![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 24, 2020, 3:50 PM IST
ಇಶಾನ್ ಖಟ್ಟರ್ ಮತ್ತು ಅನನ್ಯಾ ಪಾಂಡೆ ಅಭಿನಯದ ‘ಖಾಲಿ-ಪೀಲಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ನಿರ್ದೇಶಕ ಮಕ್ಬೂಲ್ ಖಾನ್ ಅವರ ಈ ರೊಮ್ಯಾಂಟಿಕ್-ಆಕ್ಷನ್ ಚಿತ್ರದಲ್ಲಿ ಇಶಾನ್ ಅವರನ್ನು ಟ್ಯಾಕ್ಸಿ ಡ್ರೈವರ್ ಆಗಿ ಕಾಣಬಹುದು.
ಕಥಾ ನಾಯಕಿ ಅನನ್ಯಾ ತನ್ನ ಟ್ಯಾಕ್ಸಿಯಲ್ಲಿ ಕುಳಿತಾಗ ಮಧ್ಯರಾತ್ರಿಯಲ್ಲಿ ಅವರ ಜೀವನದಲ್ಲಿ ನಡೆಯುವ ಬದಲಾವಣೆಗಳು ಕಥಾವಸ್ತುವಾಗಿದೆ.
ಈ ಆಕ್ಷನ್ ಪ್ಯಾಕ್ಡ್ ಮಸಾಲಾ ಚಿತ್ರದ ಟೀಸರ್ನಲ್ಲಿ ಇಶಾನ್ ಮತ್ತು ಅನನ್ಯಾ ಅವರು ಪೊಲೀಸರು ಮತ್ತು ಸಾರ್ವಜನಿಕರಿಂದ ಓಡಿಹೋಗುವುದನ್ನು ಕಾಣಬಹುದು.
ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಟಾಸ್ ಜಾಫರ್ ಮತ್ತು ಝೀ ಸ್ಟುಡಿಯೋಸ್ ಈ ಚಿತ್ರವನ್ನು ನಿರ್ಮಿಸಿದೆ. ಆದರೆ ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. ಈ ಚಿತ್ರವನ್ನು ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಬಿಡುಗಡೆ ಮಾಡುವ ಕುರಿತು ಇತ್ತೀಚೆಗೆ ಮಾಹಿತಿಯೊಂದು ಹರಿದಾಡುತ್ತಿತ್ತು.
ಈ ಮೊದಲು ಬಿಡುಗಡೆಯ ದಿನಾಂಕವನ್ನು ಕಳೆದ ಜೂನ್ 12ರಂದು ಬಿಡುಗಡೆ ಮಾಡಬೇಕಾಗಿತ್ತು. ಆದರೆ ಲಾಕ್ಡೌನ್ ಕಾರಣ ಇದು ಸಾಧ್ಯವಾಗಿರಲಿಲ್ಲ. ವರದಿಗಳ ಪ್ರಕಾರ, ಚಿತ್ರದ ಶೂಟಿಂಗ್ ಈ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, ಮುಂದಿನ ಕೆಲವು ತಿಂಗಳುಗಳಲ್ಲಿ ಶೀಘ್ರ ಪೋಸ್ಟ್ ಪ್ರೊಡಕ್ಷನ್ ಪೂರ್ಣವಾಗಲಿದೆ. ಮಧ್ಯರಾತ್ರಿಯಲ್ಲಿ ಭೇಟಿಯಾಗುವ ಹುಡುಗ ಮತ್ತು ಹುಡುಗಿಯ ಕುರಿತಾಗಿ ಈ ಚಿತ್ರದ ಕಥೆ ಹೆಣೆಯಲ್ಪಟ್ಟಿದೆ.
ಚಿತ್ರದಲ್ಲಿ ಇಶಾನ್ ಮತ್ತು ಅನನ್ಯಾ ಇಬ್ಬರೂ ತಪೋರಿ ಶೈಲಿಯೊಂದಿಗೆ ಚಿತ್ರಿಸಲಿದ್ದಾರೆ. ಜೈದೀಪ್ ಅಹ್ಲಾವತ್ ಮುಖ್ಯ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ನಿರ್ದೇಶಕ ಮಕ್ಬೂಲ್ ಖಾನ್ ಅವರ ಈ ಚಿತ್ರದಲ್ಲಿ ಆಕ್ಷನ್ ಮತ್ತು ಮಸಾಲೆಗಳು ಸಾಕಷ್ಟು ಕಾಣುತ್ತಿವೆ. ಈ ಚಿತ್ರದಲ್ಲಿ ಇಶಾನ್ ಮತ್ತು ಅನನಾ ಜೋಡಿಯು ಚೆನ್ನಾಗಿ ಮೂಡಿ ಬಂದಿದೆ. ಚಿತ್ರದಲ್ಲಿ ಇಶಾನ್ ಜತೆಗೆ, ಅನನ್ಯಾ ಕೂಡ ಆಕ್ಷನ್ ಮೋಡ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಅನನ್ಯಾ ಪಾಂಡೆ ಮತ್ತು ಇಶಾನ್ ಖಟ್ಟರ್ ಇಬ್ಬರು ಜತೆಯಾಗಿ ನಟಿಸುತ್ತಿರುವ ಬಾಲಿವುಡ್ನಲ್ಲಿನ ಮೂರನೇ ಚಿತ್ರ ಇದಾಗಿದೆ. ಮತ್ತಷ್ಟು ಕುತೂಹಲ ತಣಿಸಲು ಟ್ರೈಲರ್ಗೆ ಕಾಯಲೇಬೇಕು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.