‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ


Team Udayavani, Sep 21, 2024, 1:09 PM IST

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

ಚೆನ್ನೈ: 634 ದಿನಗಳ ಬಳಿಕ ಟೆಸ್ಟ್‌ ಕ್ರಿಕೆಟ್‌ ಆಡಲಿಳಿದ ವಿಕೆಟ್‌ ಕೀಪರ್‌ ಬ್ಯಾಟರ್‌ ಬ್ಯಾಟರ್‌ ರಿಷಭ್‌ ಪಂತ್‌ ಶತಕ ಬಾರಿಸಿ ತನ್ನ ಪುನರಾಗಮನ ಸಾರಿದ್ದಾರೆ. ಬಾಂಗ್ಲಾ ವಿರುದ್ದದ ಮೊದಲ ಟೆಸ್ಟ್‌ ನ ಎರಡನೇ ಇನ್ನಿಂಗ್ಸ್‌ ನಲ್ಲಿ ಶತಕ ಬಾರಿಸಿ ಮಿಂಚಿದ್ದಾರೆ. ಅವರೊಂದಿಗೆ ಶುಭಮನ್‌ ಗಿಲ್‌ ಕೂಡಾ ಶತಕ ಹೊಡೆದು ಫಾರ್ಮ್‌ ಗೆ ಮರಳಿದ್ದಾರೆ.

ನಾಲ್ಕು ವಿಕೆಟ್‌ ನಷ್ಟಕ್ಕೆ 287 ರನ್‌ ಮಾಡಿದಾಗ ಭಾರತ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿದೆ. 514 ರನ್‌ ಮುನ್ನಡೆಯಲ್ಲಿದೆ.

ಅಪಘಾತದ ಕಾರಣದಿಂದ ಕ್ರಿಕೆಟ್‌ ನಿಂದ ದೂರ ಉಳಿದಿದ್ದ ರಿಷಭ್‌ ಪಂತ್‌ ಕಳೆದ ಐಪಿಎಲ್‌ ನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್‌ ಗೆ ಮರಳಿದ್ದರು. ಇದೀಗ ಮೊದಲ ಬಾರಿಗೆ ಟೆಸ್ಟ್‌ ಆಡಲಿಳಿದ ಪಂತ್‌ ಮೊದಲ ಇನ್ನಿಂಗ್ಸ್‌ ನಲ್ಲಿ 39 ರನ್‌ ಮಾಡಿದ್ದರು. ಎರಡನೇ ಇನ್ನಿಂಗ್ಸ್‌ ನಲ್ಲಿ ಆರಂಭದಲ್ಲಿ ನಿಧಾನವಾಗಿ ಬ್ಯಾಟಿಂಗ್‌ ಮಾಡಿದ ಅವರು ಅರ್ಧಶತಕದ ಬಳಿಕ ಭರ್ಜರಿಯಾಗಿ ಬ್ಯಾಟ್‌ ಬೀಸಿದರು.

128 ಎಸೆತ ಎದುರಿಸಿದ ಪಂತ್‌ ನಾಲ್ಕು ಸಿಕ್ಸರ್‌ ನೆರವಿನಿಂದ 109 ರನ್‌ ಗಳಿಸಿದರು. ಮೆಹದಿ ಹಸನ್‌ ಎಸೆತದಲ್ಲಿ ಅವರಿಗೆ ಕ್ಯಾಚಿತ್ತು ನಿರ್ಗಮಿಸಿದರು.

ಮತ್ತೊಂದೆಡೆ ಇತ್ತೀಚಿನ ದಿನಗಳಲ್ಲಿ ಅಷ್ಟೇನೂ ಫಾರ್ಮ್‌ ನಲ್ಲಿರದ ಶುಭಮನ್‌ ಗಿಲ್‌ ಕೂಡಾ ಶತಕ ಹೊಡೆದರು. ಮೂರು ಸಿಕ್ಸರ್‌ ಮತ್ತು 10 ಬೌಂಡರಿ ನೆರವಿನಿಂದ 161 ಎಸೆತಗಳಲ್ಲಿ ಗಿಲ್‌ ಶತಕ ಪೂರೈಸಿದರು. ಅಜೇಯ 119 ರನ್‌ ಗಳಿಸಿದ ಅವರಯ ಪಂತ್‌ ಜತೆಗೆ ನಾಲ್ಕನೇ ವಿಕೆಟ್‌ ಗೆ 167 ರನ್‌ ಜೊತೆಯಾಟವಾಡಿದರು.

ಪಂತ್‌ ದಾಖಲೆ

ಟೆಸ್ಟ್‌ ಕ್ರಿಕೆಟ್‌ ನಲ್ಲಿ ಹೆಚ್ಚು ಶತಕ ಬಾರಿಸಿದ ಭಾರತೀಯ ವಿಕೆಟ್‌ ಕೀಪರ್‌ ಗಳ ಪಟ್ಟಿಯಲ್ಲಿ ಪಂತ್‌ ಮೊದಲ ಸ್ಥಾನಕ್ಕೇರಿದರು. ಪಂತ್‌ 58 ಇನ್ನಿಂಗ್ಸ್‌ ಗಳಲ್ಲಿ ಆರು ಶತಕ ಬಾರಿಸಿದ್ದಾರೆ. ಮಹೇಂದ್ರ ಸಿಂಗ್‌ ಧೋನಿ ಅವರು ಆರು ಶತಕಗಳಿಗೆ 144 ಇನ್ನಿಂಗ್ಸ್‌ ಬಳಸಿದ್ದರು.

ಭಾರತ 514 ರನ್ ಲೀಡ್‌ ಹೊಂದಿದ್ದು, ಬಾಂಗ್ಲಾ ಗೆಲುವಿಗೆ 515 ರನ್‌ ಗುರಿ ನೀಡಿದೆ.

ಸಂಕ್ಷಿಪ್ತ ಸ್ಕೋರ್‌

ಭಾರತ ಮೊದಲ ಇನ್ನಿಂಗ್ಸ್:‌ 376

ಬಾಂಗ್ಲಾ ಮೊದಲ ಇನ್ನಿಂಗ್ಸ್‌: 149

ಭಾರತ ಎರಡನೇ ಇನ್ನಿಂಗ್ಸ್: 287-4 ಡಿ

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.