Budget; ಇನ್ನು ಯುವಜನರಿಗೆ ಶುಕ್ರದೆಸೆ, ಕೋಟಿ ಬಲ:50 ವರ್ಷ ಕಾಲ ಶೂನ್ಯ ಬಡ್ಡಿದರದಲ್ಲಿ ಸಾಲ

1 ಲಕ್ಷ ಕೋಟಿ ರೂ. ಬಂಡವಾಳ ಮೀಸಲು

Team Udayavani, Feb 2, 2024, 12:39 AM IST

1-sadasd

ಯುವ ಜನರಿಗೆ ಅಕ್ಷರಶಃ ಇದು ಸುವರ್ಣ ಕಾಲ! ಹೌದು, ಕೇಂದ್ರ ಸರಕಾರ ಯುವ ಜನರತ್ತ ವಿಶೇಷ ದೃಷ್ಟಿ ನೆಟ್ಟಿದ್ದು, ಕೇವಲ ದುಡಿಮೆ ಮಾತ್ರವಲ್ಲ, ಉದ್ಯೋಗ ದಾತರನ್ನಾಗಿ ಮಾಡುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ದೀರ್ಘಾವಧಿಯಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲು ಸಜ್ಜಾಗಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಲಕ್ಷ ಕೋಟಿ ಬಂಡವಾಳ ಮೀಸಲಿಡಲು ನಿರ್ಧರಿಸಿದೆ.

ಭಾರತದಲ್ಲಿ ಯುವ ಸಂಪನ್ಮೂಲ ಸಮರ್ಪಕ ಹಾಗೂ ಪರಿಣಾಮಕಾರಿ ಬಳಕೆ ಹಿನ್ನೆಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳ ಆರಂಭ, ಪುನರುಜ್ಜೀವನಕ್ಕೆ 50 ವರ್ಷಗಳ ಕಾಲ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಿದೆ. ಸಕಾಲಕ್ಕೆ ಹಣಕಾಸು ಸಹಾಯ ಮಾಡುವುದರ ಜತೆಗೆ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯ ಹೊಸ ಹೊಸ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದ್ದು, ಜಾಗತಿಕ ಮಟ್ಟ ದಲ್ಲಿ ಸ್ಪರ್ಧಾತ್ಮಕವಾಗಿ ಗುರುತಿಸಿಕೊಳ್ಳಲು ಬೆನ್ನೆಲುಬಾಗಿ ನಿಲ್ಲಲಿದೆ.

ತಂತ್ರಜ್ಞಾನಪ್ರಿಯರಿಗೆ ವರ: ತಾಂತ್ರಿಕವಾಗಿ ಬಲಿಷ್ಠವಾಗುತ್ತಿರುವ ಭಾರತದಲ್ಲಿ ಹೊಸ ಹೊಸ ಸಂಶೋಧನೆ ಮತ್ತು ನಾವೀನ್ಯಕ್ಕೆ ಆದ್ಯತೆ ನೀಡಲು ತಂತ್ರಜ್ಞಾನಪ್ರಿಯ ಯುವ ಜನತೆಗೆ ಬಂಪರ್‌ ಆಫ‌ರ್‌ ನೀಡಲಾಗಿದೆ. ಸ್ಟಾರ್ಟಪ್‌ಗ್ಳಿಗೆ ಉತ್ತೇಜನ ನೀಡಲು ಆರಂಭಿಸಿದ್ದ ಎಫ್ಎಫ್ಎಸ್‌ (ಸ್ಟಾರ್ಟಪ್‌ಗ್ಳಿಗಾಗಿ ನಿಧಿಯ ಬಂಡವಾಳ) ಯೋಜನೆ ಯುವಕರನ್ನು ಉದ್ಯೋಗದಾತರನ್ನಾಗಿದೆ. ಇದಕ್ಕೆ ಪುಷ್ಟಿ ನೀಡಲು ಹೆಚ್ಚಿನ ಬಂಡ ವಾಳದ ಜತೆಗೆ ಶೂನ್ಯ ಬಡ್ಡಿದರದಲ್ಲಿ ಹಣಕಾಸು ನೆರವು ನೀಡಲಿದ್ದು, ಸಂಶೋಧನೆ ಮತ್ತು ನಾವೀನ್ಯಕ್ಕೆ ನೆರವಾಗಲಿದೆ.

