UV Fusion: ಎಲ್ಲರಿಗೂ ಬದುಕುವ ಹಕ್ಕಿದೆ


Team Udayavani, Sep 18, 2024, 4:09 PM IST

16-uv-fusion

ನಮ್ಮ ಸುತ್ತಮುತ್ತಲಿನ ಪರಿಸರ ತನ್ನೊಡಲಿನಲ್ಲಿ ಅನೇಕ ಪ್ರಾಣಿ ಪಕ್ಷಿ ಜೀವ ಸಂಕುಲವನ್ನು ಸಲಹುತ್ತಿದೆ. ಪ್ರತಿಯೊಂದು ಜೀವಿಗೂ ತನ್ನದೇ ಆದ ವಿಶಿಷ್ಟ ರಚನೆ, ಲಕ್ಷಣ, ಸ್ವಭಾವ ಗುಣಗಳಿವೆ. ಈ ವಿಭಿನ್ನತೆಯ ಮೇಲೆ ಅವುಗಳ ಜೀವನ ಹಾಗೂ ವರ್ತನೆ ಅವಲಂಭಿತವಾಗಿದೆ. ಮನುಷ್ಯ ಎಲ್ಲ ಪ್ರಾಣಿ ಪಕ್ಷಿಗಳಿಗಿಂತ ಬುದ್ಧಿವಂತ ಹಾಗೂ ಉನ್ನತ ಜೀವನಮಟ್ಟ ಹೊಂದಿದ್ದರೂ ಕೆಲವು ಜೀವಿಗಳಿಗೆ ಅಂಜಿ ಬದುಕುತ್ತಾನೆ. ಇದು ಮಾನವನ ಸಹಜ ಗುಣ ಎಂದೇ ಹೇಳಬಹುದು.

ಬುದ್ಧಿವಂತ ಪ್ರಾಣಿ ಭಯಪಡುವ ಹಲವು ಜೀವಿಗಳ ಪೈಕಿ ಸರ್ಪ ಪ್ರಮುಖವಾಗಿದೆ. ಸರ್ಪಗಳಿಗೆ ಹಿಂದೂ ಧರ್ಮದಲ್ಲಿ ವಿಶೇಷ ಸ್ಥಾನಮಾನವಿದ್ದು, ಲಯಕಾರ ಪರಮೇಶ್ವರನ ಪರಮಆಭರಣ ಇದಾಗಿದೆ. ಶಿವನ ಕೊರಳನ್ನು ಅಲಂಕರಿಸಿದ ಹಾವನ್ನು ಪ್ರತ್ಯಕ್ಷವಾಗಿ ಕಂಡೊಡನೆ ಒಂದು ಬಗೆಯ ಭಯ ಹಾಗೂ ಭಕ್ತಿ ಮೂಡುತ್ತದೆ. ಕಲ್ಲಿನ ನಾಗದೇವರನ್ನು ಕಂಡು ಕೈಮುಗಿಯಲು ನೂರಾರು ಮೈಲಿ ಲೆಕ್ಕಿಸದೆ ಬರುವ ಜನರು, ಅದೇ ಜೀವಂತ ಹಾವನ್ನು ಕಂಡೊಡನೆ ಮೈಲುಗಟ್ಟಲೆ ಓಡಿ ಹೋಗುತ್ತಾರೆ ಎಂಬುದೇ ಸತ್ಯ.

ಯಾವ ಜೀವಿಯಾದರು ತನಗೆ ಹಾನಿ ಉಂಟಾಗದೆ ಯಾರ ಮೇಲೂ ದಾಳಿ ಮಾಡುವುದಿಲ್ಲ, ಅದರಂತೆ ಸರ್ಪವು ಕೂಡ. ಆದರೆ ಸಾಮಾನ್ಯವಾಗಿ ಜನರು ತಮ್ಮ ಮೇಲೆ ಹಾವು ದಾಳಿ ಮಾಡುವ ಮೊದಲೇ ಅದಕ್ಕೆ ತೊಂದರೆಯನ್ನು ಉಂಟುಮಾಡುತ್ತಾರೆ. ಅದೇ ಕಲ್ಲಿನ ನಾಗನಮೂರ್ತಿ ಕಂಡರೆ ಹಾಲೆರೆದು ಕೈಮುಗಿದು ನಿಲ್ಲುತ್ತಾರೆ. ಇನ್ನು ನಾಗರ ಪಂಚಮಿ ಹಬ್ಬಕ್ಕಂತು ಮಣ್ಣಿನಲ್ಲಿ ಮೂರ್ತಿಯಾದ ಸರ್ಪವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ಪೂಜಿಸುತ್ತಾರೆ.

“”ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು

ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ನಾ.

ಉಂಬ ಜಂಗಮ ಬಂದಡೆ ನಡೆಯೆಂಬರು,

ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ನಾ.

ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ,

ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ.”

ಎಂಬ ಬಸವಣ್ಣನವರು ಹೇಳಿದ ವಚನ ಇಂತಹ ಸಂದರ್ಭದಲ್ಲಿ ನೆನಪಾಗುತ್ತದೆ. ಜೀವಂತಿಕೆಗೆ ದೊರೆ ಯದ ಗೌರವ ಮೂರ್ತಿಗೆ ತೋರಿದರೆ ಏನು ಫ‌ಲ. ವಿಶೇಷವಾಗಿ ನಾಗರ ಪಂಚಮಿ ಹಬ್ಬದಲ್ಲಿ ಭಕ್ತರು ಹುತ್ತಗಳಿಗೆ ಹಾಲನ್ನೆರೆದು, ಹೂವು, ಹಣ್ಣು, ಧೂಪ, ದೀಪಗಳಿಂದ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಆದರೆ ಕೇವಲ ಒಂದು ದಿನದಕ್ಕೆ ಕಲ್ಲಿನ ನಾಗದೇವರ ಮೇಲೆ ಗೌರವ ಭಕ್ತಿ ತೋರಿದರೆ ಸಾಲದು. ಹಾವುಗಳನ್ನು ಕಂಡಾಗ ಅವುಗಳಿಗೆ ಏನು ತೊಂದರೆ ನೀಡದೆ ಹೋದರೆ ಅದುವೇ ನಿಜವಾದ ಗೌರವ.

ಏಕೆಂದರೆ ಪ್ರತಿಯೊಂದು ಜೀವಸಂಕುಲಗಳಿಗೂ ಈ ಭೂಮಿಯಲ್ಲಿ ಬದುಕುವ ಹಕ್ಕು ಭಗವಂತ ನೀಡಿದ್ದಾನೆ. ಅದಕ್ಕೆ ಅಡಚಣೆ ಉಂಟುಮಾಡುವ ನೈತಿಕತೆ ನಮಗಿಲ್ಲ. ಪ್ರತಿಯೊಂದು ಜೀವಿಯನ್ನು ಜೀವಿಸಲು ಬಿಡೋಣ. ನಮ್ಮಿಂದ ಸಾಧ್ಯವಾದರೆ ಸಹಾಯ ಸಹಕಾರ ಮಾಡಬೇಕು ಇಲ್ಲವಾದರೆ ತೊಂದರೆ ಮಾಡದೆ ಸುಮ್ಮನಿರುವುದೇ ಲೇಸು ಮಾನವನಿಂದ ಅದಕ್ಕಿಂತ ದೊಡ್ಡ ಉಪಕಾರ ಮತ್ತೂಂದಿಲ್ಲ.

- ಪೂಜಾ ಹಂದ್ರಾಳ

ಶಿರಸಿ

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.