U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

ಮಳೆಗಾಲದ ಮುನ್ನೆಚ್ಚರಿಕೆ ಕುರಿತು ಅಧಿಕಾರಿಗಳೊಂದಿಗೆ ಸ್ಪೀಕರ್‌ ಖಾದರ್‌ ಸಭೆ

Team Udayavani, Jul 1, 2024, 1:19 AM IST

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

ಮಂಗಳೂರು: ಜಿಲ್ಲೆಯಲ್ಲಿ ವಿದ್ಯುತ್‌ ಆಘಾತದಿಂದ ಈಗಾಗಲೇ ಮೂವರು ಪ್ರಾಣ ಕಳೆದುಕೊಂಡಿದ್ದು, ಮತ್ತೆ ಇಂತಹ ಪ್ರಕರಣಗಳು ಸಂಭವಿಸಿದರೆ ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು. ಉನ್ನತ ಅಧಿಕಾರಿಗಳಿಂದ ಹಿಡಿದು ತಳಮಟ್ಟದ ಅಧಿಕಾರಿಗಳ ವರೆಗೆ ಎಲ್ಲರೂ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಎಚ್ಚರಿಕೆ ನೀಡಿದ್ದಾರೆ.

ಮಳೆಗಾಲದ ಮುನ್ನೆಚ್ಚರಿಕೆ ಕುರಿತು ಮೆಸ್ಕಾಂ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ರವಿವಾರ ಮಂಗಳೂರಿನ ಬಿಜೈಯ ಮೆಸ್ಕಾಂ ಪ್ರಧಾನ ಕಚೇರಿಯಲ್ಲಿ ಜರಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಅಧಿಕಾರಿಯೂ ತನ್ನ ಜವಾಬ್ದಾರಿ ಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಪಾಯ ಸಂಭವಿಸಿದ ಬಳಿಕ ನಮ್ಮ ಮೇಲೆ ಪ್ರಕರಣ ದಾಖಲಿಸಬೇಡಿ ಎಂದರೆ ಆಗುವುದಿಲ್ಲ ಎಂದರು.

ಮೆಸ್ಕಾಂ ಜತೆಗೆ ಪಿಡಬ್ಲಿೂಡಿ, ಹೆದ್ದಾರಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ಮರಗಳ ಗೆಲ್ಲುಗಳನ್ನು ತೆರವುಗೊಳಿಸಿವುದು, ಶಿಥಿಲವಾಗಿರುವ ಕಂಬಗಳ ತೆರವು ಮೊದಲಾದ ಕೆಲಸಗಳನ್ನು ಕ್ಷಿಪ್ರಗತಿಯಲ್ಲಿ ನಿರ್ವಹಿಸಬೇಕು. ಈಗ ತಂತ್ರಜ್ಞಾನ ಮುಂದುವರಿದಿದ್ದರೂ ಮುಂಚಿತವಾಗಿ ತೆರವುಗೊಳಿಸುವ ಕಾರ್ಯ ಯಾಕಾಗುತ್ತಿಲ್ಲ ಎಂದವರು ಪ್ರಶ್ನಿಸಿದರು.

ಟ್ರಾನ್ಸ್‌ಫಾರ್ಮರ್‌ ಆವರಣ ಸ್ವತ್ಛವಾಗಿರಲಿ
ದೇಶದ ಕೆಲವು ರಾಜ್ಯಗಳಲ್ಲಿ ವಿದ್ಯುತ್‌ ಪರಿವರ್ತಕಗಳ ಆವರಣವನ್ನು ಹೂವಿನ ಗಿಡ ಗಳನ್ನು ಬೆಳೆಸಿ ಸ್ವತ್ಛ ಹಾಗೂ ಸುಂದರವಾಗಿ ಇರಿಸುತ್ತಾರೆ. ಆದರೆ ನಮ್ಮಲ್ಲಿ ತಂತಿ ಬೇಲಿ ಹಾಕಿ ಇಡುವುದರಿಂದ ಜನರು ತ್ಯಾಜ್ಯ ಎಸೆಯುವ ತಾಣವಾಗಿ ಪರಿವರ್ತನೆಯಾಗಿದೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು.

