UV Fusion: ಕಲಿಯುಗದ ಕಾಮಧೇನು


Team Udayavani, Sep 3, 2023, 3:04 PM IST

17-uv-fusion

ರೈತರು ನಮ್ಮ ರಾಷ್ಟ್ರದ ಆತ್ಮ. ದೇಶದ ಬೆನ್ನೆಲುಬು. ಭಾರತ ಪ್ರಾಚೀನ ಕಾಲದಿಂದಲೂ ಕೃಷಿ ಪ್ರಧಾನ ದೇಶ. ಆದ್ದರಿಂದಲೇ ಭಾರತದ ಒಟ್ಟಾರೆ ಆರ್ಥಿಕತೆಯು ರೈತನ ಮೇಲೆ ಅವಲಂಬಿತವಾಗಿದೆ. ಭಾರತದ ರೈತನನ್ನು ವಿಶ್ವದ ಅತ್ಯಂತ ಶ್ರಮಜೀವಿ ಎಂದು ಪರಿಗಣಿಸಲಾಗಿದೆ. ಭಾರತೀಯ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಆದಾಯದ ಮೂಲವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.

ರೈತನ ಬೆವರಿನ ಪ್ರತಿಫ‌ಲವಾಗಿ ನಾವು ದಿನನಿತ್ಯ ಹೊಟ್ಟೆ ತುಂಬಿಸಿಕೊಳ್ಳುತೇವೆ. ಕಷ್ಟನೋ ಸುಖವೋ ಯಾರನ್ನು ಕೇಳದೆ ಒಬ್ಬನೇ ನೇಗಿಲಿನ ಭಾರವನ್ನು ಹೊರುತ್ತಾನೆ. ಕಾಯಕವೇ ಕೈಲಾಸ ಎಂದು ದುಡಿಯುತ್ತಾನೆ. ತಮ್ಮ ಮೂಲ ವೃತ್ತಿಯನ್ನು ಮಾಡಿ ನಾಡಿನ ಸಮಸ್ತ ಜನರಿಗೆ ಹೊಟ್ಟೆ ತುಂಬಿಸುತ್ತಾರೆ. ಅವರ ಇಡೀ ಜೀವನವನ್ನು ಹೊಲ, ಗದ್ದೆ, ಬೇಸಾಯದಲ್ಲೇ ತೊಡಗಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಬೆಳೆದ ಬೆಳೆ ಸರಿಯಾಗಿ ಪ್ರತಿಫ‌ಲ ನೀಡದೆ ಇರಬಹುದು ಆದರೂ ತಾಳ್ಮೆಯಿಂದ ಕಾದು ಬೆಳೆಯನ್ನು ಬೆಳೆದು ಆರೈಕೆ ಮಾಡಿ ದೇಶದ ಜನರ ಹಸಿವನ್ನು ನೀಗಿಸುವುದು ನಮ್ಮ ರೈತರು.

ಹವಾಮಾನ ವೈಪರೀತ್ಯಗಳು, ಮಾರುಕಟ್ಟೆಯಲ್ಲಿನ ಏರಿಳಿತಗಳು, ಸೂಕ್ತ ಸಮಯದಲ್ಲಿ ಸಿಗದ ಬಿತ್ತನೆ ಬೀಜ, ಗೊಬ್ಬರ, ರಾಸಾಯನಿಕಗಳ ಅವೈಜ್ಞಾನಿಕ ಬಳಕೆಯಿಂದಾಗುವ ದುಷ್ಪರಿಣಾಮಗಳು, ಖಾಸಗಿಯವರಲ್ಲಿ ಸಾಲ ತೆಗೆದು ವಿಪರೀತ ಬಡ್ಡಿ ತೆರುತ್ತಿರುವದು ಇಂತಹ ಅನೇಕ ಸಂಗತಿಗಳನ್ನು ಹೇಳುತ್ತಾ ಹೋದರೆ ಮುಗಿಯದ ಕತೆ, ವ್ಯಥೆ. ಅಕ್ಕಿ ಬೆಂದಿದೆಯೇ ಎಂದು ತಿಳಿಯಲು ಮುಟ್ಟಿ ನೋಡಿದರೆ ಹೇಗೆ ಗೊತ್ತಾಗುತ್ತೋ ಅದೇ ರೀತಿ ದೇಶ ಎಷ್ಟು ಮುಂದುವರಿದಿದೆ ಎಂದು ತಿಳಿಯಲು ಆ ದೇಶದ ರೈತನನ್ನು ನೋಡಿ ತಿಳಿದುಕೊಳ್ಳಬಹುದು..

ಕಲಿಯುಗದ ಕಾಮಧೇನುವಾದ ರೈತರು ಇತ್ತೀಚಿನ ದಿನಗಳಲ್ಲಿ ವಲಸೆ ಹೋಗುತ್ತಿದ್ದಾರೆ. ಅದಕ್ಕಿಂತ ಹೆಚ್ಚಿನದಾಗಿ ರೈತನು ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ ಎಂಬ ಸುದ್ದಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದನ್ನು ನಿಲ್ಲಿಸಬೇಕಾದುದು ಮುಖ್ಯವಾದ ಸಂಗತಿಯಾಗಿದೆ. ರೈತರೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ? ಅವರ ಸಮಸ್ಯೆ ಸವಾಲುಗಳೇನು? ಅವರ ಆರ್ಥಿಕ, ಸಾಮಾಜಿಕ ಪರಿಸ್ಥಿತಿಗಳು ಹೇಗಿದೆ? ಉಳುವ ಯೋಗಿಯ ಸಮಸ್ಯೆಗಳನ್ನು ಬಗೆಹರಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಹೊಟ್ಟೆಗೆ ಗತಿ ಏನು? ಎಂಬುದನ್ನು ಭಾರತದ ಜನತೆ ಯೋಚಿಸಬೇಕಾಗಿದೆ.

-ಕೆ.ಎಂ. ಪವಿತ್ರ,

ಎಂಜಿ.ಎಂ. ಕಾಲೇಜು, ಉಡುಪಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.