ಅಲ್ಪ ಮಳೆಗೆ ಕಿತ್ತು ಬಂದ ಡಾಮರು!; ಹೊಂಡಗಳ ಸೃಷ್ಟಿ

ಹದಗೆಟ್ಟ ಕಟಪಾಡಿ-ಕೋಟೆ-ಮಟ್ಟು ಸಂಪರ್ಕ ರಸ್ತೆ

Team Udayavani, Jul 14, 2019, 5:27 AM IST

alpa-male

ಕಟಪಾಡಿ: ಕೋಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಟಪಾಡಿ-ಕೋಟೆ-ಮಟ್ಟು ಸಂಪರ್ಕದ ಪ್ರಮುಖ ಮೀನುಗಾರಿಕಾ ಇಲಾಖಾ ರಸ್ತೆಯ ಡಾಮರು ಕಿತ್ತು ಹೋಗಿದ್ದು, ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಕಷ್ಟವಾಗಿದೆ. ಈ ಬಾರಿಯ ಅಲ್ಪ ಮಳೆಗೇ ರಸ್ತೆಗಳು ಹೊಂಡ ಬಿದ್ದಿವೆ. ಮೊದಲೇ ಅಗಲ ಕಿರಿದಾಗಿರುವ ರಸ್ತೆ ಇದಾಗಿರುವುದರಿಂದ ಹೊಂಡಗಳೂ ತುಂಬಿಕೊಂಡು, ಸಂಚಾರಕ್ಕೆ ಸಮಸ್ಯೆಯಾಗಿದೆ.

ಸಂಪರ್ಕ ರಸ್ತೆ
ಮೀನುಗಾರರು ಹೆಚ್ಚು ಅವಲಂಬಿತರಾಗಿರುವ ರಸ್ತೆ ಇದಾಗಿದ್ದು, ನಿತ್ಯ 7 ಬಸ್‌ಗಳು, ಮೀನುಗಾರಿಕೆ ವಾಹನಗಳು, ಖಾಸಗಿ ವಾಹನಗಳು, ರಿಕ್ಷಾ, ಟೆಂಪೋ ಇತ್ಯಾದಿಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ರಸ್ತೆ ಹೊಂಡ ಬಿದ್ದಿರುವುದರಿಂದ ಪಾದಚಾರಿಗಳಿಗೆ ನಿತ್ಯ ಕೆಸರಿನ ಸಿಂಚನವಾಗುತ್ತದೆ. ದಟ್ಟನೆಯೂ ಇರುವುದರಿಂದ ಸಂಚಾರಕ್ಕೆ ತ್ರಾಸವಾಗಿದೆ.

ಈ ರಸ್ತೆಯು ಪಡುಭಾಗದಲ್ಲಿ ಕೈಪುಂಜಾಲು -ಮಟ್ಟು-ಕಟಪಾಡಿ, ಮಟ್ಟು-ಉದ್ಯಾವರ ಕೊಪ್ಲ -ಕ‌ಡೆತೋಟ-ಕನಕೋಡ-ಮಲ್ಪೆ ಸಂಪರ್ಕಕ್ಕೆ ರಿಂಗ್‌ ರಸ್ತೆಮಾದರಿಯಲ್ಲಿ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈ ಭಾಗದ ಮಾತ್ರವಲ್ಲದೇ ಉದ್ಯಾವರ ಭಾಗದ ಜನರೂ ಇದನ್ನೇ ಪ್ರಮುಖ ಸಂಪರ್ಕ ರಸ್ತೆಯಾಗಿ ಬಳಸಿಕೊಳ್ಳುತ್ತಿದ್ದಾರೆ.

ಕಳಪೆ ಕಾಮಗಾರಿ?
ಕಳೆದ ಡಿಸೆಂಬರ್‌ನಲ್ಲಿ ಮೀನುಗಾರಿಕಾ ಕೊಂಡಿ ರಸ್ತೆ ದುರಸ್ತಿಯ ಯೋಜನೆಯಡಿ ಕಟಪಾಡಿ-ಕೋಟೆ-ಮಟ್ಟು ಸಂಪರ್ಕದ ಪ್ರಮುಖ ಮೀನುಗಾರಿಕೆ ಇಲಾಖೆ ರಸ್ತೆಯ ದುರಸ್ತಿ ಕೆಲಸ ಕಾರ್ಯವನ್ನು ಸುಮಾರು 10 ಲಕ್ಷ ರೂ. ಅನುದಾನವನ್ನು ಬಳಸಿಕೊಂಡು ನಡೆಸಲಾಗಿತ್ತು.
ಒಂದು ಮಳೆಗಾಲ ಎದುರಿಸುವ ಮೊದಲೇ ರಸ್ತೆ ಡಾಮರು ಕಿತ್ತು ಹೊಂಡ ಬಿದ್ದಿರುವುದು ಕಾಮಗಾರಿ ಕಳಪೆಯಾಗಿರುವ ಶಂಕೆ ಮೂಡಿಸಿದೆ.

ಕಾಂಕ್ರೀಟೀಕರಣಗೊಂಡು ದ್ವಿಪಥವಾಗಿ ವಿಸ್ತರೀಕರಣಗೊಂಡು ಇಕ್ಕೆಲಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ನಿರ್ಮಾಣಗೊಂಡಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂಬ ಆಶಯ ಈ ಭಾಗದ ನಿತ್ಯ ಸಂಚಾರಿಗಳದ್ದು.

ಗಮನಕ್ಕೆ ತರಲಾಗಿದೆ
ಕಳೆದ ಸಾಲಿನಲ್ಲಿ ದುರಸ್ತಿಗೊಂಡಿರುವ ರಸ್ತೆಯು ಕೆಲವೆಡೆ ಕೆಟ್ಟಿರುವ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್‌ ಮತ್ತು ಗುತ್ತಿಗೆದಾರರ ಗಮನಕ್ಕೆ ತರಲಾಗಿದೆ
-ಸುರೇಖಾ, ಪಿ.ಡಿ.ಒ. ಕೋಟೆ ಗ್ರಾ.ಪಂ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.