Shirva: ರಸ್ತೆ ಸಂಪರ್ಕ ಕಡಿತ, ರಕ್ಷಣೆಗೆ ತೆರಳಿದ ಕಾಪು ತಹಶೀಲ್ದಾರ್‌

ನೆರೆಪೀಡಿತರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುವಲ್ಲಿ ಯಶಸ್ವಿ

Team Udayavani, Aug 2, 2024, 3:52 PM IST

Screenshot (77)

ಶಿರ್ವ: ಬೆಳ್ಳೆ, ಶಿರ್ವ ಪರಿಸರದಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಪಾಪನಾಶಿನಿ ನದಿ ಉಕ್ಕಿ ಹರಿಯುತ್ತಿದ್ದು, ಕೆಲವು ಮನೆಗಳು ಜಲಾವೃತಗೊಂಡಿವೆ. ಕೆಲವೆಡೆ ರಸ್ತೆಯ ಮೇಲೆಯೇ ನೆರೆ ನೀರು ಹರಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜನರು ಪರ್ಯಾಯ ರಸ್ತೆ ಬಳಸುವಂತಾಗಿದೆ.

ಮನೆಗಳಿಗೆ ನುಗ್ಗಿದ ನೆರೆ ನೀರು

ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಪಡುಬೆಳ್ಳೆ ಭದ್ರಮಾ ಸೇತುವೆ ಬಳಿಯ ಭಟ್ರಸಾಲ್‌ ತುಕ್ರ ಮುಖಾರಿ ಅವರ ಮನೆ ಜಲಾವೃತಗೊಂಡಿದ್ದು,ಮನೆಯಲ್ಲಿದ್ದ 9 ಮಂದಿಯನ್ನು ಕಾಪು ತಹಶೀಲ್ದಾರ್‌ ಡಾ|ಪ್ರತಿಭಾ ಆರ್‌. ಅವರ ನೇತೃತ್ವದಲ್ಲಿ ರಕ್ಷಣೆ ಮಾಡಿ ಸ್ಥಳಾಂತರಗೊಳಿಸಲಾಗಿದೆ. ಮನೆ ಮಂದಿ ರಕ್ಷಣಾ ಕೇಂದ್ರಕ್ಕೆ ತೆರಳದೆ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ಶಿರ್ವ ಗ್ರಾ.ಪಂ.ವ್ಯಾಪ್ತಿಯ ಪಂಜಿಮಾರು ಶ್ರೀ ಸೋದೆ ಮಠದ ಬಳಿಯ ಹಿಲ್ಡಾ ರೊಡ್ರಿಗಸ್‌ ಅವರ ಮನೆ ಜಲಾವೃತಗೊಂಡಿದೆ. ಶಿರ್ವ ನ ಡಿಬೆಟ್ಟು, ಕಲ್ಲೊಟ್ಟು, ಅಟ್ಟಿಂಜೆ, ಬಡಗುಪಂಜಿ ಮಾರು ಪರಿಸರದಲ್ಲಿ ಕೃಷಿ ಭೂಮಿ ಮತ್ತುಶಿರ್ವ ನಡಿಬೆಟ್ಟು ಕಂಬಳಗದ್ದೆ ಸಂಪೂರ್ಣ ಜಲಾವೃತಗೊಂಡಿದೆ.

