Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

ಜಿಲ್ಲೆಯಲ್ಲಿ ಹೆಚ್ಚಿದ ಆತಂಕ; ಅರಣ್ಯ ಇಲಾಖೆಯಿಂದ ರೈತರಿಗೆ 19 ಲಕ್ಷ ರೂ. ಪರಿಹಾರ

Team Udayavani, Oct 22, 2024, 6:53 PM IST

13(3)

ಉಡುಪಿ: ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆ ದಾಳಿಯಿಂದ 122ಕ್ಕೂ ಅಧಿಕ ಜಾನುವಾರು ಪ್ರಾಣ ಕಳೆದುಕೊಂಡಿವೆ. ಜಾನುವಾರುಗಳ ಮೇಲೆ ಚಿರತೆಗಳ ನಿರಂತರ ಆಕ್ರಮಣವು ರೈತರಲ್ಲಿ ಆತಂಕ ಸೃಷ್ಟಿಸಿದೆ ಮತ್ತು ಜಾನುವಾರುಗಳನ್ನು ಕಾಪಾಡಿಕೊಳ್ಳುವುದೇ ರೈತರಿಗೆ ಸವಾಲಾಗಿದೆ.

ಕಾಡುಪ್ರಾಣಿ ದಾಳಿಯಿಂದ ಮೃತ ಜಾನುವಾರುಗಳಿಗೆ ಅರಣ್ಯ ಇಲಾಖೆಯಿಂದ ನಿರ್ದಿಷ್ಟ ಮೊತ್ತದ ಪರಿಹಾರ ನೀಡಲಾಗುತ್ತದೆ. ಕಳೆದ ಎರಡು ವರ್ಷಗಳಲ್ಲಿ 19 ಲಕ್ಷ ರೂ. ಪರಿಹಾರ ರೈತರಿಗೆ ಒದಗಿಸಲಾಗಿದೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಚಿರತೆ ದಾಳಿ ಪ್ರಕರಣ ನಿತ್ಯವೂ ಸುದ್ದಿಯಾಗುತ್ತಿವೆ. ಕೃಷಿ ಭೂಮಿಗಳಿಗೆ, ಕೊಟ್ಟಿಗೆ ಬಂದು ಜಾನುವಾರುಗಳನ್ನು ಎಳೆದು ಕೊಂಡು ಹೋಗುವ ಚಿರತೆಗಳು ರೈತರ ಆದಾಯದ ಮೂಲಕ್ಕೆ ಸಮಸ್ಯೆ ತಂದೊಡ್ಡಿದೆ. ಕೆಲವು ಪ್ರದೇಶಗಳಲ್ಲಿ ಜನರು ತಮ್ಮ ಜಾನುವಾರುಗಳನ್ನು ಸಂರಕ್ಷಿಸಲು ರಾತ್ರಿ ಕಳೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಚಿರತೆ ದಾಳಿಗಳನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಸೆರೆ ಸಿಕ್ಕ ಚಿರತಗೆಳನ್ನು ಹಿಡಿದು ಬೇರೆಡೆ ಬಿಡುವ ಕಾರ್ಯಾಚರಣೆ ಅರಣ್ಯ ಇಲಾಖೆ ನಡೆಸುತ್ತಿದೆ. ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಚಿರತೆಗೆ ಬೋನು ಇರಿಸಿದರೂ ಬೋನಿಗೆ ಬೀಳುವುದು ಕಡಿಮೆ. ಮಣಿಪಾಲ ಪರಿಸರದಲ್ಲಿ ಚಿರತೆ ಸಾಕಷ್ಟು ಆತಂಕ ಸೃಷ್ಟಿಸಿತ್ತು.

ಕುಂದಾಪುರ ಭಾಗದಲ್ಲಿ ಹೆಚ್ಚು ಚಿರತೆಯಿಂದಾಗಿ ಜಾನುವಾರು ಕಳೆದು ಕೊಂಡವರಿಗೆ ಅರಣ್ಯ ಇಲಾಖೆ ಪರಿಹಾರವನ್ನೂ ನೀಡುತ್ತಿದೆ. ಕುಂದಾಪುರ ವ್ಯಾಪ್ತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಕಾರಣ ಚಿರತೆಗಳು ಜಾನುವಾರುಗಳ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಅಧಿಕವಾಗಿವೆ. ಅರಣ್ಯದಂಚಿನ ಜನವಸತಿ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಡುಹಂದಿ, ಕಾಡು ಕೋಣ ಮತ್ತು ಚಿರತೆಗಳು ಮುಖ್ಯವಾಗಿ ಕಾಣಿಸಿಕೊಳ್ಳುತ್ತವೆ.

ಚಿರತೆಗಳು ಜನವಸತಿ ಪ್ರದೇಶಕ್ಕೆ ಬರಲು ಬೀದಿನಾಯಿ ಕಾರಣ?
ಇತ್ತೀಚಿನ ದಿನಗಳಲ್ಲಿ ಜನ ವಸತಿ ಪ್ರದೇಶಗಳಲ್ಲಿಯೂ ಚಿರತೆ ಕಾಣಿಸುತ್ತಿರಲು ಕಾರಣ ಬೀದಿನಾಯಿಗಳು. ಇದು ಬೆಂಗಳೂರು ಮತ್ತು ಮಣಿಪಾಲದಂತ ನಗರದಲ್ಲಿ ಈಗ ಸಾಮಾನ್ಯ ಎಂಬಂತಾಗಿದೆ ಎಂದು ವನ್ಯಜೀವಿ ತಜ್ಞ ಡಾ| ಉಲ್ಲಾಸ್‌ ಕಾರಂತ್‌ ಅಭಿಪ್ರಾಯಪಟ್ಟಿದ್ದಾರೆ. ಬೀದಿನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದು, ಇವುಗಳ ಅವೈಜ್ಞಾನಿಕ ಪೋಷಣೆಯಿಂದಾಗಿ ಬೀದಿ ನಾಯಿಗಳ ಪ್ರಮಾಣ ಬೆಳೆಯುತ್ತಿದೆ. ಸುಲಭವಾಗಿ ಬೇಟೆಯಾಗುವುದರಿಂದ ಚಿರತೆಗಳು ನಾಯಿಗಳನ್ನು ಹುಡುಕಿಕೊಂಡು ಜನವಸತಿ ಪ್ರದೇಶಗಳ ಕಡೆಗೆ ಬರುತ್ತಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

6-

KMC ಆಸ್ಪತ್ರೆಯಲ್ಲಿ ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.