ಸ್ಟಾರ್ಟಪ್‌ಗ್ಳಿಗೆ ವಿತ್ತೀಯ ನೆರವು ನೀಡಲು 2016ರಲ್ಲಿ 10 ಸಾವಿರ ಕೋಟಿ ರೂ. ಬಂಡವಾಳ ಮೀಸಲಿಡುವ ಮೂಲಕ ಯೋಜನೆ ಆರಂಭಿಸ ಲಾಗಿತ್ತು. 14 ಮತ್ತು 15ನೇ ಹಣಕಾಸು ಆಯೋಗ ಇದಕ್ಕೆ ಇನ್ನಷ್ಟು ಆದ್ಯತೆ ನೀಡಲು ಸಲಹೆ ನೀಡಿದ ಹಿನ್ನೆಲೆಯಲ್ಲಿ ಈ ಬಾರಿ 1 ಲಕ್ಷ ಕೋಟಿ ರೂ. ಬಂಡವಾಳವನ್ನಿಟ್ಟು, ಶೂನ್ಯ ಬಡ್ಡಿ ದರದಲ್ಲಿ ಸಾಲದ ನೆರವು ರೂಪದಲ್ಲಿ ನೀಡಲು ನಿರ್ಧರಿಸಲಾಗಿದೆ.

ಎಫ್ಎಸ್‌ಎಸ್‌ ಅಡಿಯಲ್ಲಿ ಈ ಯೋಜ ನೆ ನೇರವಾಗಿ ಸ್ಟಾರ್ಟಪ್‌ಗ್ಳಲ್ಲಿ ಹೂಡಿಕೆ ಮಾಡು ವುದಿಲ್ಲ. ಬದಲಿಗೆ ಸೆಬಿಯಲ್ಲಿ ನೋಂದಾಯಿತ ಎಐಎಫ್ಗಳಿಗೆ ಬಂಡವಾಳ ಒದಗಿಸುತ್ತದೆ. ಅಲ್ಲಿಂದ ಇಕ್ವಿಟಿ ಮತ್ತು ಇಕ್ವಿಟಿ-ಲಿಂಕx… ಮೂಲಕ ಸ್ಟಾರ್ಟಪ್‌ಗ್ಳಲ್ಲಿ ಹಣ ಹೂಡಿಕೆ ಮಾಡಬಹುದು. ಇದರ ನಿರ್ವಹಣೆ ಹೊಣೆ ಸೆಬಿಯದ್ದು.
ಬಹುದೊಡ್ಡ ಬಂಡವಾಳ ನೆರವು ತಾಂತ್ರಿಕ ವಾಗಿ ನೈಪುಣ್ಯ ಹೊಂದಿರುವ ಹಾಗೂ ಹೊಸ ಉತ್ಸಾಹದಲಿರುವ ಯುವ ಜನತೆಗೆ ವರದಾನವಾಗಿದೆ. ಸಕಾಲಕ್ಕೆ ಸೂಕ್ತ ನಿರ್ಧಾರದ ಮೂಲಕ ಸ್ಟಾರ್ಟಪ್‌ ಆರಂಭಿಸುವವರಿಗೆ ಇದು ಶುಕ್ರದೆಸೆ ಎಂದರೆ ಅತಿಶಯೋಕ್ತಿ ಅಲ್ಲ.

ಕ್ರೀಡೆಗೆ ಇಲ್ಲ ಉತ್ತೇಜನ
ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕ್ರೀಡಾ ಕ್ಷೇತ್ರಕ್ಕೆ ಈ ಬಾರಿ ನಿರಾಸೆ ಎದುರಾಗಿದೆ. ಕಳೆದ ಬಾರಿ ನೀಡಿದ್ದ 3397.32 ಕೋಟಿ ರೂ. ಅನುದಾನವನ್ನು ಈ ಬಾರಿ 3,398 ಕೋಟಿ ರೂ.ಗೆ ನಿಗದಿಗೊಳಿಸಲಾಗಿದೆ. ಹೀಗಾಗಿ ಹೆಚ್ಚುವರಿ ಅನುದಾನ ನೀಡಿಲ್ಲ. ಪ್ಯಾರಿಸ್‌ ಒಲಿಂಪಿಕ್‌ಗೆ ಸಿದ್ಧತೆ ನಡೆಸುತ್ತಿದ್ದ ಕ್ರೀಡಾಳುಗಳಿಗೆ ಇದು ನಿರಾಸೆ ಮೂಡಿಸಿದೆ.

ಎನ್‌ಇಪಿಗೆ ಆದ್ಯತೆ
ರಾಷ್ಟ್ರೀಯ ಶಿಕ್ಷಣ ನೀತಿಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸುವ ಕೇಂದ್ರ ಸರ್ಕಾರ ಇದನ್ನು ಇನ್ನಷ್ಟು ಪರಿಣಾಮ ಕಾರಿಗೊಳಿಸಲು ಸಜ್ಜಾಗಿದೆ. ಎನ್‌ಇಪಿಗೆ ಕೆಲವು ಮಾರ್ಪಾಡಿನೊಂದಿಗೆ ವಿಶೇಷ ಆದ್ಯತೆ ನೀಡುವುದಾಗಿ ಘೋಷಿಸಿದೆ.

