PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ಇದು ಆರೋಪವಲ್ಲ, ವ್ಯವಸ್ಥಿತ ಪಿತೂರಿ: ಪ್ರಧಾನಿ ಆಕ್ರೋಶ ; ರಾಹುಲ್‌ರದ್ದು ನಕ್ಸಲ್‌ ಮನಸ್ಥಿತಿ

Team Udayavani, Sep 20, 2024, 1:27 AM IST

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ಶ್ರೀನಗರ: ಭಾರತದ ದೇವದೇವತೆಗಳೆಂದರೆ ದೇವರು ಎಂದರ್ಥ ವಲ್ಲ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರಧಾನಿ ಮೋದಿ ಪ್ರಬಲ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಶ್ರೀನಗರದಲ್ಲಿ ಚುನಾವಣೆ ರ್‍ಯಾಲಿಯಲ್ಲಿ ಮಾತನಾ ಡಿದ ಅವರು, ಇದು ಕಾಂಗ್ರೆಸ್‌ನ ಮನಃಸ್ಥಿತಿಯನ್ನು ತೋರಿಸುತ್ತದೆ. ಆ
ಪಕ್ಷದ ವಾರಸುದಾರ ವಿದೇಶದಲ್ಲಿನಮ್ಮ ದೇವ-ದೇವತೆಯರು ದೇವ ರಲ್ಲ ಎಂದಿದ್ದಾರೆ.

ಇದು ನಮ್ಮ ಶ್ರದ್ಧೆಗೆ ಮಾಡಿದ ಅವಮಾನ. ಇದು ಇತರ ಧರ್ಮಗಳಿಂದ, ಇತರ ದೇಶಗಳಿಂದ ಆಮದು ಮಾಡಿಕೊಂಡ ನಕ್ಸಲ್‌ ಮನಸ್ಥಿತಿ’ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ನಮ್ಮ ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಕೆಲವೇ ಕೆಲವು ಮತಗಳಿಗಾಗಿ ಅತಂತ್ರಗೊಳಿಸಬಲ್ಲದು. ಅವರ ಈ ತಪ್ಪಿಗಾಗಿ ಶಿಕ್ಷೆಯಾಗಲೇಬೇಕು. ಇವನ್ನೆಲ್ಲ ಅವರು ಸುಮ್ಮನೆ, ಬಾಯ್ತಪ್ಪಿ ಹೇಳುತ್ತಿಲ್ಲ. ಇದೊಂದು ವ್ಯವಸ್ಥಿತ ಪಿತೂರಿ. ಕಾಂಗ್ರೆಸ್‌ನ ನಕ್ಸಲ್‌ ಮನಸ್ಥಿತಿ ಜಮ್ಮುವಿನ ಡೋಗ್ರಾ ಸಂಸ್ಕೃತಿಯನ್ನೂ ಅವಹೇಳನ ಮಾಡಿದೆ ಎಂದು ಮೋದಿ ಹೇಳಿದ್ದಾರೆ.

