Weather ಏರುತ್ತಿದೆ ತಾಪಮಾನ; ಸುಡುತ್ತಿದೆ ಕರಾವಳಿ !


Team Udayavani, Aug 31, 2023, 7:00 AM IST

Weather ಏರುತ್ತಿದೆ ತಾಪಮಾನ; ಸುಡುತ್ತಿದೆ ಕರಾವಳಿ !

ಮಂಗಳೂರು: ಆಗಸ್ಟ್‌ನಲ್ಲಿ ಭಾರೀ ಮಳೆ ಸುರಿಯುತ್ತ ತಣ್ಣಗಿರಬೇಕಿದ್ದ ಕರಾವಳಿಯಲ್ಲಿ ಸದ್ಯ ಬಿಸಿಯೇರುತ್ತಿದೆ. ಮಳೆಗಾಲದಲ್ಲಿಯೂ ಬೆವರುತ್ತಿದೆ.

ಹವಾಮಾನ ವೈಪರೀತ್ಯದ ಪರಿಣಾಮ ಮುಂದಿನ ದಿನಗಳಲ್ಲಿ ಬಿಸಿಲ ಝಳ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಸಾಮಾನ್ಯವಾಗಿ 30 ಡಿ.ಸೆ. ಆಸುಪಾಸಿನಲ್ಲಿ ಗರಿಷ್ಠ ತಾಪಮಾನ ಇರುತ್ತದೆ. ಆದರೆ ಮೂರು ವಾರಗಳಿಂದ ತಾಪಮಾನ ಏರಿಕೆಯಾಗುತ್ತಿದ್ದು, ಸರಾಸರಿ 32ರಿಂದ 33 ಡಿ.ಸೆ. ದಾಖಲಾಗುತ್ತಿದೆ. ವಾಡಿಕೆಗಿಂತ 3ರಿಂದ 4 ಡಿ.ಸೆ. ಹೆಚ್ಚುತ್ತಿರುವ ಉಷ್ಣಾಂಶ ಮಳೆ ಬರುವಿಕೆಯನ್ನು ಮತ್ತಷ್ಟು ದೂರ ಮಾಡಿದೆ. ಜೂನ್‌ನಲ್ಲಿ ಕರಾವಳಿಗೆ ಕಾಲಿಟ್ಟ ಮುಂಗಾರು ಕೆಲವೇ ದಿನಗಳಲ್ಲಿ ದುರ್ಬಲಗೊಂಡಿತ್ತು. ಇದರಿಂದಾಗಿ ವಾತಾವರಣದಲ್ಲಿ ನೀರಿನ ಅಂಶ ಕಡಿಮೆಯಾಗಿದ್ದು, ಉಷ್ಣಾಂಶ ಜಾಸ್ತಿಯಾಗಲು ಕಾರಣವಾಗಿದೆ.

ಬಿಸಿಲು ಝಳಕ್ಕೆ ಕಾರಣ
ಹವಾಮಾನ ಇಲಾಖೆ ತಜ್ಞರ ಪ್ರಕಾರ ಇತ್ತೀಚಿನ ಕೆಲವು ವರ್ಷಗಳಿಗೆ ಹೋಲಿಸಿದರೆ ಆಗಸ್ಟ್‌ನಲ್ಲಿ ಮಳೆ ದೂರವಾಗಿ ಗರಿಷ್ಠ ಉಷ್ಣಾಂಶ ವಾಡಿಕೆಗಿಂತ ಹೆಚ್ಚಾಗುತ್ತಿರುವುದು ಇದೇ ಮೊದಲು. ಗರಿಷ್ಠ ಉಷ್ಣಾಂಶ ಕಡಿಮೆಯಾಗಲು ಮತ್ತು ಉತ್ತಮ ಮಳೆ ಸುರಿಯಲು ಹಿಂದೂ ಮಹಾಸಾಗರದಿಂದ ಅರಬಿ ಸಮುದ್ರದ ಮೂಲಕ ಮೋಡ ಸೃಷ್ಟಿಯಾಗಬೇಕು. ಆದರೆ ಕಳೆದೆರಡು ತಿಂಗಳಿನಿಂದ ಈ ಪ್ರಕ್ರಿಯೆ ನಡೆಯುತ್ತಿಲ್ಲ.

