Protect Environment: ಪ್ರಕೃತಿ ರಕ್ಷತಿ ರಕ್ಷಿತಃ


Team Udayavani, Sep 8, 2024, 3:23 PM IST

19-uv-fusion

ಈ ಗ್ರಹದಲ್ಲಿ ದೇವರ ಅತ್ಯುತ್ತಮ, ಅಮೂಲ್ಯ ಮತ್ತು ಉದಾತ್ತ ಕೊಡುಗೆಯೆಂದರೆ ಪ್ರಕೃತಿ. ನೆಲ, ಜಲ, ವಾಯು, ಅಗ್ನಿ, ಆಕಾಶ ಈ ಪಂಚಭೂತಗಳನ್ನು ಒಳಗೊಂಡ ಈ ವ್ಯವಸ್ಥೆಯೇ ಪ್ರಕೃತಿ. ಇದು ಮಾನವಕುಲಕ್ಕೆ ಆಸರೆ, ಆಶೀರ್ವಾದ ಎರಡೂ ಆಗಿದೆ.

ಪ್ರಕೃತಿ ಮಡಿಲಲ್ಲಿ ಜೀವ ಮತ್ತು ನಿರ್ಜೀವ ವಸ್ತುಗಳೆರಡೂ ಇದ್ದು, ಮನೆಯಿಂದ ಹೊರಗೆ ಕಾಲಿಟ್ಟ ಕ್ಷಣದಿಂದ ನಮ್ಮ ಸುತ್ತಮುತ್ತ ಕಾಣುವ ಭೂದೃಶ್ಯಗಳು ಅದು ಪ್ರಕೃತಿಯ ಭಾಗ. ಇಂತಹ ಅದ್ಭುತ ಶಕ್ತಿಯಿಂದ ಸ್ಫೂರ್ತಿಗೊಂಡವರು ಕವಿಗಳು, ಬರಹಗಾರರು, ಕಲಾವಿದರು, ವಿಜ್ಞಾನಿಗಳಾದರು. ಹಾಗಾಗಿಯೇ ಈ ಪ್ರಕೃತಿಯನ್ನು ನಮ್ಮ ಪೂರ್ವಜರು ತಾಯಿ ಎಂದೂ ಪೂಜಿಸಿ, ಆರಾಧಿಸಿ ಮತ್ತು ಸಂರಕ್ಷಿಸಿಕೊಂಡು ಬಂದಿರುವುದು. ಇದಕ್ಕೆ ತಾನೆ ಹೇಳಿರುವುದು ಪ್ರಕೃತಿಯು ಮಾನವನ ಅತ್ಯುತ್ತಮ ಗೆಳೆಯ/ತಿ ಮತ್ತು ಔಷಧಿ ಎಂದು.

ಸಾಟಿಯಿಲ್ಲದ ಮೌಲ್ಯವನ್ನು ಹೊಂದಿರುವ ಪ್ರಕೃತಿಯು ಇಡೀ ಮನುಕುಲವನ್ನು ರಕ್ಷಿಸುವ ಜೊತೆಗೆ ನಾಶಮಾಡುವಷ್ಟು ಶಕ್ತಿಯುತವಾಗಿದೆ. ಕಳೆದ ನೂರು ವರ್ಷಗಳಿಂದ ಅಥವಾ ಅದಕ್ಕಿಂತ ಹೆಚ್ಚಿನ ಕಾಲದಿಂದ ಪ್ರಕೃತಿ ಮೌಲ್ಯವನ್ನು ಶಿಕ್ಷಣ ಪಡೆದ ನಾವು ಅಭಿವೃದ್ಧಿ ಅನ್ನುವ ಅವೈಜ್ಞಾನಿಕ ಬೆಳವಣಿಗೆಗೆ ಪ್ರಕೃತಿಯನ್ನು ವಿವಿಧ ರೀತಿಯಲ್ಲಿ ದುರುಪಯೋಗ ಹಾಗೂ ಬೆದರಿಕೆ ಹೆಸರಿನಲ್ಲಿ ಎಷ್ಟು ನಾಶಮಾಡಬೇಕೋ ಅಷ್ಟು ಹಾಳು ಮಾಡುತ್ತಾ ಬಂದಿದ್ದರೂ ಸಹ ನಾವು ನಮ್ಮ ಅಸ್ತಿತ್ವವನ್ನು ಇಂದಿಗೂ ಉಳಿಸಿಕೊಳ್ಳಲು ಮುಖ್ಯ ಕಾರಣ ನಮ್ಮ ಅಪಾರ ಜ್ಞಾನವುಳ್ಳ ಪೂರ್ವಜರ ನಂಬಿಕೆ. ಇವರು ಪರಿಸರಕ್ಕೆ ಹೊಂದಿಕೊಂಡು ಆಚರಿಸುತ್ತಿದ್ದ ಆಚರಣೆಗಳು ಇಂದಿನ ವೈಜ್ಞಾನಿಕ ಯುಗದಲ್ಲಿ ನಮಗೆ ಮೂಢನಂಬಿಕೆಯಾಗಿ ಕಂಡರೂ ಅದು ಪ್ರಕೃತಿಯೊಂದಿಗಿನ ಅವರ ಹೊಂದಾಣಿಕೆ.

