ಟೈಮ್ಸ್‌ ಸ್ಕ್ವೇರ್‌ನಲ್ಲಿ ನನಗಾಗಿ ಎರಡು ದಿನ ಕಾದ!


Team Udayavani, Sep 4, 2019, 6:11 PM IST

teachers-day-1

ನನ್ನ ಬದುಕಿನ ಅತ್ಯಂತ ಸಾರ್ಥಕ ಕ್ಷಣಗಳೆಂದರೆ ಎತ್ತರಕ್ಕೇರಿದ ಶಿಷ್ಯರನ್ನು ಕತ್ತೆತ್ತಿ ನೋಡುವುದು. ಅದನ್ನು ನಿಜಗೊಳಿಸಿದ ಅನೇಕ ಶಿಷ್ಯರಿದ್ದಾರೆ. ಲಡಾಖ್‌ನ ತುದೀಲಿ ಸೈನಿಕನಾಗಿಯೋ, ಫ್ರ್ಯಾಂಕ್ ಫ‌ರ್ಟ್‌ ಏರ್‌ಪೋರ್ಟಿನ ಲೌಂಜ್‌ನಲ್ಲಿ ಸಹ ಪ್ರಯಾಣಿಕನಾಗಿಯೋ, ಮುಂಬೈ ನಗರದ ಇರುಳ ರೈಲಿನಲ್ಲಿ ಸಿಗುವ ಗೃಹಿಣಿಯಾಗಿಯೋ, ಬೆರಳ ತುಂಬಾ ತೊನೆಯುವ ಚಿನ್ನ ಧರಿಸಿದ ರಿಯಲ್‌ ಎಸ್ಟೇಟ್‌ ಧನಿಕನಾಗಿಯೋ ನಾನಾ ಅವತಾರದಲ್ಲಿ ಶಿಷ್ಯಕೋಟಿ ಕಾಣಿಸಿಕೊಂಡು ಕಣ್ಣರಳಿಸಿ, ನೆನಪಿಸಿ ಧನ್ಯತೆಯ ಮಿಂಚು ಮಿನುಗಿಸುತ್ತಾರೆ.

“ಅಮೆರಿಕಾ! ಅಮೆರಿಕಾ!!’ ಚಿತ್ರವನ್ನು ನ್ಯೂಯಾರ್ಕ್‌ನಲ್ಲಿ ಚಿತ್ರೀಕರಿಸುತ್ತಿದ್ದೆ. 12 ಜನರ ಪುಟ್ಟ ತಂಡ. ಆದರೆ, ಅಗಾಧ ಕೆಲಸ. ಬೆಳಗ್ಗಿನಿಂದ ಭಾರತೀಯನೊಬ್ಬ ಚಿತ್ರೀಕರಣ ನೋಡುತ್ತಾ ನಿಂತಿದ್ದ. ಒಂದೆರಡು ಸಲ ನನ್ನ ಗಮನ ಸೆಳೆಯಲು ಯತ್ನಿಸಿದ. ವಿಪರೀತ ಒತ್ತಡದಲ್ಲಿದ್ದ ನಾನು ಆತನನ್ನು ಮಾತಾಡಿಸುವ ಸ್ಥಿತಿಯಲ್ಲಿರಲಿಲ್ಲ. ಎರಡನೇ ದಿನವೂ ಅವನು ಕಾಯುತ್ತಾ ನಿಂತಿದ್ದ. ಟೈಮ್ಸ್‌ ಸ್ಕ್ವೇರ್‌ನಲ್ಲಿ ಪ್ಯಾಕಪ್‌ ಆದಾಗ ರಾತ್ರಿ ಹತ್ತು ಗಂಟೆ. ಆಗಲೂ ಅಲ್ಲೇ ನಿಂತಿದ್ದ. ಇನ್ನೇನು ಹೊರಡಬೇಕೆನ್ನುವಷ್ಟರಲ್ಲಿ ಹತ್ತಿರ ಬಂದು ಮಾತನಾಡಿಸಿದ.

