UV Fusion: ಸಂಬಂಧಗಳ ಶಿಥಿಲೀಕರಣ!


Team Udayavani, Sep 25, 2024, 12:23 PM IST

4-uv-fusion

ಇಂದಿನ ವಿವಾಹಗಳು ತರಕಾರಿಗಳಂತೆ ಆಗಿದ್ದು, ಮಾರುಕಟ್ಟೆಯಿಂದ ಖರೀದಿ ಮಾಡುವಾಗ ಎಲ್ಲವೂ ತಾಜಾವಾಗಿಯೇ ಇರುತ್ತದೆ. ಆದರೆ ದಿನ ಕಳೆದ ಹಾಗೆ ಕೊಳೆತು ನಾರಲು ಪ್ರಾರಂಭವಾಗುತ್ತವೆ. ಬಾಳಿಕೆ ಬಾರದ ಸಂಬಂಧಗಳು! ಒಟ್ಟಿನಲ್ಲಿ ಹೇಳುವುದಾದರೆ ಮೂರು ಗಂಟಿನ ನಂಟಿಗೆ ಮೂರು ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ. ಪ್ರಸ್ತುತ ನಮ್ಮ ದೇಶದಲ್ಲಿ ನಿರುದ್ಯೋಗಕ್ಕಿಂತ ಹೆಚ್ಚಾಗಿ ಈ ಸಮಸ್ಯೆಯೇ ಕಾಡುತ್ತಿದೆ ಎಂದರೆ ಅತಿಶಯೋಕ್ತಿಯಾಗದು.

ಈ ಸಮಸ್ಯೆಗೆ ಕಾರಣ ಹುಡುಕಲು ಹೊರಟರೆ ಹಲವಾರು ಕಾರಣಗಳು ಬಿಚ್ಚಿಕೊಳ್ಳುತ್ತವೆ. ಆದರೆ ಪ್ರತಿಯೊಂದು ಕಾರಣವೂ ಬಾಲಿಷದಂತೆ ಭಾಸವಾಗುತ್ತದೆ ವಿನಃ ಯಾವುದೂ ಗಂಭೀರವಾದದ್ದು ಎಂದು ಅನಿಸುವುದೇ ಇಲ್ಲ. ಮುಂದೊಂದು ದಿನ ಇದರ ಪರಿಣಾಮದಿಂದ ಮದುವೆಯೇ ಬೇಡ ಎಂಬ ಮನಸ್ಥಿತಿ ಬಹುತೇಕರಲ್ಲಿ ಮೂಡಿದರು ಯಾವುದೇ ಸಂದೇಹವಿಲ್ಲ.

ಪ್ರತಿಯೊಂದು ಸಂಬಂಧಗಳ ಭದ್ರ ಬುನಾದಿಯೇ ನಂಬಿಕೆ. ಅಡಿಪಾಯ ಭದ್ರವಾಗಿದ್ದರೆ ಆ ಕಟ್ಟಡ ಸುರಕ್ಷಿತವಾಗಿರುತ್ತದೆ. ಅಂತೆಯೇ ಸಂಬಂಧಗಳ ನಡುವೆ ನಂಬಿಕೆ ಎಂಬ ಅಡಿಪಾಯ ಗಟ್ಟಿಯಾಗಿದ್ದರೆ ಆ ಸಂಬಂಧವು ಕಟ್ಟಡದಂತೆಯೇ ಗಟ್ಟಿಯಾಗಿರುತ್ತದೆ. ಆದರೆ ಇತ್ತೀಚಿಗೆ ಯಾಕೋ ನಂಬಿಕೆ ಪ್ರತಿಯೊಂದು ಸಂಬಂಧಗಳ ನಡುವೆಯೂ ಕುಸಿದು ಬೀಳುತ್ತಿದೆ ಎಂದನಿಸುತ್ತಿದೆ.