ರಾಜ್ಯಕ್ಕೆ ಸ್ಥಾನಮಾನ
ನಮ್ಮ ಸರಕಾರದ ಅವಧಿಯಲ್ಲಿ ಜಮ್ಮು- ಕಾಶ್ಮೀರದ ಯುವಕರಿಗೆ ಮತ್ತೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮತಗಳು ಬದಲಾವಣೆ ತರಲು ಸಾಧ್ಯವಿದೆ ಎಂಬ ಭರವಸೆ ಅವರಿಗೆ ಬಂದಿದೆ. ಇದೇ ಅವರ ಸಶಕ್ತೀಕರಣದಲ್ಲಿ ಮೊದಲ ಹೆಜ್ಜೆ. ಜಮು- ಕಾಶ್ಮೀರದ ಯುವಕರು ಇನ್ನೆಂದೂ ಅಸಹಾಯಕರಲ್ಲ. ಯುವಕರಿಗೆ ಉದ್ಯೋಗ ನೀಡಲು ಬಿಜೆಪಿ ದೊಡ್ಡ ಘೋಷಣೆ ಮಾಡಿದೆ. ಜತೆಗೆ ಕೇಂದ್ರಾಡಳಿತ ಪ್ರದೇಶವಾಗಿರುವ ಇಲ್ಲಿಗೆ ಮತ್ತೆ ರಾಜ್ಯದ ಸ್ಥಾನಮಾನ ನೀಡಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ಕಾಂಗ್ರೆಸ್‌, ನ್ಯಾಶನಲ್‌ ಕಾನ್ಫರೆನ್ಸ್‌, ಪಿಡಿಪಿ ಪಕ್ಷಗಳ ವಿರುದ್ಧ ಹರಿಹಾಯ್ದ ಅವರು, ಈ ಮೂರು ಪಕ್ಷಗಳು ಮತ್ತವರ ಕುಟುಂಬಗಳು ಪ್ರಜಾಪ್ರಭುತ್ವ ಮತ್ತು ಕಾಶ್ಮೀರಿತನದ ಕತ್ತುಹಿಸುಕಿವೆ. ಅವುಗಳ ಅವಧಿಯಲ್ಲಿ ಕಾಶ್ಮೀರದ ನೀರು ಪಾಕ್‌ಗೆ ಹೋಗುತ್ತಿತ್ತು. ನಮ್ಮ ಅವಧಿಯಲ್ಲಿ ಅದನ್ನು ನಿಲ್ಲಿಸಲಾಗಿದೆ. ಜಗತ್ತಿನ ಯಾವ ಶಕ್ತಿಗೂ ಜಮ್ಮುಕಾಶ್ಮೀರದಲ್ಲಿ ಮತ್ತೆ 370ನೇ ವಿಧಿಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಹುಲ್‌ ಹೇಳಿದ್ದೇನು?
ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದ ರಾಹುಲ್‌ ಗಾಂಧಿ, ದೇವತೆ ಅಂದರೆ ಒಬ್ಬನ ಅಂತರಂಗ, ಬಹಿರಂಗದ ಅಭಿವ್ಯಕ್ತಿಗಳು ಒಂದೇ ರೀತಿಯಿರುವುದು. ಅದರರ್ಥ ಆತ ಸಂಪೂರ್ಣ ಪಾರದರ್ಶಕ ಎಂದು. ಅದು ದೇವರು ಎಂಬರ್ಥವಲ್ಲ. ಒಬ್ಬ ವ್ಯಕ್ತಿ ತಾನು ನಂಬುವ, ಯೋಚಿಸುವ ಎಲ್ಲವನ್ನೂ ಹೇಳುತ್ತಾನೆಂದರೆ ಮತ್ತು ಅದನ್ನು ಬಹಿರಂಗವಾಗಿ ಅಭಿವ್ಯಕ್ತಿಸುತ್ತಾನೆಂದರೆ ಅದೇ ದೇವತೆ ಎಂದು ಹೇಳಿದ್ದರು.

ಪಾಕ್‌ಗೆ ಸಿಂಧು ನೀರು
ಕಾಂಗ್ರೆಸ್‌ ಕಾರಣ: ಮೋದಿ
ಸಿಂಧೂ ನದಿಯ ನೀರು ಪಾಕಿಸ್ಥಾನಕ್ಕೆ ಹರಿದು ಹೋಗಲು ಕಾಂಗ್ರೆಸ್‌ ಮತ್ತು ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷಗಳು ಕಾರಣ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ. ಕಟ್ರಾದಲ್ಲಿ ಮಾತನಾಡಿದ ಅವರು, 7 ದಶಕಗಳಿಂದ ನೀರು ಪಾಕಿಸ್ಥಾನಕ್ಕೆ ಹರಿದು ಹೋಗುತ್ತಿದೆ. ನದಿಗೆ ಅಣೆಕಟ್ಟು ಕಟ್ಟಿ ನೀರನ್ನು ಕಾಶ್ಮೀರದ ಜನರಿಗೆ ಸದುಪಯೋಗ ಮಾಡುವ ಧೈರ್ಯವನ್ನು ಎರಡೂ ಪಕ್ಷಗಳು ಮಾಡಲಿಲ್ಲ ಎಂದು ದೂರಿದರು.

ಮೋದಿ ಹೇಳಿದ್ದೇನು?
-ಜಮ್ಮು-ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ಕೊಡುವೆವು
-ಕಾಂಗ್ರೆಸ್‌ ನಮ್ಮ ಸಂಸ್ಕೃತಿಯನ್ನು ಅವಮಾನಿಸುತ್ತದೆ
-ಅದರ ಮೂಲಕ ಕೆಲವೇ ಮತಗಳಿ ಗಾಗಿ ಓಲೈಕೆ ಮಾಡುತ್ತಿದೆ
-ಕಾಶ್ಮೀರದ ಡೋಗ್ರಾ ಸಂಸ್ಕೃತಿಗೂ ಕಾಂಗ್ರೆಸ್‌ ಅವಮಾನ
-ನಮ್ಮ ಸರಕಾರದ ಅವಧಿಯಲ್ಲಿ ಕಾಶ್ಮೀರಿ ಯುವಕರಿಗೆ ಹೆಚ್ಚಿನ ಬಲ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.