ಜನರಲ್ಲಿ ಜಾಗೃತಿ ಮೂಡಿಸಿ: ಡಿಸಿ
ವಿದ್ಯುತ್‌ ಅವಘಡಗಳಿಗೆ ಸಂಬಂಧಿಸಿ ಸಾರ್ವ ಜನಿಕರಲ್ಲಿ ಜಾಗೃತಿ, ಎಚ್ಚರಿಕೆ ಮೂಡಿಸುವ ಕೆಲಸ ಮೆಸ್ಕಾಂನಿಂದ ಆಗಬೇಕು. ಜಾಹೀರಾತುಗಳು, ಸಣ್ಣ ವೀಡಿಯೋ ಕ್ಲಿಪಿಂಗ್‌ಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯುತ್‌ ಆಘಾತದ ಸಂದರ್ಭದಲ್ಲಿ ಯಾವ ರೀತಿ ಪ್ರಾಣವನ್ನು ರಕ್ಷಿಸಬೇಕು ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದರು.

ಮೆಸ್ಕಾಂ ಎಂ.ಡಿ. ಪದ್ಮಾವತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ, ಪಿಡಬ್ಲಿೂಡಿ, ಅರಣ್ಯ ಇಲಾಖೆ ಮತ್ತು ಕೆಪಿಟಿಸಿಎಲ್‌ ಅಧಿಕಾರಿಗಳು ಭಾಗವಹಿಸಿದ್ದರು.

ಪವರ್‌ಮ್ಯಾನ್‌ಗಳ ಕೊರತೆ
ಮೆಸ್ಕಾಂ ವ್ಯಾಪ್ತಿಯಲ್ಲಿ ಶೇ.50ರಷ್ಟು ಪವರ್‌ಮ್ಯಾನ್‌ಗಳ ಕೊರತೆಯಿದೆ. ಇದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಮೆಸ್ಕಾಂ ಅಧಿಕಾರಿಗಳು ಖಾದರ್‌ ಗಮನಕ್ಕೆ ತಂದರು. ಹೊರ ಜಿಲ್ಲೆಗಳಿಂದ ಆಯ್ಕೆಯಾಗಿ ಬರುವ ಪವರ್‌ಮ್ಯಾನ್‌ಗಳು ಕೆಲವು ಸಮಯ ಕೆಲಸ ಮಾಡಿ ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಪಡೆದುಕೊಂಡು ತೆರಳುತ್ತಾರೆ ಎಂದು ಎಂಡಿ ಪದ್ಮಾವತಿ ತಿಳಿಸಿದರು. ಅಂಥವರಿಗೆ ಎನ್‌ಒಸಿ ನೀಡದಂತೆ ಖಾದರ್‌ ಸೂಚಿಸಿದರು.

ಭೂಗತ ವಿದ್ಯುತ್‌ಲೈನ್‌ ಅಳವಡಿಕೆ ಪ್ರಗತಿಯಲ್ಲಿ
ಮಂಗಳೂರು ನಗರದಲ್ಲಿ 76 ಕೋ.ರೂ. ವೆಚ್ಚದಲ್ಲಿ ಎಡಿಬಿ ಏರಿಯಾದಲ್ಲಿ ಮಾದರಿಯಾಗಿ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಉಳ್ಳಾಲದಲ್ಲಿ ಭೂಗತ ವಿದ್ಯುತ್‌ ಸಂಪರ್ಕಕ್ಕೆ ಸಂಬಂಧಿಸಿ 230 ಕೋ.ರೂ. ಮೊತ್ತದ ಡಿಪಿಆರ್‌ ಇಲಾಖೆಗೆ ಸಲ್ಲಿಸಲಾಗಿದೆ. ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಅರಣ್ಯ ಇಲಾಖೆ, ಪಿಡಬ್ಲಿುÂಡಿ ಇಲಾಖೆಗಳೊಂದಿಗೆ ಚರ್ಚಿಸಿ ಕೆಲಸ ನಿರ್ವಹಿಸಿ ಎಂದು ಖಾದರ್‌ ಅವರು ಸೂಚಿಸಿದರು.

ಟಾಪ್ ನ್ಯೂಸ್

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

1-mng-protest

Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.