ಶಾಲಾ ಬಿಸಿಯೂಟ ವ್ಯತ್ಯಯ
ಗುತ್ತಿಗೆದಾರರ ನಿರ್ಲಕ್ಷ್ಯ: ಸಕಾಲಕ್ಕೆ ಶಾಲೆಗೆ ಬರುತ್ತಿಲ್ಲ ಸಾಮಗ್ರಿ
Team Udayavani, Jul 9, 2019, 5:56 AM IST
ಪುತ್ತೂರು: ತಾಲೂಕಿನ ಗ್ರಾಮೀಣ ಭಾಗದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಷರ ದಾಸೋಹದ ಸಾಮಗ್ರಿ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣದಿಂದ ಇರುವ ಸಾಮಗ್ರಿಯಲ್ಲಿ ಹೊಂದಾಣಿಕೆಯಿಂದ ಬಿಸಿಯೂಟ ನೀಡಲಾಗುತ್ತಿದೆ.
ಮಾರ್ಚ್ ತಿಂಗಳ ಅನಂತರ ಪುತ್ತೂರು ತಾಲೂಕಿನ ಗ್ರಾಮೀಣ ಭಾಗದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಷರ ದಾಸೋಹದ ಅಕ್ಕಿ ಬೇಳೆ ಸಹಿತ ಯಾವುದೇ ಆಹಾರ ಸಾಮಗ್ರಿ ಗಳು ಸರಬರಾಜುಗೊಂಡಿಲ್ಲ. ಇದರಿಂದ ಆತಂಕಗೊಂಡಿರುವ ಕೆಲವು ಶಾಲೆಗಳ ಶಿಕ್ಷಕರು, ಮನೆಯಿಂದಲೇ ತಿಂಡಿ ತರುವಂತೆ ಮಕ್ಕಳಿಗೆ ತಿಳಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಲವೊಂದು ಶಾಲೆಗಳ ಮುಖ್ಯ ಗುರುಗಳು ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು ಸ್ಥಳೀಯ ಪಡಿತರ ವಿತರಣ ಕೇಂದ್ರಗಳಿಂದ ಹಣ ಕೊಟ್ಟು ಅಕ್ಕಿ ಖರೀದಿ ಮಾಡಿದ್ದಾರೆ. ಇನ್ನು ಕೆಲವು ಶಾಲೆಗಳ ಮುಖ್ಯ ಗುರುಗಳು ಪಕ್ಕದ ಶಾಲೆಗಳಿಂದ ಅಕ್ಕಿ ಎರವಲು ತಂದು ಮಕ್ಕಳ ಬಿಸಿಯೂಟ ವ್ಯವಸ್ಥೆ ಮಾಡಿದ್ದಾರೆ.
ಸರಕಾರ ಮಕ್ಕಳಿಗಾಗಿ ನೀಡುವ ಬಿಸಿಯೂಟದ ಆಹಾರ ಸಾಮಗ್ರಿ ನಾಪತ್ತೆಯಾಗಿರುವುದು ಕೆಲವು ದಿನಗಳ ಹಿಂದೆ ಹಾರಾಡಿ ಪ್ರಾಥಮಿಕ ಶಾಲೆಯಲ್ಲಿ ಬಯಲಾಗಿತ್ತು. ಇಲ್ಲಿ 11 ಚೀಲ ಅಕ್ಕಿ ಮಾಯವಾದ ಘಟನೆ ನಡೆದಿತ್ತು. ಬಿಸಿಯೂಟದ ಆಹಾರ ಸಾಮಗ್ರಿ ಸರಬರಾಜು ಮಾಡುವ ಹೊಣೆ ಹೊತ್ತ ಗುತ್ತಿಗೆದಾರರ ಸಮಸ್ಯೆಯಿಂದ ಈಗ ಮತ್ತೂಂದು ತೊಂದರೆ ಎದುರಾಗಿದೆ.
ಗುತ್ತಿಗೆದಾರರೇ ಹೊಣೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.