UV Fusion: ಮೊಳಗಲಿ ಕನ್ನಡ


Team Udayavani, Nov 21, 2023, 7:15 AM IST

12-uv-fusion

ನವೆಂಬರ್‌ ತಿಂಗಳು ಎಂದರೆ ಕನ್ನಡದ ಮೇಲೆ ಎಲ್ಲಿಲ್ಲದ ಗೌರವ ಭಾವನೆ. ಕನ್ನಡವನ್ನು ಮಾತನಾಡಿದರೆ ಎಲ್ಲಿ ತಮ್ಮ ಘನತೆ ಕಡಿಮೆ ಆಗುತ್ತದೆಯೋ ಎನ್ನುವಂತವರೂ ನವೆಂಬರ್‌ ನಲ್ಲಿ ಕನ್ನಡವನ್ನು ಮಾತನಾಡುತ್ತಾರೆ. ಇನ್ನೇನೂ ನವೆಂಬರ್‌ ಮಾಸ ಮುಗಿತಾ ಬಂತು. ಕನ್ನಡದ ಮೇಲಿನ ಗೌರವ ಎಲ್ಲೋ ಕಡಿಮೆಯಾಗುತ್ತದೆ ಅನಿಸುತ್ತಿದೆ. ಕನ್ನಡ ಎಂದರೆ ತಾತ್ಸಾರ ಮಾಡುವವರು ಹೆಚ್ಚಾಗಿದ್ದಾರೆ. ಕನ್ನಡ ನಾಡು ಉದಯವಾಗಿ ಕರ್ನಾಟಕ ಎಂದು ಮರುನಾಮಕರಣಗೊಂಡು ಸಾಕಷ್ಟು ವರ್ಷಗಳಾಗಿವೆ. ಕನ್ನಡ ಬೆಳೆಯಬೇಕು ಎನ್ನುವುದು ಏಕೀಕರಣದ ಆಶಯವಾಗಿತ್ತು. ಆದರೆ ನಮ್ಮ ಭಾಷೆ -ಸಂಸ್ಕೃತಿ ದಿನೇ ದಿನೇ ಕ್ಷಿಣಿಸುತ್ತಿದೆ. ನಮ್ಮ ನೆಲೆಯಲ್ಲಿ ನಾವು ಪರಕೀಯರಾಗುವಂಥ ಪರಿಸ್ಥಿತಿ ಬಂದೊದಗಿದೆ. ಹೀಗಾಗಬಾರದು ನಮ್ಮ ನೆಲ, ಭಾಷೆ, ಸಂಸ್ಕೃತಿಯ ಮೇಲೆ ಗೌರವ ಭಾವನೆಯನ್ನು ಬೆಳೆಸಿಕೊಂಡು ಅದನ್ನು ಉಳಿಸಿ ರಕ್ಷಿಸಿಕೊಂಡು ಹೋಗಬೇಕು.

ಹುಟ್ಟಿದ್ದು ಕನ್ನಡನಾಡಲ್ಲಿ, ಬೆಳೆದಿದ್ದು ಕನ್ನಡನಾಡಲ್ಲಿ, ಉಸಿರಾಡುತ್ತಿರುವುದು ಕನ್ನಡದ ಮಣ್ಣಲ್ಲಿ, ಅನ್ನ ನೀಡಿದ್ದು ಕನ್ನಡ ನಾಡು, ಬದುಕಲು ಕಲಿಸಿದ್ದು ಕನ್ನಡ ನಾಡು ಹೀಗಿದ್ದ ಮೇಲೆ ಮಾತನಾಡುವುದು ಪರಭಾಷೆಯೇ.!? ಇತ್ತೀಚಿಗೆ ಪಾಶ್ಚಿಮಾತ್ಯರ ಸಂಸ್ಕೃತಿಗೆ ಒಳಗಾಗಿ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಬಾರದು ನಮ್ಮ ಮೊದಲ ಆದ್ಯತೆ ಏನಿದ್ದರೂ ಕನ್ನಡಕ್ಕಿರಬೇಕು, ಕರುನಾಡ ಮೇಲಿರಬೇಕು.

ಹಾಗಂತ ಪರ ಭಾಷೆ ಕಲಿಯಬಾರದು, ಆಂಗ್ಲಮಾದ್ಯಮದಲ್ಲಿ ಓದಬಾರದು, ಪರ ಭಾಷೆಯ ಸಿನಿಮಾ ನೋಡಬಾರದು ಅಂತಲ್ಲ. ಮನುಷ್ಯ ಹೊರ ಜಗತ್ತನ್ನು ಸಂಪರ್ಕಿಸಬೇಕೆಂದರೆ ಪರ ಭಾಷೆ ಅವಶ್ಯವಾಗಿದೆ. ಆದರೆ ಬೇರೆ ಭಾಷೆಯನ್ನು ಕಲಿತ ಮೇಲೆ ಕನ್ನಡವನ್ನು ಮರೆಯಬಾರದು. ಭಾಷೆ ಮತ್ತು ನಾಡಿನ ಮೇಲಿನ ಅಭಿಮಾನ ಹಾಕುವ ಬಟ್ಟೆಯಿಂದ ಅಥವಾ ಹಿಡಿಯುವ ಬಾವುಟದಿಂದ ಬರುವುದಲ್ಲ. ಇದು ಪ್ರತಿಯೊಬ್ಬರ ಮನಸಲ್ಲಿ ನಾಡಿನ ಮೇಲೆ ಅಭಿಮಾನ ಗೌರವ ಮೂಡಬೇಕು. ಕನ್ನಡ ಹೇಳುವುದು ನಮ್ಮ ಚರ್ಮ ಆಗಿದ್ದರೆ ಪರಭಾಷೆ ಹೇಳುವುದು ನಾವು ಹಾಕುವ ಬಟ್ಟೆಯಾಗಿದ್ದರೆ ಮಾತ್ರ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ.

-ಕೆ.ಎಂ. ಪವಿತ್ರಾ

ಎಂಜಿಎಂ, ಉಡುಪಿ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.