AI ಅಳವಡಿಸಿಕೊಂಡಾಗ ಅಭಿವೃದ್ಧಿ ಸಾಧ್ಯ


Team Udayavani, Jan 23, 2024, 3:24 PM IST

11-uv-fussion

ಮಾನವನ ವಿಕಾಸವಾದಂತೆ ಅವನ ಅವಶ್ಯಕತೆಗಳೂ ಬದಲಾಗುತ್ತಾ ಬಂದಿವೆ. ಶತಮಾನಗಳಿಂದಲೂ ಮನುಷ್ಯನ ಆವಶ್ಯಕತೆಗಳಿಗೆ ತಕ್ಕಂತೆ ಹೊಸ ಹೊಸ ಆವಿಷ್ಕಾರಗಳಾಗುತ್ತಿವೆ. ಪ್ರತೀ ಆವಿಷ್ಕಾರದ ಉದ್ದೇಶ, ಮನುಷ್ಯನ ಕೆಲಸಗಳನ್ನು ಸರಳಗೊಳಿಸುವುದಾಗಿದೆ. ಅಂತಹದ್ದೇ ಆವಿಷ್ಕಾರಗಳಲ್ಲೊಂದು ಕೃತಕ ಬುದ್ಧಿಮತ್ತೆ.

ಹೆಸರೇ ಸೂಚಿಸುವಂತೆ ಕೃತಕವಾಗಿ ಸೃಷ್ಟಿಸಲ್ಪಟ್ಟ ಬುದ್ಧಿಮತ್ತೆಯೇ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಎಐ). ಮಾನವನ ಬುದ್ಧಿ ಸಾಮರ್ಥ್ಯದಿಂದ ಸೃಷ್ಠಿಯಾಗಿರುವ ಕೃತಕ ಬುದ್ಧಿಮತ್ತೆ ಪ್ರಸ್ತುತ ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಜಗತ್ತಿನ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿ ವಿಶೇಷ ಅಲೆಯೊಂದನ್ನು ಸೃಷ್ಟಿಸಿದೆ.

ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉತ್ತರ ಕಂಡುಹಿಡಿಯುವುದರಿಂದ ಹಿಡಿದು ರಾಷ್ಟದ ರಕ್ಷಣಾ ವ್ಯವಸ್ಥೆಯವರೆಗೆ ಪ್ರತಿಯೊಂದು ವಲಯದಲ್ಲೂ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ತನ್ನ ಹೆಜ್ಜೆಯನ್ನೂರಿದೆ. ಕೃತಕ ಬುದ್ಧಿಮತ್ತೆಯ ಜನನವಾಗಿ ದಶಕಗಳೇ ಕಳೆದಿದ್ದರೂ ಇತ್ತೀಚಿನ ವರ್ಷಗಳಲ್ಲಿ ಅದರ ಪ್ರಭಾವ ಹೆಚ್ಚಾಗಿ ಕಾಣುತ್ತಿದ್ದೇವೆ.

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಎರಡು ಕಾರಣಗಳಿಂದ ಅತೀ ಹೆಚ್ಚು ಸದ್ದು ಮಾಡುತ್ತಿದೆ. ಒಂದು, ಅದರ ಕಾರ್ಯಕ್ಷಮತೆ. ಇನ್ನೊಂದು, ಅದರಿಂದ ಮಾನವನಿಗಾಗುತ್ತಿರುವ ನಷ್ಟ. ಇತ್ತೀಚೆಗೆ ಎಐ ಮಾನವನ ಸ್ಥಾನವನ್ನಾಕ್ರಮಿಸಿಕೊಳ್ಳಲಿದೆ ಎಂಬ ಭಯ ಪ್ರತಿಯೊಬ್ಬರನ್ನೂ ಕಾಡಿದ್ದು ನಿಜ ಆದರೆ ಕೃತಕ ಬುದ್ಧಿಮತ್ತೆಯ ಆವಿಷ್ಕಾರಕ್ಕೆ ಮೂಲ ಕಾರಣ ಮನುಷ್ಯನ ಕೆಲಸದ ಹೊರೆಯನ್ನು ಕಡಿಮೆ ಮಾಡುವುದೇ ಆಗಿದೆ ಹೊರತು ಮನುಷ್ಯನ ಸ್ಥಾನವನ್ನಾಕ್ರಮಿಸಲು ಅಲ್ಲ.

