ಭಾರತದ ಪುಣ್ಯಕೋಟಿ ದೇಸಿ ಗೋ ತಳಿಗಳ ಸಂರಕ್ಷಣೆ ಆದ್ಯತೆಯಾಗಲಿ


Team Udayavani, Sep 1, 2020, 10:08 PM IST

Cow

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತದಲ್ಲಿರುವ ಪಶು ಸಂಪತ್ತು ಆಪಾರ. ದೇಶದಲ್ಲಿ ಪಶುಸಂಗೋಪನೆ ಜೀವನಾಧಾರಕ್ಕೆ ಮತ್ತು ಬದುಕಿಗೆ ಆಧಾರ.

ಪಶುಗಳಿಗೆ ನಮ್ಮ ಧಾರ್ಮಿಕ ನಂಬಿಕೆಗಳಲ್ಲೂ ಕೂಡ ಪ್ರಮುಖ ಸ್ಥಾನವಿದೆ. ಪುರಾಣ-ಇತಿಹಾಸಗಳ ಕಾಲದಲ್ಲಿ ಗೋವಿನ ಲಾಲನೆ-ಪಾಲನೆ ಪ್ರೇಮಪೂರಿತವಾಗಿತ್ತು.

ಗೋ-ವಂಶದಿಂದ ಮನುಷ್ಯನಿಗೆ ಆಗುವ ಪ್ರಯೋಜನವನ್ನು ಮನಗಂಡು ನಮ್ಮ ಪೂರ್ವಜರು ಪಶುಸಂಗೋಪನೆ ಆದ್ಯತೆ ನೀಡಿ, ಪೂಜ್ಯ ಸ್ಥಾನ ನೀಡಿದ್ದರು. ದೇಶ ಕೋಟಿಗಟ್ಟಲೆ ಗೋವುಗಳಿಗೆ ಆಶ್ರಯ ನೀಡುತ್ತಿದೆ. ಅವುಗಳ ಸಂರಕ್ಷಣೆ ಮೊದಲ ಕರ್ತವ್ಯ ಆಗಬೇಕಾಗಿದೆ.

ದೇಶದ ಹೆಚ್ಚಿನ ಮನೆಗಳಲ್ಲಿ ಇಂದಿಗೂ ಗೋ ಸೇವೆಯೊಂದಿಗೆ ದಿನನಿತ್ಯದ ಚಟುವಟಿಕೆ ಆರಂಭವಾಗುವುದು. ಹಾಗೆಯೇ ಭಾರತೀಯ ಗೋ ವಂಶದ ಉಳಿವಿಗೆ ಸಾವಿರಾರು ಸಂರಕ್ಷಣ ಕೇಂದ್ರಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಗೋವಿನ ಹಾಲು ಸಹಿತ ಇತರ ಉತ್ಪನ್ನಗಳು ನಮ್ಮ ಶರೀರಕ್ಕೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತವೆ. ಆದ್ದರಿಂದ ಗೋವುಗಳಿಗೆ ನಾವು ವಿಶೇಷ ಆದ್ಯತೆ ನೀಡಬೇಕು.

ದೇಸಿ ಗೋ ತಳಿಗಳ ಸಂರಕ್ಷಣೆ ಈ ಎಲ್ಲ ಗೋಶಾಲೆಗಳ ಮೂಲ ಉದ್ದೇಶವಾದರೂ ಪ್ರತಿಯೊಂದು ಕೇಂದ್ರದ ಕಾರ್ಯವಿಧಾನವು ತನ್ನದೇ ಆದ ವಿಶೇಷತೆ ಹಾಗೂ ಹೊಸತನವನ್ನು ಅಳವಡಿಸಿಕೊಳ್ಳುವ ಮೂಲಕ ಭಿನ್ನವಾಗಿದೆ. ಗೋ ಮೂತ್ರ ಮತ್ತು ಸೆಗಣಿಯಲ್ಲಿ ಔಷಧ ಗುಣಗಳಿವೆ.
ಹಸುವೊಂದು ಕರುವಿಗೆ ಜನ್ಮ ನೀಡಿದ ಅನಂತರವೇ ಹಾಲು ಕೊಡಲು ಆರಂಭಿಸುತ್ತದೆ. ಹಾಗಾಗಿ ಹಾಲು ಕೊಡುವ ಹಸುಗಳ ಸಂಖ್ಯೆಯಷ್ಟೇ ಕರುಗಳ ಸಂಖ್ಯೆಯು ಇರಬೇಕು. ಆದರೆ ಮುಂಚಿನಂತೆ ಮನೆ ಮನೆಗಳಲ್ಲೂ ದನಕರುಗಳನ್ನು ಸಾಕುವುದು ಇಂದಿನ ಪರಿಸ್ಥಿತಿಯಲ್ಲಿ ಕಷ್ಟ‌ವಾಗುತ್ತಿದೆ.

ಹತ್ತಿಪ್ಪತ್ತು ಗೋ ತಳಿಗಳಿಂದ ತುಂಬಿರುತ್ತಿದ್ದ ಕೊಟ್ಟಿಗೆಗಳಲ್ಲಿ ಕೇವಲ ಒಂದೆರಡು ತಳಿಗಳು ಇರುವುದನ್ನು ಕಾಣಬಹುದು. ಇದರಿಂದಾಗಿ ದೇಸಿ ಗೋ ಸಂಪತ್ತು ಅಳಿವಿನಂಚಿಗೆ ಸಾಗುತ್ತಿದೆ ಎನ್ನುವ ಕಳವಳ ಒಂದು ಕಡೆಯಾದರೆ ಗೋವಿನಿಂದ ಆಗುವ ಪ್ರಯೋಜನಗಳಿಂದ ವಂಚಿತರಾಗಿದ್ದೇವೆ. ಅನೇಕ ಗೋ ಶಾಲೆ ಕೇಂದ್ರಿತ ಆರ್ಥಿಕ ಚಟುವಟಿಕೆಗಳನ್ನು ನಡೆಸಿ ತಳಿಗಳನ್ನು ಸಂರಕ್ಷಿಸಬೇಕಾಗುತ್ತದೆ.

ಗೋವು ನಮ್ಮ ಆರ್ಥಿಕತೆಯ ಬೆನ್ನೆಲುಬು ಕೂಡ ಹೌದು. ಗೋತಳಿ ರಕ್ಷಣೆ ಕೇವಲ ಹಾಲಿಗಾಗಿ ಅಲ್ಲ ಅದೊಂದು ಸೇವೆ ಹಾಗೂ ಇದನ್ನು ಸಂರಕ್ಷಿಸುವ ಹೊಣೆ ನಮ್ಮ ಮೇಲಿದೆ.

 ಚೋಂದಮ್ಮ ಕೆ.ಪಿ. ಸಂತ ಫಿಲೋಮಿನಾ ಪ.ಪೂ. ಕಾಲೇಜು, ಪುತ್ತೂರು 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.