ಹಿಂದೆ ಹೆಣ್ಣು ಮಗಳನ್ನು ಮದುವೆ ಮಾಡಿ ಗಂಡನ ಮನೆಗೆ ಕಳುಹಿಸಿ ಕೊಡುವಾಗ ಹಿರಿಯರು “ಗಂಡನ ಮನೆಯಲ್ಲಿ ಅದೆಷ್ಟೇ ತೊಡಕುಗಳು ಬಂದರು ಸಹಿಸಿಕೊಂಡು ಹೊಂದಾಣಿಕೆ ಮಾಡಿಕೊಂಡು ಜೀವನ ಸಾಗಿಸು. ಯಾವುದೇ ಕಾರಣಕ್ಕೂ ಮೆಟ್ಟಿದ ಮನೆಯನ್ನು ತೊರೆದು ಬರಬೇಡ’ ಎಂದು ಬುದ್ಧಿ ಮಾತು ಹೇಳುತ್ತಿದ್ದರು. ಹಾಗೆಯೇ ಹೆಣ್ಣು ಮಕ್ಕಳು ಸಮಾಜಕ್ಕೆ ಅಂಜಿ, ಪರಿವಾರದ ಪ್ರತಿಷ್ಠೆಗಾಗಿ, ಆಡುವವರ ಬಾಯಿಗೆ ಸಿಕ್ಕಿ ಆಹಾರವಾಗಬಾರದು ಎನ್ನುವ ಕಾರಣಕ್ಕೆ ಗಂಡನ ಮನೆಯಲ್ಲಿ ಅದೆಷ್ಟೇ ತೊಂದರೆಗಳಾದರು, ಸಮಸ್ಯೆಗಳು ಎದುರಾದರು ಸಹಿಸಿಕೊಂಡು ಎಲ್ಲ ಸವಾಲುಗಳನ್ನು ತಾಳ್ಮೆಯಿಂದ ಎದುರಿಸಿ ಹೊಂದಿಕೊಂಡು ಹೋಗುತ್ತಿದ್ದರು.

ಆದರೆ ಪ್ರಸ್ತುತ ಇಂದಿನ ಕಾಲಘಟ್ಟ ಸಂಪೂರ್ಣವಾಗಿ ಬದಲಾಗಿ ಹೋಗಿವೆ. ಹೆಣ್ಣು ಹೆತ್ತವರು ಆಕೆಗೆ ಬುದ್ಧಿ ಮಾತು ಹೇಳುವ ರೀತಿ ಹೇಗಿದೆ ಎಂದರೆ “ನಿನಗೆನಾದರೂ ಅಲ್ಲಿ ಬದುಕಲು ಕಷ್ಟವಾದರೆ ನಮಗೆ ತತ್‌ಕ್ಷಣ ಕರೆ ಮಾಡಿ ತಿಳಿಸು. ಮುಂದಿನದನ್ನು ನಾವು ನೋಡಿಕೊಳ್ಳುತ್ತೇವೆ’ ಎಂದು. ಈ ಮಾತುಕತೆ ನಡೆದ ಮರುದಿನವೇ ಅಳಿಯನಿಗೆ ಲಾಯರ್‌ ಕಡೆಯಿಂದ ಡಿವೋರ್ಸ್ ನೋಟಿಸ್ ಬರುತ್ತದೆ. ಮುಂದಿನದು ನಮಗೆ ತಿಳಿದೆ ಇದೆ. ಕೋರ್ಟಿನಲ್ಲಿ ಕಲಾಪ. ಕಲಾಪದ ನಡುವೆ ನ್ಯಾಯಮೂರ್ತಿಗಳು ಕೇಳುವ ಪ್ರಶ್ನೆಗೆ ಇಬ್ಬರ ಕಡೆಯಿಂದಲೂ ಬರುವ ಉತ್ತರ ಒಂದೇ. “ಜತಗೆ ಬದುಕಲು ಇಷ್ಟವಿಲ್ಲ, ಹೊಂದಾಣಿಕೆ ಇಲ್ಲ’.

ಅಲ್ಲಿಗೆ ತಂದೆ ಅದೆಷ್ಟೋ ವರ್ಷ ಕಷ್ಟಪಟ್ಟು ಕೂಡಿ ಹಾಕಿ ಸಾಲವೋ ಮೂಲವೋ ಮಾಡಿ ಮಾಡಿಸಿದ ಮದುವೆ ಅರೇ ಘಳಿಗೆಯಲ್ಲಿ ನೀರ ಮೇಲೆ ಇಟ್ಟ ಹೋಮದಂತೆ ಆಗುತ್ತದೆ. ಆತನ ನಿಸ್ವಾರ್ಥ ಸೇವೆಗೆ ಮಕ್ಕಳು ನೀಡುವ ಬೆಲೆಯಿದು! ಆತನ ಬೆವರಿನ ದುಡಿಮೆಗೆ ಮಕ್ಕಳು ಕೊಡುವ ಮರ್ಯಾದಿಯಿದು! ಒಂದು ಬಾರಿಯಾದರು ಇದರ ಕುರಿತಾಗಿ ಯೋಚಿಸಿ ತಾಳ್ಮೆಯಿಂದ ಮುಂದುವರೆದರೆ ಇಂಥಹ ಅದೆಷ್ಟೋ ಕೌಟುಂಬಿಕ ಕಲಹಗಳನ್ನು ತಪ್ಪಿಸಬಹುದು.

