ್ಷವನ್ನು ಕಟ್ಟಿದ್ದಾರೆ. ಏನೇನು ನೋವು ಅನುಭವಿಸಿದ್ದಾರೆಂದು ಅವರು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆಂದು ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬೆಳಗಾವಿಯ ನಂತರ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಪಕ್ಷ ಎರಡಾಗುತ್ತದೆ. ಪ್ರತಿ ತಾಲೂಕಿನಲ್ಲಿ ಬಿಜೆಪಿ ಇಬ್ಭಾಗವಾಗುತ್ತದೆ ಎಂದರು.

ಪಕ್ಷದ ವಿಚಾರದಡಿ ಕೆಲಸ ಮಾಡಿದ್ದರೂ ಬಹಳ‌ ಜನಕ್ಕೆ ನೋವಿದೆ. ಲೋಕಸಭ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಅಧ್ಯಕ್ಷರಾನ್ನಾಗಿ ಮಾಡಿದ್ದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಯಲ್ಲಿ ಅಧಿಕಾರ ನೀಡಿದಕ್ಕೆ ಲೋಕಸಭೆಯಲ್ಲಿ 25 ರಿಂದ 17ಸ್ಥಾನಕ್ಕೆ ಇಳಿದೆವು. ಮೋದಿ ಇದ್ದು, ಪಕ್ಷ ಬಲ ಇದ್ದಾಗ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದೆವು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗದಿದ್ದರೆ ಹೇಗೆ ಎಂದು ಈಶ್ವರಪ್ಪ ಪ್ರಶ್ನೆ ಮಾಡಿದರು.

ಬಿಜೆಪಿಯಲ್ಲಿ ಹಿಂದುತ್ವವಿಲ್ಲ

ಮೋದಿ ನಮ್ಮ ನೆಚ್ಚಿನ ನಾಯಕ. ಯತ್ನಾಳ್, ಜಾರಕಿಹೊಳಿ, ಸಿದ್ದೇಶ್ವರ್ ಹೀಗೆ ಅನೇಕರು ಸಭೆ ನಡೆಸಿ ಅಸಮಾಧಾನ‌ ಹೊರ ಹಾಕಿದ್ದಾರೆ. ಯಡಿಯೂರಪ್ಪ ಕುಟುಂಬದವರ ಕೈಯಲ್ಲಿ ಪಾರ್ಟಿ ಕೊಡಲು ಕೇಂದ್ರದ ನಾಯಕರಿಗೆ ಯಾಕೆ‌ ಮೋಹ? ಸಾಮೂಹಿಕ ನಾಯಕತ್ವ ಎಂದು ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿತ್ತು. ಯಡಿಯೂರಪ್ಪ‌ ಸ್ವಜನ ಪಕ್ಷಪಾತ ಮಾಡಿದ್ದಾರೆ. ಬಿಜೆಪಿಯಲ್ಲಿ ಹಿಂದುತ್ವ ಹೊರಟು ಹೋಗಿದೆ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರದ ನಾಯಕರು ಪಾದಯಾತ್ರೆ ನಡೆಸುವವರನ್ನು ಕರೆದು ಮಾತನಾಡಿದರೆ ಪಾದಯಾತ್ರೆ ಆಗಲ್ಲ. ಪಕ್ಷ ಕಟ್ಟಿದ ನಾಯಕರನ್ನು ಮಾತನಾಡಿಸದೆ ಹೋದರೆ ಇನ್ನಷ್ಟು ಜನ ಸೇರ್ಪಡೆಯಾಗುತ್ತಾರೆ. ಬರುವಂತಹ ದಿನದಲ್ಲಿ ಸಂಘಟನೆ ಛಿದ್ರ, ಛಿದ್ರವಾಗಲಿದೆ. ಈಗ ಸಾಕಷ್ಟು ಜನ ಕೆಲಸ ಮಾಡದ ಕಾರಣಕ್ಕೆ‌ 66 ಕ್ಕೆ ಕುಸಿದಿದ್ದೇವೆ. ನಾವು ಸಮಾಜಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅಕಸ್ಮಾತ್ ಕೇಂದ್ರದ ನಾಯಕರು ಗಮನಿಸದೆ ಹೋದರೆ ಪಕ್ಷ ಕಟ್ಟಿದವರಿಗೆ ನೋವಾಗುತ್ತದೆ. ನನಗೆ ಯಾರ ಮುಲಾಜು ಇಲ್ಲ, ನನಗೆ ಪಕ್ಷ ಮುಖ್ಯ. ಪಕ್ಷದಲ್ಲಿನ ಬೆಳವಣಿಗೆಯ ಕುರಿತು ಕೇಂದ್ರದ ನಾಯಕರು ಬೇಗ ಗಮನ ಹರಿಸಬೇಕು. ಇಲ್ಲವಾದಲ್ಲಿ ತಾಲೂಕು ಮಟ್ಟದಲ್ಲಿ ಪಾರ್ಟಿ ಎರಡಾಗುತ್ತದೆ ಎಂದು ಈಶ್ವರಪ್ಪ ಎಚ್ಚರಿಸಿದರು.

ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಿದೆ. ಇದಕ್ಕೆ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದ ಈಶ್ವರಪ್ಪ, ಸಲ್ಮಾನ್ ಖುರ್ಷಿದ್ ದೇಶದ್ರೋಹ ಹೇಳಿಕೆ ನೀಡಿದ್ದಾರೆ. ಇವರನ್ನು ತಕ್ಷಣ ಬಂಧಿಸಬೇಕು. ಬಾಂಗ್ಲಾದಂತೆ ಭಾರತದಲ್ಲಿ ಅಲ್ಪ ಸಂಖ್ಯಾಂತರ ಪ್ರತಿಭಟನೆ ನಡೆಸುತ್ತಾರೆ. ನರಮೇಧ ಮಾಡುತ್ತಾರೆ ಎಂದು ಹೇಳಿದ್ದಾರೆ, ಇದು ಖಂಡನೀಯ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.