Mother: ಮಗುವಿನ ನಗುವಿನ ಕಾರಣ ಅಮ್ಮ


Team Udayavani, May 29, 2024, 12:53 PM IST

7-uv-fusion

ಅಮ್ಮಾ ಎಂಬ ಪದಕ್ಕೆ ಸರಿಸಾಟಿಯಾದ ಮತ್ತೂಂದು ಪದವಿಲ್ಲ. ಅವಳು ಸಹನೆಯ ಸಂಕೇತ, ಕರುಣಾಮಯಿ, ಜೀವನದ ಪ್ರತೀ ಹಂತದಲ್ಲೂ ತಾರತಮ್ಯ ಮಾಡದೆ ಸಮಾನವಾಗಿ ಎಲ್ಲ ಸಂದರ್ಭಗಳಲ್ಲೂ ಜತೆಗೆ ಇರುವವಳು, ಆಕೆ ಒಂದು ದಿನ ಮನೆಯಲ್ಲಿ ಇಲ್ಲದಿದ್ದರೆ ಏನೋ ಕಳೆದುಕೊಂಡಂತೆ ಅನಿಸುವುದಂತು ಖಂಡಿತ. ಒಟ್ಟಾರೆಯಾಗಿ ನನ್ನ ಜೀವನದಲ್ಲಿ ನನ್ನ ನಗುವಿಗೆ ಕಾರಣಳಾದವಳು ನನ್ನ ಅಮ್ಮ.

ಮುಂಜಾನೆ ಶಾಲೆ-ಕಾಲೇಜಿಗೆ ಹೋಗುವಾಗ ತನ್ನ ಮಕ್ಕಳು ಹಸಿದುಕೊಂಡು ಹೋಗಬಾರದೆಂದು ಮನೆಯ ಇತರೆ ಕೆಲಸಗಳನ್ನು ಬೆಳಗ್ಗೆ ಬೇಗನೆ ಎದ್ದು ಮುಗಿಸಿ, ಅಡುಗೆ ಮಾಡಿ, ಬುತ್ತಿ ಕಟ್ಟಿ ಕೊಡುತ್ತಿದ್ದವಳು. ಮನೆಯ ಯಾವುದೇ ಕೆಲಸವನ್ನು ಮಾಡಲು ಒತ್ತಾಯ ಮಾಡದೆ ಓದಿಕೊಳ್ಳುವುದಕ್ಕೆ ನಮಗೆ ಹೆಚ್ಚಿನ ಸಮಯ ಮೀಸಲಿಡುತ್ತಿದ್ದವಳು.

ಇಂದಿನ ಕಾಲಮಾನದಲ್ಲಿ ಸ್ನಾತಕೋತ್ತರ ಪದವಿಯ ವರೆಗೂ ಓದುವುದಕ್ಕೆ, ಅದರಲ್ಲೂ ಹಳ್ಳಿಯ ಹೆಣ್ಣುಮಕ್ಕಳನ್ನು ಬಿಡುವುದು ಬಹಳ ಅಪರೂಪ, ಇಂದು ನನ್ನ ಸ್ನಾತಕೋತ್ತರ ಪದವಿಯನ್ನೂ ಮಾಡುವವರೆಗೂ ಮುಂದೆಯೂ ಜೀವನದಲ್ಲಿ ಸಾಧನೆ ಮಾಡುವುದಕ್ಕೆ ಹೆಚ್ಚು ಉತ್ಸಾಹ ತುಂಬುತ್ತಿರುವವಳು ನನ್ನಮ್ಮ.

ಅವಳಿಗೆ ಅರೋಗ್ಯ ಸರಿ ಇಲ್ಲದ ಸಮಯದಲ್ಲೂ ತನ್ನ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದವಳು. ನನ್ನ ಜೀವನದ ಯಶಸ್ಸಿನ ಹಿಂದಿನ ಶಕ್ತಿ ನನ್ನ ಅಮ್ಮಾ. ಮನೆಯಲ್ಲಿನ ಕಷ್ಟ ಸಂಕಟಗಳನ್ನು ಎದುರಿಸಿ ಒಂದಷ್ಟು ಹಣವನ್ನು ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಎತ್ತಿಡುವಂತವಳು ತಾಯಿ.

ಮನೆಗೆ ಮಗಳಾಗಿ, ಗಂಡನಿಗೆ ಹೆಂಡತಿಯಾಗಿ, ಅತ್ತೆಗೆ ಸೊಸೆಯಾಗಿ, ಮಕ್ಕಳಿಗೆ ತಾಯಿಯಾಗಿ ಹೀಗೇ ಜೀವನದ ಪ್ರತೀ ಹಂತದಲ್ಲೂ ಹೆಣ್ಣು ತನ್ನದೇ ಆದ ಜವಾಬ್ದಾರಿಯುತ ಸ್ಥಾನವನ್ನು ತುಂಬುವವಳಾಗಿದ್ದಾಳೆ ಆಕೆ. ಆಕೆಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ.

ಅಂಬಿಕಾ ಬಿ.ಟಿ.

ಹಾಸನ

ಟಾಪ್ ನ್ಯೂಸ್

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-uv-fusion

UV Fusion: ಸಿನೆಮಾ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

9-uv-fusion

Love Letter: ನೆನಪಿನಲೆಯಲ್ಲಿ ಪ್ರೀತಿಯ ಪತ್ರ…!

8-uv-fusion

Father: ಬಾಳದಾರಿಯಲ್ಲಿ ಅಪ್ಪ ಎಂಬ ಭರವಸೆ

10-uv-fusion

Kottiyoor Temple: ಕೇರಳದ  ಶಕ್ತಿ ತಾಣ ಕೊಟ್ಟಿಯೂರು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

1-aaa

Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.