Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
Team Udayavani, Jul 27, 2024, 3:50 PM IST
ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಮರಿಗೆ ಉರುಳಿಬಿದ್ದ ಪರಿಣಾಮ ಐದು ಮಕ್ಕಳು ಸೇರಿದಂತೆ ಎಂಟು ಜನ ಮೃತಪಟ್ಟ ಘಟನೆ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಿಂಥನ್-ಕೋಕೆರ್ನಾಗ್ ಮಾರ್ಗದ ಅರಶನ್ ದಕ್ಸಮ್ ಬಳಿ ಸಂಭವಿಸಿರುವುದಾಗಿ ವರದಿಯಾಗಿದೆ.
ಕೊಕರ್ನಾಗ್ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಸುಹೀಲ್ ಅಹ್ಮದ್ ಲೋನ್ ಮಾಹಿತಿ ಪ್ರಕಾರ, ದಕ್ಸಮ್ನಿಂದ 20 ಕಿಮೀ ದೂರದಲ್ಲಿರುವ ಆರ್ಶುನ್ ಹಟ್ ಬಳಿ ಅಪಘಾತಕ್ಕೀಡಾಗಿದೆ ಈ ಅವಘಡದಲ್ಲಿ ಐವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಓರ್ವ ಪುರುಷ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಕಾರು ಮದ್ವಾ ಕಿಶ್ತ್ವಾರ್ನಿಂದ ಬರುತಿತ್ತು ಈ ವೇಳೆ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದೆ ಎನ್ನಲಾಗಿದೆ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೊಕರ್ನಾಗ್ನಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದ್ದು ಮೃತ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ: Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
#WATCH | Jammu and Kashmir: People of the same family met with a car accident in the Daksum area of Anantnag district. Further details awaited. pic.twitter.com/zDoU7eJqXv
— ANI (@ANI) July 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.