ಉನ್ನತ ಶಿಕ್ಷಣಕ್ಕೆ ಒತ್ತು
ದೇಶದಲ್ಲಿ 2014ರಿಂದ ಉನ್ನತ ಶಿಕ್ಷಣಕ್ಕಾಗಿ 7 ಐಐಟಿ, 16 ಐಐಐಟಿ, 7 ಐಐಎಂ, 15 ಎಐಐಎಂಎಸ್‌ ಹಾಗೂ 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಭಾರತದ ಉದಯಕ್ಕಾಗಿ ಪಿಎಂ ಸ್ಕೂಲ್‌ಗ‌ುಣಮಟ್ಟದ ಬೋಧನೆ ನೀಡುತ್ತಿದೆ. ದೇಶಾದ್ಯಂತೆ 3 ಸಾವಿರ ಹೊಸ ಐಟಿಐಗಳನ್ನು ತೆರೆಯಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

10 ವರ್ಷಗಳಲ್ಲಿ ಅರ್ಥ ವ್ಯವಸ್ಥೆಯೇ ಬದಲು
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಡೀ ದೇಶದ ತೆರಿಗೆ ವ್ಯವಸ್ಥೆಯನ್ನು ಜಿಎಸ್‌ಟಿ ಮೂಲಕ ಕ್ರೋಢಿಕರಿಸಲಾಗಿದೆ. 2017ರ ಜುಲೈಯಿಂದ ಜಾರಿಗೆ ಬಂದ ಜಿಎಸ್‌ಟಿಯು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಜನವರಿಯಲ್ಲಿ 1.72 ಲಕ್ಷ ಕೋಟಿ ರೂ ಜಿಎಸ್‌ಟಿ ತೆರಿಗೆ ಸಂಗ್ರಹವಾಗಿದೆ.

ಯುಪಿಐ
ವಿಶ್ವದ ಮುಂಚೂಣಿ ದೇಶಗಳು ಸಹ ಭಾರತದ ಯುಪಿಐ ವ್ಯವಸ್ಥೆ ಅದರ ಮೂಲ ಸೌಕರ್ಯ ಮತ್ತು ಸಾಮಾನ್ಯ ಜನರು ಸಹ ಬಳಸುವ ಪರಿಗೆ ಬೆರಗಾಗಿದ್ದಾರೆ. ಇಂದು ವಿಶ್ವದಲ್ಲೇ ಅತಿಹೆಚ್ಚು ಡಿಜಿಟಲ್‌ ಪಾವತಿ ಮಾಡುವ ದೇಶವಾಗಿ ಭಾರತ ಬೆಳೆದಿದೆ. ಪ್ರಸ್ತುತ ದೇಶದಲ್ಲಿ ಪ್ರತಿ ತಿಂಗಳು 12 ಬಿಲಿಯನ್‌ನಷ್ಟು ಹಣ ಯುಪಿಐ ಮೂಲಕ ವರ್ಗಾವಣೆಯಾಗುತ್ತಿದೆ.

ಜನಧನ್‌ ಯೋಜನೆ
ದೇಶದ ಪ್ರತಿಯೊಬ್ಬರೂ ಬ್ಯಾಂಕ್‌ ಖಾತೆ ಹೊಂದಿರಬೇಕು ಎಂಬ ಗುರಿಯೊಂದಿಗೆ 2014ರಲ್ಲಿ ಪ್ರಧಾನ ಮಂತ್ರಿ ಜನಧನ್‌ ಯೋಜನೆಯನ್ನು ಆರಂಭಿಸ ಲಾಯಿತು. ಈಗ 50 ಕೋಟಿಗಿಂತ ಹೆಚ್ಚು ಜನ ಧನ್‌ ಖಾತೆಗಳಿವೆ. ಇಂದು ಸರಕಾರ ಜನರಿಗೆ ಯಾವುದೇ ಆರ್ಥಿಕ ನೆರವು, ಪ್ರೋತ್ಸಾಹ ಧನ ನೀಡು ವುದಿದ್ದರೂ ನೇರವಾಗಿ ಖಾತೆಗೆ ವರ್ಗಾಯಿಸುತ್ತಿದೆ. ಇದರಿಂದ 34 ಲಕ್ಷ ಕೋಟಿ ರೂ.ಗಳನ್ನು ಖಾತೆಗೆ ನೇರ ವರ್ಗಾವಣೆ ಮಾಡಿದ್ದು 2.7 ಲಕ್ಷ ಕೋಟಿ ರೂ ಉಳಿತಾಯವಾಗಿದೆ ಎಂದು ನಿರ್ಮಲಾ ಹೇಳಿದ್ದಾರೆ.

