ಮಾಜಿ ಭೂಗತ ಪಾತಕಿ ಛೋಟಾ ರಾಜನ್ ಮೃತ ಪಟ್ಟಿಲ್ಲ : ಏಮ್ಸ್


Team Udayavani, May 7, 2021, 5:00 PM IST

underworld don chhota rajan not died due to covid 19 : AIMS

ನವ ದೆಹಲಿ: ದಾವುದ್ ಇಬ್ರಾಹಿಂ ಸಹಚರನಾಗಿದ್ದ ಮಾಜಿ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಇಂದು (ಮೇ 7) ಮೃತಪಟ್ಟಿದ್ದಾನೆ ಎಂಬ ವದಂತಿ ಹರಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿಯ ಏಮ್ಸ್ ಆಸ್ಪತ್ರೆ, ಛೋಟಾ ರಾಜನ್ ಇನ್ನೂ ಬದುಕಿದ್ದಾರೆ. ಕೋವಿಡ್ ನಿಂದ ಮೃತಪಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದೆ.

2015ರಲ್ಲಿ ಛೋಟಾ ರಾಜನ್​ ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್ ​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ದೃಢ ಪಟ್ಟಿದ್ದ ಕಾರಣ ಕೆಲವು ದಿನಗಳಿಂದ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದ್ದಾರೂ ಚಿಕಿತ್ಸೆ ಫಲಕಾರಿಯಾಗದೇ ಭೂಗತ ಪಾತಕಿ ಮೃತ ಪಟ್ಟಿದ್ದಾನೆ ಎಂದು ವರದಿಗಳು ಹರಡಿದ್ದವು.

ಓದಿ : ಕೋವಿಡ್ ಮೂರನೇ ಅಲೆಯನ್ನು ಹೊಡೆದುರುಳಿಸಲಿದೆ ಜರ್ಮನ್ :  ಜೆನ್ಸ್ ಸ್ಪಾನ್    

ಇನ್ನು, ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 68 ಕ್ರಿಮಿನಲ್ ಪ್ರಕರಣಗಳ ಪೈಕಿ 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ ಛೋಟಾ ರಾಜನ್ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಕರ್ನಾಟಕದ ಮಂಡ್ಯದ ನಕಲಿ ವಿಳಾಸ ನೀಡಿ ಪಾಸ್ ​ಪೋರ್ಟ್ ಪಡೆದಿದ್ದ ಛೋಟಾ ರಾಜನ್ ವಿರುದ್ಧ ಮಂಡ್ಯ ತಹಶೀಲ್ದಾರ್ ದೆಹಲಿ ಕೋರ್ಟ್​ನಲ್ಲಿ ಸಾಕ್ಷ್ಯ ಹೇಳಿದ್ದರು ‌. ಪಾಸ್​ ಪೋರ್ಟ್ ಪ್ರಕರಣದಲ್ಲಿ ಛೋಟಾ ರಾಜನ್ ಅಪರಾಧಿ ಎಂದು ಕೋರ್ಟ್ ತೀರ್ಪು ‌ ನೀಡಿತ್ತು. ತಿಹಾರ್ ಜೈಲಿನಲ್ಲಿ ಬಂಧಿಸಲ್ಪಟ್ಟಿದ್ದ ಛೋಟಾ ರಾಜನ್ ​ನನ್ನು ಇತರ ಕೈದಿಗಳ ಜತೆ ಬೆರೆಯುವುದರಿಂದ ದೂರವಿಡಲಾಗಿತ್ತು. ಸುರಕ್ಷತೆಯ ದೃಷ್ಟಿಯಿಂದ ಛೋಟಾ ರಾಜನ್ ​ಗೆ ಏಕಾಂತ ಕಾರಾಗೃಹವಾಸ ವಿಧಿಸಲಾಗಿತ್ತು.

ಓದಿ :  ಆದಿವಾಸಿಗಳಿಗೆ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.