Krishna Janmashtami: ಭೂಲೋಕದಲ್ಲಿ ಅವತರಿಸಿದ ಜಗದೋದ್ಧಾರಕ


Team Udayavani, Aug 26, 2024, 11:00 AM IST

9-krishna

ಶ್ರೇಷ್ಠ ಪರಂಪರೆಯ ಭೂಮಿ ಭಾರತ. ಈ ಪುಣ್ಯ ಮಣ್ಣಿನ ಅಸ್ತಿತ್ವವೇ ಸನಾತನ ಧರ್ಮ. ಹಿಂದೂ ಸಂಪ್ರದಾಯದಲ್ಲಿ ಆಚರಿಸುವಂತಹ ಪ್ರಮುಖ ಹಬ್ಬಗಳಲ್ಲಿ ಕೃಷ್ಣ ಜನ್ಮಾಷ್ಟಮಿಯೂ ಒಂದು. ಪುರಾಣದ ಪ್ರಕಾರ ಕೃಷ್ಣನು ಶ್ರಾವಣಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಜನಿಸಿದನು ಎಂಬ ಪ್ರತೀತಿ ಇದೆ. ಜಗದೋದ್ಧಾರಕ ಕೃಷ್ಣನ ಜನ್ಮವು ಸಾಮಾನ್ಯವಾದುದ್ದಲ್ಲ, ಲೋಕಕಲ್ಯಾಣಕ್ಕಾಗಿ ವಸುದೇವ ಮತ್ತು ದೇವಕಿಯ ಮಗನಾಗಿ ವಿಷ್ಣುವಿನ 8ನೇ ಅವತಾರದಲ್ಲಿ ಭೂಲೋಕದಲ್ಲಿ ಜನ್ಮ ತಾಳಿದನು.

ಆತನ ಜನನವೇ ಒಂದು ವಿಶೇಷ. ಕೃಷ್ಣ ಹುಟ್ಟಿದೊಡನೆ ತಂದೆ ವಸುದೇವನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಈತನನ್ನು ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನನ್ನು ಬಿಟ್ಟು ಬರಲು ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿಯಾದಳು. ಈ ರೀತಿಯಾಗಿ ಜಗದೋದ್ಧಾರಕನ ಹುಟ್ಟಿನ ವಿಚಾರವಾಗಿದೆ.

ಎಲ್ಲೆಡೆಯು ಬಹಳ ವಿಜೃಂಭಣೆಯಿಂದ ಆಚರಿಸುವ ಈ ಹಬ್ಬವು, ವಿಶೇಷವಾಗಿ ಕರ್ನಾಟಕದ ಉಡುಪಿ ಜಿಲ್ಲೆಯ ಕೃಷ್ಣ ಮಠದಲ್ಲಿ ಬಹಳ ಅದ್ದೂರಿಯಿಂದ ಸಂಭ್ರಮಿಸುತ್ತಾರೆ. ಪ್ರತಿಯೊಂದು ಕೃಷ್ಣ ಮಂದಿರದಲ್ಲಿಯೂ ವಿಶೇಷವಾದ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಹಾಗೆಯೇ ಈ ಪುಣ್ಯ ದಿನದಂದು ಕೃಷ್ಣನಿಗೆ ಅಭಿಷೇಕ, ಜನ್ಮಾಷ್ಟಮಿ ವ್ರತ, ದೇಗುಲ ದರ್ಶನ ಈ ರೀತಿಯಾಗಿ ನಾನಾ ತರಹದಲ್ಲಿ ಆಚರಿಸಲ್ಪಡುವ ಕೃಷ್ಣ ಜನ್ಮಾಷ್ಟಮಿಯು ಅದೆಷ್ಟೋ ರೀತಿಯ ವಿಶೇಷತೆಯನ್ನು ಹೊಂದಿದೆ. ಕೃಷ್ಣನ ಬಾಲಲೀಲೆಗಳ ದ್ಯೋತಕವಾಗಿ ಮಕ್ಕಳಿಗೆ ಕೃಷ್ಣವೇಷ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸುವುದು ಈ ಹಬ್ಬದ ವಿಶೇಷತೆಗಳಲ್ಲಿ ಒಂದಾಗಿದೆ.

ಕೃಷ್ಣನ ಜನ್ಮ ದಿನವನ್ನಾಗಿ ಆಚರಿಸುವ ಈ ಹಬ್ಬವು, ದೇಶದ ಹಲವೆಡೆ ಮುಕುಂದನನ್ನು ಉಯ್ನಾಲೆಯಲ್ಲಿ ತೂಗುವ ಕ್ರಮವನ್ನು ಕಾಣಬಹುದು. ಅಂತೆಯೇ ಬಗೆ ಬಗೆಯ ತಿಂಡಿ ತಿನಿಸುಗಳನ್ನು ಮಾಡಿ ನೈವೇದ್ಯದ ರೂಪದಲ್ಲಿ ಸಮರ್ಪಿಸಲಾಗುತ್ತದೆ ಮತ್ತು ಮಹಿಳೆಯರು ತಮ್ಮ ಮನೆಗಳ ಮುಂದೆ ಪುಟ್ಟ ಪುಟ್ಟ ಹೆಜ್ಜೆಗಳನ್ನು ಬಿಡಿಸುತ್ತಾರೆ. ಕಾರಣ, ಕೃಷ್ಣನು ಮನೆಗೆ ಬರುತ್ತಾನೆ ಎಂಬ ನಂಬಿಕೆ. ಒಟ್ಟಾರೆಯಾಗಿ, ಈ ಒಂದು ಅಷ್ಟಮಿಯನ್ನು ಪ್ರತಿಯೊಬ್ಬರೂ ಬಹು ಸಂತಸ ಸಡಗರದಿಂದ ಆಚರಿಸುತ್ತಾರೆ.

ಮಹಾಭಾರತದಲ್ಲಿ ಕೃಷ್ಣನ ಪಾತ್ರ ಬಹುಮುಖ್ಯವಾದುದು. ಲೋಕಕಲ್ಯಾಣಕ್ಕಾಗಿ ಕೃಷ್ಣನು ನೀಡಿದ ಸಂದೇಶಗಳು ಮಹತ್ವವಾದದ್ದು, ಮಾತ್ರವಲ್ಲ ಕೃಷ್ಣನ ಜೀವನವೇ ಸಂದೇಶವಾಗಿ ನಮ್ಮ ಬಾಳನ್ನು ಬೆಳಗಬಹುದು. ಮುರಾರಿಯ ಅತೀ ಶ್ರೇಷ್ಠ ಜೀವನ ಪಾಠವನ್ನು ನಮ್ಮ ಬದುಕಲ್ಲಿ ಅಳವಡಿಸಿಕೊಂಡರೆ ಅವನ ಶ್ರೀ ರಕ್ಷೆ ಸದಾ ನಮ್ಮ ಬದುಕ ಮೇಲೆ ಬೆಳಕು ಚೆಲ್ಲುವುದು.

ಧನ್ಯಶ್ರೀ, 

ವಿವೇಕಾನಂದ ಸ್ವಾಯತ್ತ ಕಾಲೇಜು

ಪುತ್ತೂರು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.