![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 1, 2021, 2:10 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ.
ಇದನ್ನೂ ಓದಿ:2021 ಕೇಂದ್ರ ಬಜೆಟ್: ಈ ಬಾರಿ ಯಾವ ವಸ್ತು ಅಗ್ಗ, ಯಾವುದು ದುಬಾರಿ?
ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
2013-14ನೇ ಸಾಲಿನಲ್ಲಿ ಗೋಧಿಯನ್ನು ಖರೀದಿಸುವ ಮೂಲಕ ರೈತರಿಗೆ 33,874 ಕೋಟಿ ರೂಪಾಯಿ ಪಾವತಿಸಲಾಗಿತ್ತು. 2019-20ನೇ ಸಾಲಿನಲ್ಲಿ ಆ ಮೊತ್ತ 62,802 ಕೋಟಿಗೆ ಏರಿಕೆಯಾಗಿದ್ದು, 2020-21ನೇ ಸಾಲಿನಲ್ಲಿ 75,060 ಕೋಟಿ ರೂಪಾಯಿಗೆ ಹೆಚ್ಚಳವಾಗಿರುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಹತ್ತಿ ಬೆಳೆಗಾರರಿಗೆ ಇದೀಗ ಭರ್ಜರಿ ರಿಲೀಫ್ ಕಂಡಿದ್ದಾರೆ. 2013-14ನೇ ಸಾಲಿನಲ್ಲಿ 90 ಕೋಟಿ ರೂಪಾಯಿ ಪಾವತಿಸಲಾಗಿತ್ತು. 2020-21ನೇ ಸಾಲಿನಲ್ಲಿ ಆ ಮೊತ್ತವನ್ನು 25, 000 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.
ಈ ಪಾವತಿಯಿಂದ ದೇಶದ 43.36 ಲಕ್ಷ ರೈತರು ಲಾಭ ಪಡೆದಿದ್ದಾರೆ. ರೈತರಿಗೆ ಅಗತ್ಯವಿರುವ ಎಲ್ಲಾ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.