Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ


Team Udayavani, Sep 18, 2024, 6:07 PM IST

22–uv-fusion

ಸಾಧನೆ ಎಂದರೆ ಯಾವುದೇ ವಿಷಯದಲ್ಲಿ ಪ್ರಯತ್ನ, ಕೌಶಲ ಮತ್ತು ಧೈರ್ಯದಿಂದ ಯಶಸ್ಸನ್ನು ಗಳಿಸುವುದು. ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಶಿಷ್ಟ ಮತ್ತು ವಿಭಿನ್ನ ಪ್ರತಿಭೆಯಿರುತ್ತದೆ ಹಾಗಾಗಿ ಸಾಧನೆ ಎಂಬುದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಆದರೆ ಸಾಧಿಸಲು ಅಗತ್ಯವಾಗಿ ಇರಬೇಕಾದದ್ದು ಸ್ಪಷ್ಟತೆ.

ಸ್ಪಷ್ಟತೆ ಸಾಧನೆಯ ಹಾದಿಗೆ ತಲುಪಲು ಸಹಕಾರಿಯಾಗಿರುತ್ತದೆ. ಸ್ಪಷ್ಟತೆ ಎಂದರೆ ವ್ಯಕ್ತಿ ತನ್ನ ಸಾಧ್ಯತೆ ಮತ್ತು ಮಿತಿಗಳನ್ನು ಅರಿತು, ಸ್ವಯಂ ಅವಲೋಕಿಸಿ ತನ್ನ ಸಾಧ್ಯತೆ ಮತ್ತು ಮಿತಿಗಳನುಸಾರವಾಗಿ ಸೂಕ್ತ ಕ್ಷೇತ್ರಗಳನ್ನು ಆಯ್ಕೆ ಮಾಡಿ ಸ್ಪಷ್ಟ ನಿಲುವು ತೆಗೆದುಕೊಂಡು ಅದರೆಡೆಗೆ ಪ್ರಾಮಾಣಿಕವಾಗಿ ಶ್ರಮಿಸುವುದು. ಆದರೆ ಇಂದಿನ ಯುವಜನಾಂಗ ಸಾಧನೆಯ ವಿಷಯದಲ್ಲಿ ತಾತ್ಕಾಲಿಕ ಪ್ರಚೋದನೆಗೆ ಒಳಗಾಗುತ್ತಿದ್ದಾರೆ.

ಸಾಮಾಜಿಕ ಜಾಲತಾಣದ ಯಾವುದೋ ಮೋಟಿವೇಷನಲ್‌ ವೀಡಿಯೋವನ್ನು ವೀಕ್ಷಿಸಿ ತಾತ್ಕಾಲಿಕವಾಗಿ ಎರಡು ದಿನ ಪ್ರೇರಣೆಗೊಂಡು ಮೂರನೆಯ ದಿನಕ್ಕೆ ಮೊದಲಿನಂತೆ ಅದೇ ಅಲಸ್ಯತನಕ್ಕೆ ಒಳಗಾಗುತ್ತಿದ್ದಾರೆ. ಇಂತವರನ್ನು ಆರಂಭಿಕ ವೀರರೆಂದು ಕರೆಯಬಹುದು. ಇದರಿಂದ ಯಶಸ್ಸು ದಕ್ಕುವುದಿಲ್ಲ ಈ ರೀತಿಯ ತಾತ್ಕಾಲಿಕ ಪ್ರೇರಣೆ ಸಾಧನೆಗೆ ಪೂರಕವಲ್ಲ, ಹೆಚ್ಚಾಗಿ ಸಾಧನೆಗೆ ಸ್ಪೂರ್ತಿ ಮತ್ತು ಪ್ರೇರಣೆಗಿಂತ ಸ್ಪಷ್ಟತೆ ಅವಶ್ಯಕ.

ಇದರೊಂದಿಗೆ ನಮ್ಮ ಯುವಸಮಾಜ ಹಿಂದುಳಿಯಲು ಪ್ರಮುಖ ಕಾರಣಗಳು ಅವರಲ್ಲಿರುವ ಅವೈಚಾರಿಕ ಮನೋಭಾವ, ಕಲಿಕಾಸಕ್ತಿಯ ಕೊರತೆ, ಅಶ್ಲೀಲತೆ, ಪ್ರಸ್ತುತ ರಾಜಕೀಯ ಯುವಸಮಾಜವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಪರಿ ಹಾಗೂ ಕಂಠಪಾಠ ಆಧರಿತ ಶಿಕ್ಷಣ ವ್ಯವಸ್ಥೆಯ ವೈಫ‌ಲ್ಯ ಇವೆಲ್ಲವೂ ಯುವಸಮಾಜದ ಪ್ರಗತಿ ಮೇಲೆ ನಕಾರಾತ್ಮಕ ಪ್ರಭಾವವನ್ನು ಬೀರುತ್ತಿದೆ ಎಂದರೆ ತಪ್ಪಾಗಲಾರದು.

ಯುವಜನಾಂಗ ಈ ಮೇಲಿನ ನಕಾರಾತ್ಮಕ ಪ್ರಭಾವಕ್ಕೆ ಒಳಗಾಗದೆ, ತಾತ್ಕಾಲಿಕ ಪ್ರೇರಣೆ ಸ್ಫೂರ್ತಿಯ ಬದಲು ಸ್ಪಷ್ಟತೆಯನ್ನು ಅರಿತುಕೊಂಡು, ಅದರ ಸಲುವಾಗಿ ಅವಿರತವಾಗಿ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿದರೆ ಯಶಸ್ಸು ಖಂಡಿತವಾಗಿ ಸಿಗುತ್ತದೆ. ಯುವ ಸಮೂಹ ಕೃಷಿ, ವಿಜ್ಞಾನ, ಕಲೆ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಾಗ ಒಂದು ಉತ್ತಮ ಸಾಮಾಜಿಕ, ಆರ್ಥಿಕ ಮತ್ತು ನ್ಯಾಯೋಜಿತ ಸಮಾಜ ನಿರ್ಮಾಣವಾಗುವಲ್ಲಿ ಯಾವುದೇ ಅನುಮಾನವಿಲ್ಲ.

-ಮಿಥುನ್‌ ಪಿ.

ತುಮಕೂರು ವಿಶ್ವವಿದ್ಯಾಲಯ

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

16-uv-fusion

UV Fusion: ಎಲ್ಲರಿಗೂ ಬದುಕುವ ಹಕ್ಕಿದೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.