Woman: ಸದಾಕಾಲ ಸಾಧಕಿ ಹೆಣ್ಣು


Team Udayavani, Apr 19, 2024, 2:27 PM IST

13-

ಹೆಣ್ಣು ಸಂಸಾರದ ಕಣ್ಣು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಮೊದಲಾದ ಮಾತುಗಳು ಅಕ್ಷರಶಃ ಸತ್ಯ. ಒಂದು ಮನೆಯಲ್ಲಿ ಹೆಣ್ಣು ಕಲಿತರೆ ಆ ಮನೆಗೆ ಬೆಳಕಾಗುವಳು. ಸಮಾಜದ ಎಲ್ಲ ಹೆಣ್ಣು ಮಕ್ಕಳು ಶಿಕ್ಷಣ ಪಡೆದರೆ ಸಮಾಜವನ್ನೇ ಉದ್ಧರಿಸುವರು.

ಸಮಾಜದ ಪ್ರಗತಿಯ ರಥ ಸಾಗಬೇಕಾದರೆ ಗಂಡು-ಹೆಣ್ಣು ಎಂಬ ಎರಡು ಚಕ್ರಗಳು ಇರಲೇಬೇಕು. ರಥಕ್ಕೆ ಹೇಗೆ ಒಂದು ಚಕ್ರ ಇಲ್ಲವಾದರೆ ಚಲಿಸಲು ಸಾಧ್ಯವಿಲ್ಲವೋ  ಸಮಾಜವೂ ಹಾಗೆಯೇ.  ಪ್ರಕೃತಿಯೇ ಗಂಡು, ಹೆಣ್ಣಿಗೂ ಸಮಾನವಾದ ಸ್ಥಾನಮಾನವನ್ನು ನೀಡಿಬಿಟ್ಟಿದೆ. ಯಾರೂ ಹೆಚ್ಚಲ್ಲ, ಯಾರೂ ಕಡಿಮೆಯಲ್ಲ. ರಾಷ್ಟ್ರಕವಿ ಕುವೆಂಪು, ದೈಹಿಕವಾಗಿ ಗಂಡು-ಹೆಣ್ಣು ಎರಡು ಲಿಂಗಗಳನ್ನು ಕಾಣಬಹುದು, ಅಧ್ಯಾತ್ಮಿಕವಾಗಿ ಆತ್ಮಗಳಿಗೆ ಯಾವುದೇ ಲಿಂಗ ಭೇದವಿಲ್ಲ ಎಂದು ಹೇಳಿದ್ದಾರೆ.

ಪುರುಷನಷ್ಟೇ ಸಮಾನ ಸಾಮರ್ಥ್ಯ ಉಳ್ಳವಳು ಹೆಣ್ಣು. ಆದರೆ ಹಿಂದಿನ ಪುರುಷ ಪ್ರಧಾನ ಸಮಾಜದಲ್ಲಿ ಗಂಡು ಶ್ರೇಷ್ಠ, ಹೆಣ್ಣು ಕನಿಷ್ಠ, ಹೆಣ್ಣು ಗಂಡಿನ ಗುಲಾಮಳು, ಅವಳೇನಿದ್ದರೂ ಗಂಡು ಹೇಳಿದ ಹಾಗೆ ಕೇಳಬೇಕು ಎನ್ನುವ ಮನೋಭಾವನೆಯನ್ನು ಸ್ವಾರ್ಥಪರ ಪುರುಷರು ಹುಟ್ಟು ಹಾಕಿದ್ದರ ಪರಿಣಾಮವಾಗಿ ಹೆಣ್ಣು ಅವಮಾನಕ್ಕೊಳಗಾದಳು, ದೌರ್ಜನ್ಯಕ್ಕೊಳಗಾದಳು, ಅಬಲೆಯಾದಳು, ಪರಾವಲಂಬಿಯಾದಳು. ಇತ್ತೀಚೆಗೆ ನಡೆಯುತ್ತಿರುವ ಮಹಿಳೆಯ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರಗಳನ್ನು ಕಂಡು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಘಟನೆಗಳು ನಮ್ಮ ಭಾರತಿಯ ಉನ್ನತ ಸಂಸ್ಕೃತಿಗೆ ಘೋರ ಅಪಮಾನವನ್ನು ಮಾಡುವಂತವಷ್ಟೇ ಅಲ್ಲ ಮಹಿಳೆಯ ಅಳಿವು ಉಳಿವಿನ ಪ್ರಶ್ನೆಯಂತೆ ತೋರುತ್ತವೆ.

ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಯಾರಿಗೂ ಕಮ್ಮಿ ಇಲ್ಲ ಎನ್ನುವ ಹಾಗೆ ಎಲ್ಲ ಕ್ಷೇತ್ರದಲ್ಲಿಯೂ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆ ಸಾಧನೆ ಮಾಡುತ್ತಿದ್ದಾಳೆ.  ಹೆಣ್ಣು ರಾಷ್ಟ್ರಪತಿಯಾಗುವುದು ಒಂದು ಸಾಧನೆಯಾದರೆ, ತನ್ನ ಕುಟುಂಬವನ್ನು ಅಚ್ಚುಕಟ್ಟಾಗಿ ನಿಭಾಯಿಸುವುದೂ ಕೂಡ ಸಾಧನೆಯೇ.

ಹೆಣ್ಣು ಪುರುಷನಂತೆಯೇ ಬೇರೆ ಬೇರೆ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕಾದರೆ ಅವಳಿಗೆ ಎದುರಾಗುವ ಮೊದಲ ಸವಾಲು ಕುಟುಂಬ. ಹೆಣ್ಣು ತಾಯಿಯಾಗಿ, ಮಡದಿಯಾಗಿ, ಸೊಸೆಯಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಾಳೆ. ಕುಟುಂಬರೂಪಿಯಾದ ಹೆಣ್ಣು ಸಮಾಜ ರೂಪಿಯಾಗಿ ನಿಲ್ಲಬೇಕಾದರೆ ಕುಟುಂಬದವರ ಸಹಕಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಸಹಕಾರ ದೊರೆತರೆ ಹೆಣ್ಣು ಯಾವ ಸಾಧನೆಯನ್ನು ಬೇಕಾದರೂ ಮಾಡಬಲ್ಲಳು ಎನ್ನುವುದಕ್ಕೆ ಬಹಳಷ್ಟು ಸಾಕ್ಷಿಗಳು ನಮ್ಮ ನಡುವೆಯೇ ಇವೆ.

-ಸಿಂಧೂರ್‌ ಗೌಡ

ವಿವಿ, ತುಮಕೂರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Ganesh Chaturthi: ಗಣೇಶ ಬಂದ

14-wayanad

Wayanad: ವಯನಾಡಿನ ಪ್ರಕೃತಿ ವಿಕೋಪ ಮತ್ತು ಮಾನವೀಯತೆ

13-

UV Fusion: ಅನಾಹುತಕಾರಿ ಮಾನವ

11

UV Fusion: ನಮ್ಮ ಔನ್ನತ್ಯವನ್ನು ನಾವೇ ನಿರ್ಧರಿಸಬೇಕಲ್ಲವೇ?

10-

Childhood: ಈ ಬಾಲ್ಯ ಮತ್ತೊಮ್ಮೆ ಮರುಕಳಿಸಬಾರದೇ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.