ಇಶಾನ್‌ ‌-ಅನನ್ಯಾ ಪಾಂಡೆ ಅಭಿನಯದ ‘ಖಾಲಿ-ಪೀಲಿ’ ಟೀಸರ್‌ ಔಟ್‌


Team Udayavani, Aug 24, 2020, 3:50 PM IST

Khali peeli

ಇಶಾನ್‌ ಖಟ್ಟರ್‌ ಮತ್ತು ಅನನ್ಯಾ ಪಾಂಡೆ ಅಭಿನಯದ ‘ಖಾಲಿ-ಪೀಲಿ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

ನಿರ್ದೇಶಕ ಮಕ್ಬೂಲ್‌‌ ಖಾನ್‌ ಅವರ ಈ ರೊಮ್ಯಾಂಟಿಕ್‌-ಆಕ್ಷನ್‌ ಚಿತ್ರದಲ್ಲಿ ಇಶಾನ್‌ ಅವರನ್ನು ಟ್ಯಾಕ್ಸಿ ಡ್ರೈವರ್‌ ಆಗಿ ಕಾಣಬಹುದು.

ಕಥಾ ನಾಯಕಿ ಅನನ್ಯಾ ತನ್ನ ಟ್ಯಾಕ್ಸಿಯಲ್ಲಿ ಕುಳಿತಾಗ ಮಧ್ಯರಾತ್ರಿಯಲ್ಲಿ ಅವರ ಜೀವನದಲ್ಲಿ ನಡೆಯುವ ಬದಲಾವಣೆಗಳು ಕಥಾವಸ್ತುವಾಗಿದೆ.

ಈ ಆಕ್ಷನ್‌ ಪ್ಯಾಕ್ಡ್ ಮಸಾಲಾ ಚಿತ್ರದ ಟೀಸರ್‌ನಲ್ಲಿ ಇಶಾನ್‌ ಮತ್ತು ಅನನ್ಯಾ ಅವರು ಪೊಲೀಸರು ಮತ್ತು ಸಾರ್ವಜನಿಕರಿಂದ ಓಡಿಹೋಗುವುದನ್ನು ಕಾಣಬಹುದು.

ಹಿಮಾಂಶು ಕಿಶನ್‌ ಮೆಹ್ರಾ, ಅಲಿ ಅಬ್ಟಾಸ್‌ ಜಾಫ‌ರ್‌ ಮತ್ತು ಝೀ ಸ್ಟುಡಿಯೋಸ್‌ ಈ ಚಿತ್ರವನ್ನು ನಿರ್ಮಿಸಿದೆ. ಆದರೆ ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. ಈ ಚಿತ್ರವನ್ನು ಒಟಿಟಿ ಪ್ಲಾಟ್‌ಫಾರ್ಮ್ನಲ್ಲಿ ಬಿಡುಗಡೆ ಮಾಡುವ ಕುರಿತು ಇತ್ತೀಚೆಗೆ ಮಾಹಿತಿಯೊಂದು ಹರಿದಾಡುತ್ತಿತ್ತು.

ಈ ಮೊದಲು ಬಿಡುಗಡೆಯ ದಿನಾಂಕವನ್ನು ಕಳೆದ ಜೂನ್‌ 12ರಂದು ಬಿಡುಗಡೆ ಮಾಡಬೇಕಾಗಿತ್ತು. ಆದರೆ ಲಾಕ್‌ಡೌನ್‌ ಕಾರಣ ಇದು ಸಾಧ್ಯವಾಗಿರಲಿಲ್ಲ. ವರದಿಗಳ ಪ್ರಕಾರ, ಚಿತ್ರದ ಶೂಟಿಂಗ್‌ ಈ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, ಮುಂದಿನ ಕೆಲವು ತಿಂಗಳುಗಳಲ್ಲಿ ಶೀಘ್ರ ಪೋಸ್ಟ್‌ ಪ್ರೊಡಕ್ಷನ್‌ ಪೂರ್ಣವಾಗಲಿದೆ. ಮಧ್ಯರಾತ್ರಿಯಲ್ಲಿ ಭೇಟಿಯಾಗುವ ಹುಡುಗ ಮತ್ತು ಹುಡುಗಿಯ ಕುರಿತಾಗಿ ಈ ಚಿತ್ರದ ಕಥೆ ಹೆಣೆಯಲ್ಪಟ್ಟಿದೆ.

ಚಿತ್ರದಲ್ಲಿ ಇಶಾನ್‌ ಮತ್ತು ಅನನ್ಯಾ ಇಬ್ಬರೂ ತಪೋರಿ ಶೈಲಿಯೊಂದಿಗೆ ಚಿತ್ರಿಸಲಿದ್ದಾರೆ. ಜೈದೀಪ್‌ ಅಹ್ಲಾವತ್‌ ಮುಖ್ಯ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ನಿರ್ದೇಶಕ ಮಕ್ಬೂಲ್‌ ಖಾನ್‌ ಅವರ ಈ ಚಿತ್ರದಲ್ಲಿ ಆಕ್ಷನ್‌ ಮತ್ತು ಮಸಾಲೆಗಳು ಸಾಕಷ್ಟು ಕಾಣುತ್ತಿವೆ. ಈ ಚಿತ್ರದಲ್ಲಿ ಇಶಾನ್‌ ಮತ್ತು ಅನನಾ ಜೋಡಿಯು ಚೆನ್ನಾಗಿ ಮೂಡಿ ಬಂದಿದೆ. ಚಿತ್ರದಲ್ಲಿ ಇಶಾನ್‌ ಜತೆಗೆ, ಅನನ್ಯಾ ಕೂಡ ಆಕ್ಷನ್‌ ಮೋಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರೆ.

ಅನನ್ಯಾ ಪಾಂಡೆ ಮತ್ತು ಇಶಾನ್‌ ಖಟ್ಟರ್‌ ಇಬ್ಬರು ಜತೆಯಾಗಿ ನಟಿಸುತ್ತಿರುವ ಬಾಲಿವುಡ್‌ನ‌ಲ್ಲಿನ ಮೂರನೇ ಚಿತ್ರ ಇದಾಗಿದೆ. ಮತ್ತಷ್ಟು ಕುತೂಹಲ ತಣಿಸಲು ಟ್ರೈಲರ್‌ಗೆ ಕಾಯಲೇಬೇಕು.

 

View this post on Instagram

Bola tha na.. Aarele Teaser link in bio #KhaaliPeeli ??

A post shared by Ishaan (@ishaankhatter) on

 

 

 

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.