86ನೇ ಇಸವಿಯಲ್ಲಿ ನಾನೊಂದು ಸಂಜೆ ಕಾಲೇಜಿನಲ್ಲಿ ಬೋಧಿಸುತ್ತಿದ್ದೆ. ಅವನು ಅಲ್ಲಿ ಬಿ.ಕಾಂ. ಕಲಿತಿದ್ದ. ನನಗೆ ದುಡಿದು ಓದುವ ಶಿಷ್ಯರನ್ನು ಕಂಡರೆ ಮಹಾಪ್ರೀತಿ. ಅವನ ಹೆಸರು ಶ್ರೀಧರ. ಬೆಂಗಳೂರಿನ ಹುಡುಗ. ಅವನ ತಾಯಿ ಮನೆಗೆಲಸ ಮಾಡ್ಕೊಂಡು ಓದಿಸುತ್ತಿದ್ದರು. ತರಗತಿಯಲ್ಲಿ ನಾನು ಮಹತ್ವಾಕಾಂಕ್ಷೆಯ ಬಗ್ಗೆ ಬಹಳ ಹೇಳಿದ್ದೆನಂತೆ. ಕೆಲವು ಪುಸ್ತಕ ಕೊಡಿಸಿದ್ದೆನಂತೆ. ಕಾಲೇಜು ಮ್ಯಾಗಝಿನ್‌ಗೆ ಅವನಿಂದ ಪ್ರಬಂಧ ಬರೆಸಿದ್ದೆನಂತೆ.ಫೀಸಿಗೆ ಹಣ ಸಾಲದಿದ್ದಾಗ ಕೊಟ್ಟಿದ್ದೆನಂತೆ.

ಇದಾವುದೂ ನನಗೆ ನೆನಪಿನಲ್ಲೇ ಇರಲಿಲ್ಲ. ಇದನ್ನೆಲ್ಲ ನಾನು ಪ್ರಜ್ಞಾಪೂರ್ವಕವಾಗಿಯೇ ನೆನಪಿಟ್ಟುಕೊಳ್ಳುವುದಿಲ್ಲ. ಆದರೆ, ಮನಸ್ಸು ಮತ್ತು ಕಣ್ಣು ಒದ್ದೆಯಾಗಿದ್ದು, ಅವನ ಕೈಯಲ್ಲಿ ಸುರುಳಿ ಸುತ್ತಿ ಇಟ್ಟುಕೊಂಡು ಬಂದಿದ್ದ ನನ್ನ ಹಸ್ತಾಕ್ಷರವಿದ್ದ, ನನ್ನದೊಂದು ಪುಸ್ತಕ ನೋಡಿ. ಎರಡು ದಿನ ಕಾಯಿಸಿದ ನನಗೆ ಒಂಥರಾ ಆಯಿತು. “ಈಗ ಇಲ್ಲೇ ಫೈನಾನ್ಷಿಯಲ್‌ ಸಂಸ್ಥೆಯೊಂದರಲ್ಲಿ ಒಳ್ಳೆಯ ಜಾಬ್‌ ನಲ್ಲಿದ್ದೇನೆ. ನಿಮ್ಮ ಇಡೀ ಚಿತ್ರತಂಡ ಒಮ್ಮೆ ಬಂದು ಕಾಫಿ  ಕುಡಿದು ಹೋಗಬೇಕು’ ಎಂದು ಆಹ್ವಾನಿಸಿದ ಶ್ರೀಧರ. ಆದರೆ ನಮ್ಮ ಮುಂದಿನ ಪ್ರಯಾಣ ಸಿದ್ಧವಾಗಿತ್ತು. “ಇನ್ನೊಂದ್ಸಲ’ ಅನ್ನುತ್ತಾ ಬೆನ್ನು ತಟ್ಟಿ ಬೀಳ್ಕೊಟ್ಟೆ. ಧಾವಂತದ ಬದುಕಿನಲ್ಲಿ ಆ “ಇನ್ನೊಂದ್ಸಲ’ ಇನ್ನೂ ಬಂದಿಲ್ಲ. ನನ್ನ ಅಲೆಮಾರಿ ಬದುಕಿನಲ್ಲಿ ಶ್ರೀಧರನಂಥ ಶಿಷ್ಯೋತ್ತಮರು ಮರು ಹೀಗೆ ಪ್ರತ್ಯಕ್ಷವಾಗಿ ಎದೆ ಬೆಚ್ಚಗಾಗಿಸುತ್ತಾರೆ. ಇದು ಯಾವ ತಾರೆಗೂ ಲಭಿಸದ ಸುಖ.

ಡಾ. ನಾಗತಿಹಳ್ಳಿ ಚಂದ್ರಶೇಖರ ಪ್ರಸಿದ್ಧ ನಿರ್ದೇಶಕ

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.