Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ


Team Udayavani, May 8, 2024, 4:50 PM IST

4

ಭಾರತ ದೇಶದ ನಕ್ಷೆ ಅದರಲ್ಲಿ ಕರ್ನಾಟಕ ರಾಜ್ಯ ಅದರ ಮೂಲಕ ಸಿಂಹದಂತೆ ಘರ್ಜನೆ ಮಾಡುತ್ತಾ, ಹಾಲಿವುಡ್‌ನ‌ ಎಂಜಿಎಂ ಲಾಂಛನದ ರೀತಿಯಲ್ಲಿ ಕನ್ನಡ ಚಲನಚಿತ್ರಗಳ ರಂಗದಲ್ಲಿ ಪ್ರವೇಶ ಮಾಡಿದ ದ್ವಾರಕೀಶ್‌ ಅಥವಾ ಬಂಗಲೆ ಶಾಮರಾವ್‌ ದ್ವಾರಕನಾಥ್‌ರ ಚಿತ್ರಜೀವನ ಬಹುರೋಚಕ.

ನಾಯಕ ನಟ, ಹಾಸ್ಯ ನಟ, ಪೋಷಕ ನಟ, ನಿರ್ಮಾಪಕ, ನಿರ್ದೇಶಕ ಹೀಗೆ ಚಿತ್ರರಂಗದಲ್ಲಿನ ಎಲ್ಲ ಪಾತ್ರಗಳನ್ನು ನಿರ್ವಹಿಸಿದ ಕೆಲವೇ ಕೆಲವು ಜನರಲ್ಲಿ ದ್ವಾರಕೀಶ್‌ ಕೂಡ ಒಬ್ಬರು.

ಡಾ| ರಾಜ್‌ಕುಮಾರ್‌, ವಿಷ್ಣುವರ್ದನ್‌, ಅಂಬರೀಶ್‌, ರಜನಿಕಾಂತ್‌, ಶಂಕರನಾಗ್‌ ಮುಂತಾದ ಕಲಾವಿದರೊಂದಿಗೆ ನಟನೆ ಮತ್ತು ಅವರ ಚಿತ್ರಗಳನ್ನು ನಿರ್ಮಿಸಿದ ಕೀರ್ತಿ ದ್ವಾರಕೀಶ್‌ಗೆ ಸಲ್ಲುತ್ತದೆ.

ದ್ವಾರಕೀಶ್‌ ಅವರು 1942ರ ಆಗಸ್ಟ್‌ 19ರಂದು ಹುಣಸೂರುನಲ್ಲಿ ಶಾಮರಾವ್‌ ಮತ್ತು ಜಯಮ್ಮಾ ಎಂಬ ಮಾಧ್ವ ಬ್ರಾಹ್ಮಣ ದಂಪತಿಯ ಮಗನಾಗಿ ಜನಿಸಿದರು. ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಅನಂತರ ಸಿಪಿಸಿ ಪಾಲಿಟೆಕ್ನಿಕ್‌ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಡಿಪ್ಲೊಮಾ ಕೋರ್ಸ್‌ ಮುಗಿಸಿದರು. ಅನಂತರ ಅವರ ಸೋದರನ ಜತೆ ಸೇರಿ ಭಾರತ್‌ ಆಟೋ ಸ್ಪೇರ್‌ಸ್ಟೋರ್‌ ಶುರುಮಾಡಿದರು.

ದ್ವಾರಕೀಶ್‌ ಅವರ ಸಿನೆಮಾ ಜೀವನಕ್ಕೆ ಸ್ಪೂರ್ತಿ. ಅವರ ಮಾವ ಹುಣಸೂರು ಕೃಷ್ಣಮೂರ್ತಿ ಮತ್ತು ಇವರು ಸೇರಿ ನಿರ್ದೇಶಿಸಿದ ವೀರ ಸಂಕಲ್ಪ ಚಿತ್ರದಲ್ಲಿನ ರಾಜನ ಪಾತ್ರದ ಮೂಲಕ ಕನ್ನಡ ಚಲನಚಿತ್ರರಂಗವನ್ನು ಪ್ರವೇಶಿಸಿದರು. 1966ರಲ್ಲಿ ತುಂಗಾ ಬ್ಯಾನರ್ಸ್‌ನಡಿ ಮಮತೆಯ ಬಂಧನ ಎಂಬ ಸಿನೆಮಾದ ಸಹ ನಿರ್ಮಾಪಕರಾದರು. 1969ರಲ್ಲಿ ಮೇಯರ್‌ ಮುತ್ತಣ್ಣ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ಮಾಪಕರಾದರು. ಇದು ಡಾ| ರಾಜ್‌ಕುಮಾರ್‌ ಮತ್ತು ಭಾರತಿ ಪ್ರಮುಖ ಪಾತ್ರದಲ್ಲಿ ನಟಿಸಿದ ಸೂಪರ್‌ಹಿಟ್‌ ಸಿನೆಮಾ.