ಹೆಣ್ಣನ್ನು ಭೂಮಿಗೆ ಹೋಲಿಸುತ್ತಾರೆ. ಯಾಕೆಂದರೆ ಭೂಮಾತೆಯ ಮೇಲೆ ನಾವು ಎಷ್ಟೇ ಪ್ರಹಾರ ನಡೆಸಿದರು ಆಕೆ ತಾಳ್ಮೆ ಕಳೆದುಕೊಳ್ಳುವುದಿಲ್ಲ. ಹೆಣ್ಣು ಹಾಗೆಯೇ. ಸಹನಾ ಮೂರ್ತಿ. ಆದರೆ ಇಂದಿನ ಯುಗದ ಹೆಣ್ಣುಮಕ್ಕಳಲ್ಲಿ ಸಹನೆ ತಾಳ್ಮೆ ಇದೆಯೇ ಎಂದು ಕೇಳಿದರೆ ನಾನು ಕೊಡುವ ಉತ್ತರ ಖಂಡಿತ ಇಲ್ಲ. ಇದ್ದಿದ್ದರೆ ಹೆಣ್ಣು ಮಕ್ಕಳು ಮದುವೆಯಾದ ಮೂರೇ ತಿಂಗಳಿಗೆ ಓಡಿ ಬಂದು ತವರು ಮನೆಯಲ್ಲಿ ಕೂರುವುದಿಲ್ಲ. ಅಥವಾ ಕೂರುವಂತ ಪ್ರಮೇಯವೂ ಬರುವುದಿಲ್ಲ. ಅದು ಕೂಡ ಬಾಲಿಶ ಕಾರಣಕ್ಕೆ! ಇದನ್ನು ವಿಪರ್ಯಾಸ ಅನ್ನಬೇಕೋ ಅಥವಾ ನಮ್ಮಲ್ಲಿ ಕುಂಠಿತಗೊಳ್ಳುತ್ತಿರುವ ಸಂಸ್ಕಾರದ ಅಡ್ಡ ಪರಿಣಾಮವೋ ನನಗಂತೂ ತಿಳಿಯುತ್ತಿಲ್ಲ.

ಇಲ್ಲಿ ಪ್ರತಿಯೊಂದು ಕೂಡ ಆಧುನಿಕವೇ ಆಗುತ್ತಿದೆ. ಜತೆಗೆ ಸಂಬಂಧಗಳು, ಬಾಂಧವ್ಯಗಳು ಎಲ್ಲವೂ. ಇವೆಲ್ಲ ಯಾವುದರ ಮುನ್ಸೂಚನೆಯೋ ಆ ದೇವರೇ ಬಲ್ಲ. ವೈವಾಹಿಕ ಜೀವನದಲ್ಲಿ ಪರಸ್ಪರ ಪ್ರೀತಿ, ಜಗಳ, ಸಣ್ಣ ಪುಟ್ಟ ಮನಸ್ತಾಪ ಎಲ್ಲವೂ ಸಹಜ. ಹಾಗೆಂದ ಮಾತ್ರಕ್ಕೆ ಪ್ರತಿಯೊಂದು ವಿಷಯಕ್ಕೂ ಕೋಪಿಸಿಕೊಂಡು ತಾಳ್ಮೆ ಕಳೆದುಕೊಂಡು ಕೋರ್ಟ್‌ ಮೆಟ್ಟಿಲು ಹತ್ತುವುದು ಮೂರ್ಖತನವೇ ಹೊರತು ಬುದ್ಧಿವಂತಿಕೆ ಅಲ್ಲ. ಬುದ್ಧಿ ಇದ್ದವರು ಸಮಾಧಾನದ ಚಿತ್ತದಿಂದ ಯೋಚಿಸಿ ಹದಗೆಟ್ಟಿರುವ ಸಂಬಂಧವನ್ನು ಹೇಗೆ ಗಟ್ಟಿಗೊಳಿಸುವುದು ಎಂದು ನೋಡುತ್ತಾರೆಯೇ ವಿನಃ ಕೋರ್ಟ್‌ ಮೆಟ್ಟಿಲು ಹತ್ತುವುದಿಲ್ಲ.