ಸ್ಥಳೀಯ ಮೋಡ ಸೃಷ್ಟಿ ಸಾಧ್ಯತೆ
ವಾತಾವರಣದಲ್ಲಾದ ಬದಲಾವಣೆ ಯಿಂದಾಗಿ ಮುಂದಿನ ಕೆಲವು ದಿನಗಳ ಬಳಿಕ ಸ್ಥಳೀಯವಾಗಿ ಮೋಡ ಸೃಷ್ಟಿಯಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಕಳೆದ ವರ್ಷವೂ ಇದೇ ರೀತಿಯ ವಾತಾವರಣ ನಿರ್ಮಾಣ ಆಗಿತ್ತು. ಜಿಲ್ಲೆಯ ಹೋಬಳಿ, ತಾಲೂಕು ವ್ಯಾಪ್ತಿಯೊಳಗೆ ವ್ಯಾಪಕ ಮಳೆಯಾಗುವ ಸನ್ನಿವೇಶ ಸೃಷ್ಟಿಯಾಗಿತ್ತು. ಗಾಳಿಯಲ್ಲಿ ವಾತಾವರಣದ ತೇವಾಂಶದಲ್ಲಾಗುವ ಬದಲಾವಣೆಯಿಂದ “ಲೋಕಲೈಸ್ಡ್ ಎಫೆಕ್ಟ್’ ಉಂಟಾಗಿತ್ತು.ಈ ಬಾರಿಯೂ ಇದೇ ರೀತಿಯ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಪಮಾನದಲ್ಲಿ ಏರಿಳಿತ
ಕರಾವಳಿಯಲ್ಲಿ ದಿನನಿತ್ಯದ ಗರಿಷ್ಠ ತಾಪಮಾನದಲ್ಲಿ ಪ್ರತೀ ದಿನ ಏರಿಳಿತವಾಗುತ್ತಿದೆ ಆ. 24ರಂದು 30.6 ಡಿ.ಸೆ. ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚಳ, ಆ. 25ರಂದು 30.1 ಡಿ.ಸೆ. ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚಳ, ಆ. 26ರಂದು 30.2 ಡಿ.ಸೆ. ದಾಖಲಾಗಿ 1 ಡಿ.ಸೆ. ಹೆಚ್ಚಳ, ಆ. 27ರಂದು 31.5 ಡಿ.ಸೆ. ದಾಖಲಾಗಿ 3 ಡಿ.ಸೆ. ಹೆಚ್ಚಳ, ಆ. 28ರಂದು 31.1 ಡಿ.ಸೆ. ದಾಖಲಾಗಿ 1 ಡಿ.ಸೆ. ಹೆಚ್ಚಳ ಇತ್ತು. ಆ. 29ರಂದು 30.6 ಡಿ.ಸೆ. ದಾಖಲಾಗಿ 2 ಡಿ.ಸೆ. ವಾಡಿಕೆಗಿಂತ ಹೆಚ್ಚು ಇತ್ತು.

ಮೋಡ ಸೃಷ್ಟಿಗೆ “ಎಲ್‌ನಿನೋ’ ತಡೆ
ಅಟ್ಲಾಂಟಿಕ್‌ ಮಹಾಸಾಗರ ಮತ್ತು ಹಿಂದೂ ಮಹಾಸಾಗರದಲ್ಲಿ ಎಲ್‌ನಿನೋ ಪ್ರಭಾವದಿಂದ ಉಷ್ಣಾಂಶದಲ್ಲಿ ಏಕೆಯಾಗುತ್ತಿದೆ. ಇದರಿಂದಾಗಿ ಮೋಡಗಳ ಸೃಷ್ಟಿ ಕಡಿಮೆಯಾಗುತ್ತಿದೆ.

ಮೋಡಗಳ ಸೃಷ್ಟಿಯೇ ಕಡಿಮೆಯಾದ ಕಾರಣ ಮಳೆ ಸುರಿಯುವ ಪ್ರಮಾಣವೂ ಕ್ಷೀಣಿಸುತ್ತಿದೆ. ಪರಿಣಾಮವಾಗಿ ರಾಜ್ಯದಲ್ಲಿ ನಿರೀಕ್ಷೆಯಂತೆ ವಾಡಿಕೆ ಮುಂಗಾರು ಮಳೆ ಸುರಿದಿಲ್ಲ. ಇದೀಗ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿರುವ ಪರಿಣಾಮ ಸಮುದ್ರದಲ್ಲಿ ನಿಮ್ನ ಒತ್ತಡ ನಿರ್ಮಾಣ ಆಗುವ ಸಾಧ್ಯತೆ ಇರುತ್ತದೆ. ಆಗ ಉತ್ತಮ ಮಳೆಸುರಿಯವ ನಿರೀಕ್ಷೆಇರುವುದಾಗಿ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾ ಗುತ್ತಿದೆ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಆಗಸ್ಟ್‌ನಲ್ಲಿ ಈ ಪ್ರಮಾಣದ ಉಷ್ಣಾಂಶ ಇದೇ ಮೊದಲು. ಇದರಿಂದ ಗರಿಷ್ಠ ತಾಪಮಾನವೂ ಸುಮಾರು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚುತ್ತಿದೆ. ಮುಂದಿನ ಕೆಲವು ದಿನ ಇದೇ ರೀತಿಯ ವಾತಾವರಣದ ಸಾಧ್ಯತೆ ಇದೆ.
– ಡಾ| ರಾಜೇಗೌಡ, ಬೆಂಗಳೂರು ಕೃಷಿ ವಿ.ವಿ. ಹವಾಮಾನ ವಿಜ್ಞಾನಿ

ನವೀನ್‌ ಭಟ್‌ ಇಳಂತಿಲ

 

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.