ಅನಂತರದಲ್ಲಿ ರಾಜ್‌ಕುಮಾರ್‌ ಅವರ ಭಾಗ್ಯವಂತರು, ಸ್ವತಃ ತಾನೇ ನಾಯಕನಾಗಿ ನಟಿಸಿದ ಕುಳ್ಳ ಏಜೆಂಟ್‌ 000, ಕೌವ್‌ ಬಾಯ್‌ ಕುಳ್ಳ ಚಿತ್ರಗಳನ್ನು ನಿರ್ಮಿಸಿದರು. ಕುಳ್ಳ ಏಜೆಂಟ್‌ 000 ಚಿತ್ರದಲ್ಲಿನ “ಆಡು ಆಟ ಆಡು’ ಹಾಡಿಗೆ ಹಿಂದಿಯ ಖಾತ್ಯ ಗಾಯಕ ಕಿಶೋರ್‌ಕುಮಾರ್‌ ಅವರನ್ನು ಕರೆತಂದಿದ್ದು ಅವರ ಸಾಧನೆ ಮತ್ತು ಅಂದಿನ 70ರ ದಶಕದಲ್ಲಿ ಒಂದು ಹಾಡಿಗೆ ಕಿಶೋರ್‌ಕುಮಾರ್‌ಗೆ ದೊಡ್ಡ ಮೊತ್ತದ ಸಂಭಾವನೆ ನೀಡಿದ್ದರು.

ಅನಂತರದಲ್ಲಿ ದ್ವಾರಕೀಶ್‌ ವಿಷ್ಣುವರ್ಧನ್‌ರ ಕಳ್ಳ ಕುಳ್ಳ , ಕಿಟ್ಟು ಪುಟ್ಟು , ರಾಯರು ಬಂದರು ಮಾವನ ಮನೆಗೆ, ಇಂದಿನ ರಾಮಾಯಣ, ಗಲಾಟೆ ಸಂಸಾರ, ಪ್ರೀತಿ ಮಾಡು ತಮಾಷೆ ನೋಡು ಸಹಿತ ಹಲವಾರು ಚಿತ್ರಗಳಲ್ಲಿ ನಟಿಸಿ ಜನಪ್ರಿಯ ಜೋಡಿಯಾಗಿದ್ದರು ಮತ್ತು ಗುರು ಶಿಷ್ಯರು, ಪ್ರಚಂಡ ಕುಳ್ಳ, ನ್ಯಾಯ ಎಲ್ಲಿದೆ, ಪೆದ್ದ ಗೆದ್ದ, ಪೋಲಿಸ್‌ ಪಾಪಣ್ಣ , ಮನೆ ಮನೆ ಕಥೆ, ಕಲಾವಿದ ಹೀಗೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದರು.

ದ್ವಾರಕೀಶ್‌ ತಮ್ಮ ನಿರ್ದೇಶನದ ನೀ ಬರೆದ ಕಾದಂಬರಿ, ಡ್ಯಾನ್ಸ್‌ ರಾಜ ಡ್ಯಾನ್ಸ್‌ , ಮಿಡಿದ ಶುತ್ರಿ ಹೀಗೆ ಹಲವಾರು ಪ್ರಸಿದ್ಧ ಚಿತ್ರಗಳ ಮೂಲಕ ಹೊಸ ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಹೀಗೆ ತಮ್ಮ 81ನೇ ವಯಸ್ಸಿನಲ್ಲಿ ನಿಧನಹೊಂದಿದ ದ್ವಾರಕೀಶ್‌ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವೆಂದರೆ ತಪ್ಪಾಗಲಾರದು, ದ್ವಾರಕೀಶ್‌ರ ಆತ್ಮಕ್ಕೆ ಶಾಂತಿ ಸಿಗಲೆಂದೂ ರಾಜ್ಯದ ಜನತೆಯ ಪರವಾಗಿ ದೇವರಲ್ಲಿ ಪ್ರಾರ್ಥಿಸೋಣ.

-ರಾಸುಮ ಭಟ್‌

ಕುವೆಂಪು ವಿಶ್ವವಿದ್ಯಾಲಯ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.