ಹಾಗೆ ನೋಡುವುದಾದರೆ ವೈವಾಹಿಕ ಜೀವನದಲ್ಲಿ ಗಂಡು ಹೆಣ್ಣಿನ ನಡುವೆ ನಡೆಯುವ ಪ್ರತಿಯೊಂದು ಕಲಾಪಕ್ಕೂ ಕೋರ್ಟ್‌ ಮೆಟ್ಟಿಲು ಹತ್ತಿ ವಿಚ್ಚೇದನದ ಮೊರೆ ಹೋದರೆ ದಾಂಪತ್ಯಕ್ಕೆ ಯಾವ ಅರ್ಥವು ಇರುವುದಿಲ್ಲ. ಎಲ್ಲ ಸಮಸ್ಯೆಗಳಿಗೂ ಪರಿಹಾರ ನಮ್ಮ ಕೈಯಲ್ಲೇ ಇರುತ್ತದೆ. ಕೋಪದ ಕೈಗೆ ಬುದ್ಧಿ ಕೊಡದೆ ತಾಳ್ಮೆಯಿಂದ ಯೋಚಿಸಿ ನೋಡಿದರೆ ಕೋರ್ಟ್‌, ಕೇಸು, ಕಲಾಪ ಎಲ್ಲದಕ್ಕಿಂತಲೂ ಉತ್ತಮವಾದ ಪರಿಹಾರ ಸಿಗುತ್ತದೆ. ಅಲ್ಲಿ ನಮ್ಮ ಸಮಸ್ಯೆಗಳ ಕುರಿತು ವಾದ ಮಂಡನೆ ಮಾಡುವವರು ನಾವೇ. ಸರಿ ತಪ್ಪುಗಳ ತಾಳೆ ಹಾಕಿ ಸೂಕ್ತ ಪರಿಹಾರ ಕೊಡುವ ನ್ಯಾಯಮೂರ್ತಿಗಳು ನಾವೇ.

ಇದರಿಂದ ಅದೆಷ್ಟೋ ಸಂಸಾರಗಳು ಕೂಡ ಉಳಿಯುತ್ತವೆ. ನಮ್ಮ ಅನನ್ಯ ಸಂಸ್ಕೃತಿಯೂ ಕೂಡ ಉಳಿಯುತ್ತದೆ. ಜತೆಗೆ ಹೆತ್ತವರ ಕಣ್ಣಲ್ಲಿ ಕಣ್ಣೀರು ಹಾಕಿಸುವುದು ಕೂಡ ತಪ್ಪುತ್ತದೆ.

-ಸುಸ್ಮಿತಾ ಕೆ. ಎನ್‌. ಅನಂತಾಡಿ

ಬಂಟ್ವಾಳ

ಟಾಪ್ ನ್ಯೂಸ್

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

7-uv-fusion

Trip: ಕೊನೆಗೂ ಈಡೇರಿತು ತ್ರಿಮೂರ್ತಿಗಳ ಪ್ರವಾಸ

5-uv-fusion

Taro: ಕೆಸುವೆಂದು ಕರುಬಬೇಡಿ

3-uv-fusion

UV Fusion: ಇನ್ನಾದರೂ ಎಚ್ಚೆತ್ತುಕೋ ಮಾನವ

2-uv-fusion-1

Kota Shivarama Karanth: ಕಾರಂತರ ನೆನಪು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

3

Puttur: ಟ್ರೀ ಪಾರ್ಕ್‌ ನಿರ್ಲಕ್ಷ್ಯಕ್ಕೆ ದುಡ್ಡಿನ ಕೊರತೆ ನೆಪ

10-chikkamagalur

Chikkamagaluru: ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ ಬಸ್;‌ ವಿದ್ಯಾರ್ಥಿಗಳಿಗೆ ಗಾಯ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.