ಶಾಲೆಗೆ ಚಕ್ಕರ್‌ ಹೊಡೆದ ಸಾಹಸಗಾಥೆ


Team Udayavani, Apr 22, 2021, 6:53 PM IST

Value_US_Degree

ದೊಡ್ಡವರಾಗುತ್ತಿದ್ದಂತೆ ಹೊಸ ಹೊಸ ಅನ್ವೇಷಣೆಯತ್ತ ಹೊರಳುವ ಬುದ್ಧಿ ಏನನ್ನೂ ಮಾಡಬಹುದು ಎನ್ನುವ ಹುಂಬತನವನ್ನೂ ಬೆಳೆಸಿಕೊಳ್ಳುತ್ತದೆ.

ಮುಗ್ಧತನ ಪೂರ್ತಿಯಾಗಿ ಅಳಿಯದ, ಅರಿವು ಪೂರ್ತಿಯಾಗಿ ಮೂಡಿರದ ತಪ್ಪು ಸರಿಗಳ ನಡುವಿನ ಪುಟ್ಟ ಎಳೆಯ ಮಧ್ಯ ಜೋಲಾಡುವ ವಯಸ್ಸು ಹನ್ನೆರಡರ ಆಸುಪಾಸಿನದು. ಈ ಸಮಯದಲ್ಲಿ ಅನುಕರಣೆ ಬಹುಬೇಗ ಆಕರ್ಷಿಸಿ ಕಾರ್ಯಪ್ರವೃತ್ತಿಗೆ ಇಳಿಸಿಬಿಡುತ್ತದೆ.

ನಮ್ಮಗಿಂತ ಹಿರಿಯ ವಿದ್ಯಾರ್ಥಿಗಳು ಶಿಕ್ಷಕರ ಕಣ್ಣು ತಪ್ಪಿಸಿ ಚಕ್ಕರ್‌ ಹಾಕುವುದನ್ನು ನೋಡುವಾಗಲೆಲ್ಲ ಭಯ ಬೆರೆತ ಭಂಡತನ ನನ್ನಲ್ಲೂ ಆವರಿಸಿಕೊಳ್ಳುತ್ತಿತ್ತು. ಒಂದಲ್ಲ ಒಂದು ದಿನ ನಾನೂ ಶಾಲೆಗೆ ಚಕ್ಕರ್‌ ಹಾಕಲೇಬೇಕು ಎಂದು ತೀರ್ಮಾನಿಸಿದೆ. ಆ ಹಿರಿಯ ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಶಾಲೆಗೆ ಚಕ್ಕರ್‌ ಹೊಡೆಯಲು ಇರುವ ರಹದಾರಿ ಕಂಡುಕೊಂಡೆನಾದದೆರೂ ಅದನ್ನು ಬಳಸಲು ಧೈರ್ಯ ಬಂದದ್ದು ಐದನೇ ತರಗತಿಗೆ ಬಂದ ಮೇಲೆ.

ಐದನೇ ತರಗತಿಯ ಮಧ್ಯಂತರ ದಸರಾ ರಜೆ ಮುಗಿದು ಶಾಲೆ ಆರಂಭಗೊಂಡ ಮೊದಲೆರಡು ದಿನ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳನ್ನು ಬಿಟ್ಟರೆ ಉಳಿದವರು ತಲೆ ಹಾಕಿರಲಿಲ್ಲ. ದಿನನಿತ್ಯ ಶಾಲೆಗೆ ಬರುವುದಕ್ಕೇ ಗೋಳಾಡುತ್ತಿದ್ದ ನಮ್ಮ ಸರಕಾರಿ ಶಾಲೆಯ ಮಕ್ಕಳನ್ನು ಎಳೆ ತರುವುದೇ ಸಾಹಸದ ಕೆಲಸವಾಗಬೇಕಾದರೆ ಇನ್ನು ಈ ಹದಿನೈದು ದಿನಗಳ ದೀರ್ಘ‌ ರಜೆ ಕುಂಭಕರ್ಣನ ನಿದ್ರೆಯ ಅವಧಿಯಂತೆ ಭಾಸವಾಗುತ್ತಿತ್ತು.

ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದಾಗ ಪಾಠವೇ ಮಾಡುತ್ತಿರಲಿಲ್ಲ. ಒಂದೆರಡು ತರಗತಿ ಹಿರಿಯ ವಿದ್ಯಾರ್ಥಿಗಳನ್ನ ಒಂದೊಂದು ತರಗತಿಗೆ ಕಳಿಸಿ ಶಿಕ್ಷಕರು ಆಫೀಸ್‌ ರೂಂ ಸೇರುತ್ತಿದ್ದರು. ಆ ