Mangaluru: ದಕ್ಕೆಯಲ್ಲಿ ಬೋಟು ನಿಲುಗಡೆಗೆ ಜಾಗವೇ ಇಲ್ಲ !


Team Udayavani, Aug 6, 2024, 3:24 PM IST

Screenshot (109)

ಬಂದರು: ಬಂಗುಡೆ, ಬೂತಾಯಿ, ಮಾಂಜಿ, ಎಟ್ಟಿ, ಅಂಜಲ್‌, ಕೊಡ್ಡೈ , ಮದಿಮಾಲ್‌, ನಂಗ್‌…. ಹೀಗೆ ತರತರದ ಮೀನುಗಳ ಬಗ್ಗೆಯೇ ಲೆಕ್ಕಾಚಾರ ಹಾಕುವ ಮಂಗಳೂರು ಮೀನುಗಾರಿಕೆ ದಕ್ಕೆಯಲ್ಲಿ ಬೋಟುಗಳು ಸಮರ್ಪಕವಾಗಿ ನಿಲ್ಲಲು ಸರಿಯಾದ ಜಾಗವೇ ಇಲ್ಲ!

ಕಡಲಲ್ಲಿ ಮೀನು ಹಿಡಿದು ಬೋಟು ಮೂಲಕ ಮಂಗಳೂರು ದಕ್ಕೆಗೆ ಬಂದರೆ ಇಲ್ಲಿ ಬೋಟು ನಿಲ್ಲಲು ಸ್ಥಳವಿಲ್ಲದ ಸಮಸ್ಯೆ ಗಂಭೀರತೆಯನ್ನು ಪಡೆದುಕೊಂಡಿದೆ. ಪ್ರಸ್ತುತ ಇಲ್ಲಿ ಒಂದರ ಹಿಂದೆ ಒಂದರಂತೆ ಅನೇಕ ಸಾಲುಗಳಲ್ಲಿ ಬೋಟುಗಳು ನಿಲ್ಲುತ್ತಿದ್ದು, ಅವುಗಳಿಗೆ ಸರ್ಕಸ್‌ ಮಾಡಿಕೊಂಡು ಹೋಗುವ ಸ್ಥಿತಿ ಇದೆ.

ಮಂಗಳೂರು ಮೀನುಗಾರಿಕೆ ದಕ್ಕೆಗೆ ಒಳಪಟ್ಟಂತೆ ಪರ್ಸಿನ್‌, ಟ್ರಾಲ್‌ಬೋಟು ಸಹಿತ ಸುಮಾರು ಸಾವಿರಾರು ಬೋಟುಗಳು ಇವೆ.ಈಗ ಇರುವ ದಕ್ಕೆ 600 ಮೀಟರ್‌ ಉದ್ದವಿದೆ. ಇದರಲ್ಲಿ ಒಂದು ಸಾಲಿನಲ್ಲಿ ಸುಮಾರು 350 ಬೋಟುಗಳಿಗೆ ನಿಲ್ಲಲ್ಲು ಅವಕಾಶವಿದೆ. ಉಳಿದಂತೆ 1,200ಕ್ಕೂ ಅಧಿಕ ಬೋಟುಗಳು ಇತರ ಪ್ರದೇಶಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಇತರ ಜಾಗವನ್ನು ಹುಡುಕಿ ತಂಗಬೇಕಾಗಿದೆ. ಒಂದರ ಹಿಂದೆ ಇನ್ನೊಂದರಂತೆ 7 ಸಾಲುಗಳಲ್ಲಿ ಬೋಟುಗಳು ನಿಲ್ಲುವ ಪರಿಸ್ಥಿತಿ ಇಲ್ಲಿದೆ. ಮರದ ಹಾಗೂ ಸ್ಟೀಲ್‌ಬೋಟುಗಳು ಇದರಲ್ಲಿ ಇರುವುದರಿಂದ ಬಹಳಷ್ಟು ಬಾರಿ ಬೋಟುಗಳು ಒಂದಕ್ಕೊಂದು ತಾಗಿ ಹಾನಿ ಸಂಭವಿಸುತ್ತಿವೆ. ಇದರ ದುರಸ್ತಿಗಾಗಿ ಲಕ್ಷಾಂತರ ರೂ.ಗಳನ್ನು ಬೋಟುಗಳ ಮಾಲಕರು ವೆಚ್ಚ ಮಾಡಬೇಕಾತ್ತದೆ. 7 ಸಾಲುಗಳಲ್ಲಿ ನಿಂತ ಬಳಿಕವೂ ಬಹಳಷ್ಟು ಬೋಟುಗಳು ಸ್ಥಳವಾಕಾಶವನ್ನು ಹುಡುಕಿಕೊಂಡು ಇತರ ಕಡೆಗಳಿಗೆ ಸಾಗುತ್ತವೆ. ಕಸ್ಬಾ ಬೆಂಗ್ರೆ, ಬೋಳೂರು, ಕುದ್ರೋಳಿ ಬೊಕ್ಕಪಟ್ಣ ಮುಂತಾದ ಕಡೆಗಳಲ್ಲಿ ನಿಲ್ಲುತ್ತವೆ.

3ನೇ ಹಂತವಾದರೆ ಅನುಕೂಲ

ಮಂಗಳೂರು ಬಂದರಿನ ಒಂದನೇ ಹಾಗೂ ಎರಡನೇ ಹಂತದ ಅಭಿವೃದ್ಧಿ ಆದರೂ ಕೂಡ, ಬೋಟು ನಿಲುಗಡೆಗಡೆಗೆ ಪರದಾಡುವ ಪರಿಸ್ಥಿತಿ ಮನಗಂಡು ಹಾಗೂ ಇಲ್ಲಿನ ಸ್ಥಳಾವಕಾಶ ಗಂಭೀರ ಸಮಸ್ಯೆಯ ಹಿನ್ನೆಲೆಯಲ್ಲಿ ಮೀನುಗಾರಿಕೆ ದಕ್ಕೆಯ ತೃತೀಯ ಹಂತದ ವಿಸ್ತರಣೆಗೆ ಮುಂದಾಗಲಾಗಿದೆ. ವಿನ್ಯಾಸ ಗೊಂದಲವನ್ನು ತ್ವರಿತವಾಗಿ ನಿವಾರಿಸಿ ಯೋಜನೆ ಮುಂದುವರಿಯುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳು ನಡೆಯುತ್ತಿದೆ. ಇದು ಸಾಧ್ಯವಾದರೆ, ಮೀನುಗಾರಿಕ ಬೋಟುಗಳ ಬಹಳ ಕಾಲದ ಬೇಡಿಕೆ ಈಡೇರಿದಂತಾಗುತ್ತದೆ. ತೃತೀಯ ಹಂತದ ವಿಸ್ತರಣೆಯಾದರೆ ಇಲ್ಲಿ ಸುಮಾರು 1,000 ಬೋಟುಗಳಿಗೆ ತಂಗಲು ಸ್ಥಳಾವಕಾಶ ನಿರ್ಮಾಣವಾಗುತ್ತದೆ.

ಬಂದರಿನ ಕಾಮಗಾರಿ

ಕೇಂದ್ರ ಪುರಸ್ಕೃತ ಯೋಜನೆಯಡಿ ಮೊದಲ ಹಂತದ ಮಂಗಳೂರು ಮೀನುಗಾರಿಕೆ ಬಂದರಿನ ನಿರ್ಮಾಣವನ್ನು 1986ರಲ್ಲಿ ಪ್ರಾರಂಭಿಸಲಾಗಿತ್ತು. ನಿರ್ಮಾಣ 1991ರಲ್ಲಿ ಪೂರ್ಣಗೊಂಡಾಗ ಭರಿಸಲಾದ ವೆಚ್ಚ 147.80 ಲಕ್ಷ ರೂ., 138 ಮೀಟರ್‌ ಉದ್ದದ ಜೆಟ್ಟಿ, 675 ಚ.ಮೀ. ವಿಸ್ತೀರ್ಣದ ಮೀನು ಹರಾಜು ಪ್ರಾಂಗಣ ಇನ್ನಿತರ ಸೌಲಭ್ಯಗಳಾದ ರಸ್ತೆ ನಿರ್ಮಾಣ, ನೀರು ಸರಬರಾಜು ವಿದ್ಯುತ್‌ ಸೌಕರ್ಯ ಒದಗಿಸಲಾಗಿತ್ತು. ಮೊದಲ ಮೀನುಗಾರಿಕೆ ಬಂದರು ನಿರ್ಮಾಣಗೊಂಡಾಗ 300ರಿಂದ 350 ಸಂಖ್ಯೆಯ 30 ಅಡಿಯಿಂದ 43 ಅಡಿ ಉದ್ದದ ಯಾಂತ್ರೀಕೃತ ದೋಣಿಗಳು ಕಾರ್ಯಾಚರಿಸುತ್ತಿದ್ದವು.

ಅನಂತರ ಯಾಂತ್ರೀಕೃತ ದೋಣಿಗಳ ಸಂಖ್ಯೆಯಲ್ಲಿ ಹೆಚ್ಚಳವಾದ ಕಾರಣ ಮೀನುಗಾರಿಕೆ ಬಂದರಿನ 2ನೇ ಹಂತದ ಕಾಮಗಾರಿಯನ್ನು ಕೇಂದ್ರ ಪುರಸ್ಕೃತ ಯೋಜನೆಯಡಿ 2003ರಲ್ಲಿ ಕೈಗೊಳ್ಳಲಾಯಿತು. 67 ಮೀಟರ್‌ ಉದ್ದದ ಜೆಟ್ಟಿಯನ್ನು 144.67 ಲಕ್ಷ ರೂ ವೆಚ್ಚದಲ್ಲಿ 2004ರಲ್ಲಿ ಪೂರ್ಣಗೊಳಿಸಲಾಯಿತು. ಇದೀಗ ಮೂರನೇ ಹಂತದ ವಿಸ್ತರಣೆಗೆ ಯೋಚಿಸಲಾಗಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.