ಪಿಎಂ ಕಿಸಾನ್‌ ಸಮ್ಮಾನ್‌
ಸಣ್ಣ ರೈತರಿಗೆ ವರ್ಷಕ್ಕೆ 6 ಸಾವಿರ ರೂ ನೆರವು ನೀಡುವ ಈ ಯೋಜನೆಯ ಪ್ರಯೋಜನವನ್ನು ಹತ್ತು ಕೋಟಿಗಿಂತ ಹೆಚ್ಚು ರೈತರು ಪಡೆದಿದ್ದಾರೆ. 2019ರಲ್ಲಿ ಆರಂಭವಾದ ಯೋಜನೆಯು ಕೋವಿಡ್‌ ಸಂದರ್ಭದಲ್ಲಿ ರೈತರಿಗೆ ತುಸು ನಿರಾಳತೆಯನ್ನು ತಂದಿತ್ತು.

ಮುದ್ರಾ ಯೋಜನೆ
ದೇಶದಲ್ಲಿ ಉದ್ಯಮಶೀಲತೆ ಬೆಳೆಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು 2015ರಲ್ಲಿ ಪ್ರಕಟಿಸಲಾಯಿತು. ಈ ಯೋಜನೆಯಡಿ 22.5 ಲಕ್ಷ ಕೋಟಿ ರೂ ಸಾಲ ನೀಡಲಾಗಿದೆ. ಇದರ ಜೊತೆಗೆ ಫ‌ಂಡ್‌ ಆಫ್ ಫ‌ಂಡ್ಸ್‌, ಸ್ಟಾರ್ಟ್‌ ಆಫ್ ಇಂಡಿಯಾ ಮತ್ತು ಸ್ಟಾರ್ಟ್‌ ಆಫ್ ಕ್ರೆಡಿಟ್‌ ಗ್ಯಾರಂಟಿ ಯೋಜನೆಗಳು ಉದ್ಯಮಶೀಲತೆಗೆ ನೆರವು ನೀಡುತ್ತದೆ.

ಪಿಎಂ ಸ್ವನಿಧಿ
ನಗರ ಭಾಗದ ಬೀದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ 2020ರ ಜೂನ್‌ನಲ್ಲಿ ಈ ಯೋಜನೆಯನ್ನು ಆರಂಭಿಸಲಾಯಿತು. ಸುಮಾರು 55 ಲಕ್ಷ ಬೀದಿ ವ್ಯಾಪಾರಿಗಳಿಗೆ 91 ಸಾವಿರ ಕೋಟಿ ರೂ ಸಾಲವನ್ನು ಈ ಯೋಜನೆಯಡಿ ನೀಡಲಾಗಿದೆ.

ಮೇಕ್‌ ಇನ್‌ ಇಂಡಿಯಾ
ಭಾರತದಲ್ಲಿ ಉದ್ದಿಮೆ ಸ್ಥಾಪನೆಯಾಗಬೇಕು, ವಿದೇಶಿ ಉದ್ದಿಮೆಗಳು ಸಹ ಭಾರತದಲ್ಲಿ ತಮ್ಮ ಘಟಕ ಹೊಂದಬೇಕೆಂಬ ಮಹತ್ವಕಾಂಕ್ಷೆಯ ಮೇಕ್‌ ಇನ್‌ ಇಂಡಿಯಾ ಯೋಜನೆಯು ಯಶಸ್ಸಿನ ಹೆಜ್ಜೆಗಳನ್ನು ಇಡುತ್ತಿದೆ. ಇಂದು ಹಲವು ಘಟಾನುಘಟಿ ಜಾಗತಿಕ ಸಂಸ್ಥೆಗಳು ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ. ಇದರಿಂದ ವಿದೇಶಿ ನೇರ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿಸುವ ಗುರಿ ಇದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala-Sitharaman

Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್‌

House-Programme

Budget: ಅಪೂರ್ಣ ವಸತಿ ಯೋಜನೆ ಪೂರ್ಣಕ್ಕೆ ಮುಂದು, ಮಧ್ಯಮ ವರ್ಗದವರಿಗೆ ಸ್ವಾಮಿಹ್‌ ನಿಧಿ- 2

Street-vendors

Union Budget: ಬೀದಿ ವ್ಯಾಪಾರಿಗಳಿಗೆ 30 ಸಾವಿರ ಕ್ರೆಡಿಟ್‌ ಕಾರ್ಡ್‌ ಸಾಲ

Urban-Nirmala

Union Budget: ನಗರಾಭಿವೃದ್ಧಿ ಸವಾಲು ಮೆಟ್ಟಿ ನಿಲ್ಲಲು 1 ಲಕ್ಷ ಕೋಟಿ ರೂ. ಹೂಡಿಕೆ ನಿಧಿ

1-bndd

Union Budget; ಮಧ್ಯಮ ವರ್ಗಕ್ಕೆ ಕುಂಭಮೇಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.