ದೋಣಿಯಲ್ಲಿ ತೆರಳಿದ ಕಾಪು ತಹಶೀಲ್ದಾರ್‌

ಕಾಪು ತಹಶೀಲ್ದಾರ್‌ ಡಾ|ಪ್ರತಿಭಾ ಆರ್‌. ಗೃಹ ರಕ್ಷಕ ದಳದ ಪಡುಬಿದ್ರಿ ಘಟಕದ ಪ್ಲಟೂನ್‌ ಕಮಾಂಡರ್‌ ನವೀನ್‌ ಕುಮಾರ್‌, ಸಿಬಂದಿಗಳಾದ ಸುಕೇಶ್‌ ಕುಮಾರ್‌,ದಿನೇಶ್‌ ಮೂಲ್ಯ ಮತ್ತು ಕೇಶವ ಆಚಾರ್ಯ ಅವರ ಜತೆಗೆ ಗೃಹ ರಕ್ಷಕ ದಳದ ದೋಣಿಯಲ್ಲಿ ಖುದ್ದು ತೆರಳಿ ನೆರೆಪೀಡಿತರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾಪು ಕಂದಾಯ ಪರಿವೀಕ್ಷಕ ಇಜಾರ್‌ ಶಬೀರ್‌,ಬೆಳ್ಳೆ ಗ್ರಾ.ಪಂ.ಉಪಾಧ್ಯಕ್ಷ ಶಶಿಧರ ವಾಗ್ಲೆ,ಮಾಜಿ ಅಧ್ಯಕ್ಷ ಸುಧಾಕರ ಪೂಜಾರಿ, ಗ್ರಾ.ಪಂ. ಸದಸ್ಯರಾದ ರಾಜೇಂದ್ರ ಶೆಟ್ಟಿ,ಹರೀಶ್‌ ಶೆಟ್ಟಿ ಕಕ್ರಮನೆ,ಸ್ಥಳೀಯರಾದ ರಾಘವೇಂದ್ರ ಶೆಟ್ಟಿ ಮತ್ತು ಗ್ರಾಮಸ್ಥರು ಸಹಕರಿಸಿದ್ದಾರೆ.

ಬೆಳ್ಳೆ ಗ್ರಾ.ಪಂ.ವ್ಯಾಪ್ತಿಯ ಪಡುಬೆಳ್ಳೆ, ಪೊಯ್ಯದಪಾಡಿ, ಕಬ್ಯಾಡಿ, ಪಾಂಬೂರು, ಶಿರ್ವ ನಡಿಬೆಟ್ಟು, ಅಟ್ಟಿಂಜೆ, ಕಲ್ಲೊಟ್ಟು ಪರಿಸರದಲ್ಲಿ ಹಲವರ ಮನೆಗೆ ಹೋಗುವರಸ್ತೆ, ನಡೆಯುವ ದಾರಿ ಮತ್ತು ಈ ಪರಿಸರದ ನದಿ ತೀರದಲ್ಲಿದ್ದ ನೂರಾರು ಎಕ್ರೆ ಕೃಷಿಭೂಮಿ, ಹಲವು ಮನೆಗಳು ಜಲಾವೃತಗೊಂಡಿದ್ದು ನಿವಾಸಿಗಳು ತೀವ್ರ ಆತಂಕದಲ್ಲಿದ್ದಾರೆ.

ರಸ್ತೆ ಸಂಪರ್ಕ ಕಡಿತ

ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಮೂಡುಬೆಳ್ಳೆ-ಪಡುಬೆಳ್ಳೆ ಸಂಪರ್ಕ ರಸ್ತೆಯಲ್ಲಿ ನೆರೆ ನೀರು ಹರಿಯುತ್ತಿದೆ.ಪೊಯ್ಯದ ಪಾಡಿ,ಕಬ್ಯಾಡಿಮತ್ತು ಪಾಂಬೂರು ದಿಂಡೊಟ್ಟು ಬಳಿ, ಬಡಗಪಂಜಿಮಾರು ಬಳಿರಸ್ತೆಯಲ್ಲಿಯೇ ನೆರೆ ನೀರು ಹರಿದು ಸಂಪರ್ಕ ಕಡಿತಗೊಂಡಿದ್ದು, ಜನರು ಸುತ್ತುಬಳಸಿ ಪರ್ಯಾಯ ರಸ್ತೆ ಬಳಸುವಂತಾಗಿದೆ.

ಪಾಂಬೂರು ದಿಂಡೊಟ್ಟುಆಣೆಕಟ್ಟಿನ ಮೇಲೆಯೇ ನೆರೆ ನೀರು ಹರಿದು ಕಟ್ಟಿಂಗೇರಿ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯ ರಸ್ತೆಗಳು ತಗ್ಗು ಪ್ರದೇಶದಲ್ಲಿ ನಿರ್ಮಾಣಗೊಂಡಿದ್ದು, ಸಾಧಾರಣ ಮಳೆಗೆ ನೆರೆನೀರು ರಸ್ತೆಯಲ್ಲಿ ಹರಿದು ಸಂಪರ್ಕ ಕಡಿತಗೊಳ್ಳುತ್ತದೆ

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.