Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…


Team Udayavani, Sep 8, 2024, 9:26 AM IST

3-ganesha

ಈ ವರ್ಷ ಸೆಪ್ಟೆಂಬರ್‌ 07 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಈ ಹಬ್ಬದಲ್ಲಿ ಬೆಳ್ಳಿ ಗಣೇಶ ಅಥವಾ ಮಣ್ಣಿನಿಂದ ಮಾಡಿದ ಗಣೇಶ ಮೂರ್ತಿಯನ್ನು ಇಟ್ಟು, ಹಬ್ಬವನ್ನು ಆಚರಿಸಲಾಗುತ್ತದೆ. ಗಣೇಶನು ತಿಂಡಿ ಪ್ರಿಯ, ಹಾಗಾಗಿ ಅವನಿಗೆ ಇಷ್ಟವಾಗುವ ಮೋದಕ, ಕಡಬು, ಚಕ್ಕಲಿ, ಕೋಡುಬಳೆ ಸೇರಿದಂತೆ ವಿವಿಧ ಬಗೆಯ ತಿಂಡಿಗಳನ್ನು ಮಾಡಿ, ನೈವೇದ್ಯಕ್ಕೆ ಇಡುತ್ತಾರೆ. ಗಣೇಶನ ಮೂರ್ತಿಯನ್ನು ಕೇವಲ ಮನೆಯಲ್ಲಿ ಮಾತ್ರವಲ್ಲ, ಶಾಲಾ-ಕಾಲೇಜು, ಕಚೇರಿಗಳಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲೂ ವಿಶೇಷ ಗಾತ್ರದ ಗಣೇಶನನ್ನು ಇಟ್ಟು ಪೂಜೆ ಮಾಡಲಾಗುತ್ತದೆ.

ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಮತ್ತು ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ, ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಪರಿಸರ ಪ್ರೇಮಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್‌ ಆಫ್‌ ಪ್ಯಾರಿಸ್ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ.

ಗಣೇಶ ಮೂರ್ತಿ ವಿಸರ್ಜನೆ ಹೇಗೆ ಇರಬೇಕು?

ಪಿಓಪಿ ಅಥವಾ ಬಣ್ಣವನ್ನು ಬಳಸಿದ ಮೂರ್ತಿಗಳನ್ನು ನೇರವಾಗಿ ಹೊಂಡ,ನದಿಗಳಿಗೆ ಬಿಡದೆ ಬಕೆಟ್‌ನಲ್ಲಿ ವಿಸರ್ಜಿಸಬೇಕು ಅಥವಾ ಮೂರ್ತಿಗಳನ್ನು ವಿಸರ್ಜಿಸಲು ಕಲ್ಯಾಣಿಗಳು ತಾತ್ಕಾಲಿಕ ಹೊಂಡಗಳನ್ನು ನಿರ್ಮಿಸಿ ಅದರಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು. ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್‌ ಹಾರ ಎಲ್ಲವನ್ನೂ ತೆಗೆದು ನಂತರ ಮೂರ್ತಿಯನ್ನು ವಿಸರ್ಜನೆ ಮಾಡಬೇಕು.

ಅವೈಜ್ಞಾನಿಕ ವಿಸರ್ಜನೆಯ ಪರಿಣಾಮಗಳು:

ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ.ಈ ಎಲ್ಲಾ ತಪ್ಪುಗಳಿಂದ ಪರಿಸರ ಮಾಲಿನ್ಯ ಉಂಟಾಗುವುದು ಸಹಜ. ನಮ್ಮ ಪರಿಸರದಲ್ಲಿ ನಾವೇ ಉಂಟುಮಾಡಿದ ಮಾಲಿನ್ಯಗಳು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತಂದೊಡ್ಡುತ್ತವೆ. ಅದಕ್ಕಾಗಿ ಆದರೂ ನಾವು ಎಚ್ಚೆತ್ತುಕೊಂಡು, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು.

ಒಟ್ಟಾರೆಯಾಗಿ ನಮ್ಮ ಸಂತೋಷದ ಸಲುವಾಗಿ ಗಣೇಶ ಹಬ್ಬದ ಆಚರಣೆ ನಮಗೆ ನೋವನ್ನು ತರಬಾರದು. ಹಾಗಾಗಿ ನಾವು ಒಂದಿಷ್ಟು ಒಳ್ಳೆಯ ಕೆಲಸ ಹಾಗೂ ಪ್ರತಿಜ್ಞೆಯ ಮೂಲಕ ಹಬ್ಬದ ಆಚರಣೆ ಮಾಡುವುದು ಸೂಕ್ತ. ಅದರಿಂದ ಆರೋಗ್ಯಕರ ಹಬ್ಬದ ಆಚರಣೆ ನಮ್ಮದಾಗುವುದು. ಗಣೇಶ ಹಬ್ಬದಲ್ಲಿ ರಸ್ತೆ ಬದಿಯಲ್ಲಿ ಹಾಗೂ ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಜಾಗೃತಿ ಅರಿವು ಮೂಡಿಸುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಬೇಕು.

ಗಣೇಶ ಹಬ್ಬದ ಅಂಗವಾಗಿ ನಾವು ಪಾಲಿಸಬೇಕಾದ ನಿಯಮಗಳು

1)ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಬೇಕು.

2)ಮಣ್ಣಿನಲ್ಲಿ ಕರಗದಂತಹ ರಾಸಾಯನಿಕ ವಸ್ತು ಹಾಗೂ ಪ್ಲಾಸ್ಟಿಕ್‌ ಬಳಕೆಯಿಂದ ದೂರ ಇರುವುದು ಸೂಕ್ತ.

3)ಬಾಳೆ ಎಲೆ ಅಥವಾ ಪುನಃ ಬಳಸಬಹುದಾದಂತಹ ಸ್ಟೀಲ್‌ ತಟ್ಟೆಯನ್ನು ಬಳಸಿ.

4)ರಾಸಾಯನಿಕ ಬಣ್ಣಗಳು ಬೇಡ.

5)ಪಟಾಕಿ ಮತ್ತು ಮನರಂಜನಾ ಶಬ್ದ ಮಾಲಿನ್ಯವನ್ನು ನಿಯಂತ್ರಿಸಿ.

6)ನೈಸರ್ಗಿಕ ಹೂವುಗಳ ಬಳಕೆ ಮಾಡಿ.

7)ವಿಸರ್ಜನೆಯೂ ಪರಿಸರ ಸ್ನೇಹಿಯಾಗಿರಬೇಕು.

8)ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು.

-ಬಸವರಾಜ ಎಂ. ಯರಗುಪ್ಪಿ

ಗದಗ

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.