ಮನುಷ್ಯನ ಹೋಲಿಕೆಯಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದೆ. ಏಕೆಂದರೆ ಮನುಷ್ಯ ಮಾಡಬಲ್ಲ ಕೆಲಸವನ್ನು ಹತ್ತರಷ್ಟು ವೇಗದಲ್ಲಿ ಎಐ ಮಾಡಬಲ್ಲದು. ಅಂತರ್ಜಾಲದಲ್ಲಿರುವ ಮಾಹಿತಿಯನ್ನು ಕಲೆಹಾಕಿ ನಮಗೆ ಬೇಕಾದ ವಿಷಯವನ್ನು ಕ್ಷಣ ಮಾತ್ರದಲ್ಲಿ ಹುಡುಕಿ ನಮ್ಮ ಮುಂದಿಡಬಲ್ಲದು. ಹೊಸ ಆವಿಷ್ಕಾರಗಳ ಸಮರ್ಪಕ ಬಳಕೆಯಿಂದ ನಮ್ಮ ಗುಣಮಟ್ಟವನ್ನು ಸುಧಾರಿಸಬಹುದು. ಅಂತೆಯೇ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಕೂಡ ಮಾನವನ ಕಾರ್ಯಕ್ಷಮತೆಯನ್ನು ವೃದ್ಧಿಸುತ್ತದೆ. ಇಷ್ಟು ವರ್ಷ ನಾವು ಮಾಡುತ್ತಿದ್ದ ಕೆಲಸವನ್ನು ಎಐ ಇನ್ನಷ್ಟು ವೇಗವಾಗಿ ಮಾಡಲು ಸಹಾಯ ಮಾಡುತ್ತದೆ. ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ನಮ್ಮ ಜೀವನ ಶೈಲಿಯನ್ನು ಉನ್ನತೀಕರಿಸುತ್ತಿದೆ; ನಮ್ಮ ಕಾರ್ಯವೈಖರಿಯನ್ನು ವೃದ್ಧಿಸುತ್ತಿದೆ.

ಕಾಲಾನುಕ್ರಮ ಹೊರಬರುತ್ತಿರುವ ಆವಿಷ್ಕಾರಗಳನ್ನು ಹಳಿಯುವುದರಿಂದ ನಮ್ಮ ಜೀವನ ನಿಂತ ನೀರಿನಂತಾಗುವ ಸಾಧ್ಯತೆಗಳು ಹೆಚ್ಚು. ಮಾನವ ಹೊಸತನಕ್ಕೆ ಒಗ್ಗಿಕೊಳ್ಳುವ ಪ್ರಯತ್ನ ಮಾಡಿದಾಗಲೇ ಸುಧಾರಿತ ಜೀವನ ಸಾಧ್ಯ. ಯಾವ ವ್ಯಕ್ತಿ ಹೊಸತನಕ್ಕೆ ತೆರೆದುಕೊಳ್ಳುವನೋ ಆತ ಹೆಚ್ಚಿನ ಸಾಧ್ಯತೆಗಳೆಡೆಗೆ ಸಾಗಬಲ್ಲ. ಪ್ರತಿಯೊಂದು ಅಭಿವೃದ್ಧಿಯೂ ಬದಲಾವಣೆಯಿಂದ ಪ್ರಾರಂಭವಾಗುವುದು. ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಎಂಬ ಬದಲಾವಣೆಯನ್ನು ಅಳವಡಿಸಿಕೊಳ್ಳುವುದರಿಂದ ನಮ್ಮಲ್ಲೂ ಹೊಸದೊಂದು ಬೆಳವಣಿಗೆ ಕಾಣಲು ಸಾಧ್ಯವಾಗಬಹುದು. ಇದೇ ವೇಳೆ ಬದಲಾವಣೆ ಸಕಾರಾತ್ಮಕವಾಗಿದ್ದಾಗ ಆಕ್ರಮಿಸಿಕೊಳ್ಳುವ ಪ್ರಕ್ರಿಯೆಯೂ ನಿಲ್ಲುತ್ತದೆ.

-ಶಿವಕುಮಾರ

ಎಸ್‌.ಡಿ.ಎಂ. ಕಾಲೇಜು, ಉಜಿರೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.