ಆದರೆ ಇಂದು ಅತಿಯಾದ ನಗರೀಕರಣದಿಂದ ಹಳ್ಳಿಗಳು ನಾಶವಾಗಿ ನಗರಗಳು ನಿವೇಶನಗಳ ಗೂಡಾಗಿ ಕಸದ ರಾಶಿಯಿಂದಾಗಿ ಗಬ್ಬು ನಾರುತ್ತಿದೆ. ಫಲವತ್ತಾದ ಕೃಷಿ ಭೂಮಿ ಕೈಗಾರಿಕ ನೆಲೆಯಾಗಿ ಅವುಗಳ ವಿಷಪೂರಿತ ತ್ಯಾಜ್ಯಗಳು ನಿಶ್ಕಲ್ಮಶ ಜಲಮೂಲಗಳಿಗೆ ಸೇರಿ ಜಲಚರಗಳು ಸಾವನ್ನಪ್ಪುತ್ತಿವೆ. ಅರಣ್ಯ ನಾಶದಿಂದ ಅನಾವೃಷ್ಠಿ-ಅತಿವೃಷ್ಠಿಯಿಂದಾಗಿ ಗುಡ್ಡಗಳು ನೆಲಸಮವಾಗಿ ಜೀವ-ಜಂತುಗಳು ಸ್ವತ್ಛ ಗಾಳಿಯಿಲ್ಲದೆ ಉಸಿರಾಡಲು ಪರದಾಡುವ ಸ್ಥಿತಿ ಬಂದಿದೆ. ವಾಹನಗಳ, ಕೈಗಾರಿಕೆಗಳ ದಟ್ಟವಾದ ಹೊಗೆಯಿಂದ ಓಝೋನ್‌ ಪದರ ಹಾನಿಯಾಗಿ ಉರಿಬಿಸಿಲು ಮನುಷ್ಯನ ನೆತ್ತಿ ಸುಡುತ್ತಿದ್ದು, ಅನೇಕ ಹೊಸ ರೋಗಗಳ ಹುಟ್ಟಿಗೆ ಕಾರಣೀಭೂತವಾಗಿದೆ.

ಭೂಗರ್ಭ ಬಿಸಿಯಾಗಿ ಹಿಮಪರ್ವತಗಳು ಕರಗಿ ಸಮುದ್ರದಲ್ಲಿ ನೀರಿನ ಮಟ್ಟ ಹೆಚ್ಚಾಗಿ ಪ್ರಕೃತಿ ವಿಕೋಪಗಳಿಗೆ ಎಡೆಮಾಡಿಕೊಡುತ್ತಿದೆ. ಕೃಷಿಗೆ ಅತಿಯಾದ ರಾಸಾಯನಿಕಗಳ ಬಳಕೆಯಿಂದ ಆಹಾರ ಪದಾರ್ಥಗಳು ವಿಷಕಾರಿಯಾಗಿ ಮಾರ್ಪಡುತ್ತಿವೆ. ಇದಕ್ಕಾಗಿಯೇ ಇಂದು ನಾವು “ವಿಶ್ವ ಪರಿಸರ ದಿನ”, ‘ವನಮಹೋತ್ಸವ’ವನ್ನು ಆಚರಿಸುವ ಮೂಲಕ “ಈ ಒಂದು ದಿನವಾದರೂ ಪ್ರಕೃತಿಯನ್ನು ಸಂರಕ್ಷಿಸುವ” ಎಂದು ಶಿಕ್ಷಣದ ಅರಿವು ಇರುವವರಿಗೆ ಪರಿಸರದ ಪಾಠ ಹೇಳಿಕೊಡುವ ದುರ್ದೈವದ ಸ್ಥಿತಿಯಲ್ಲಿರುವುದು.

ಮಾನವ ಹೀಗೆಯೇ ಜೀವಿಸಿದರೆ ಭವಿಷ್ಯದಲ್ಲಿ ಇನ್ನಷ್ಟು ಕರಾಳ ದಿನ ಎದುರಿಸುವುದು ಖಂಡಿತ. ಸುಂದರವಾದ ಪ್ರಕೃತಿಯ ಸೌಂದರ್ಯವನ್ನು ಕಾಪಾಡಿಕೊಳ್ಳಲು ಇಂದು ನಮಗೆ ಬೇಕಾಗಿರುವುದು “ಪ್ರಕೃತಿಯಿಂದಾಗಿ ನಾವೇ ಹೊರತು, ನಮ್ಮಿಂದ ಪ್ರಕೃತಿಯಲ್ಲ” ಎಂಬ ಜ್ಞಾನ ಮತ್ತು ಜಾಗೃತಿಯ ಅರಿವು.

ಶ್ರುತೇಶ್‌ ಆಚಾರ್ಯ

ಮೂಡುಬೆಳ್ಳೆ

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.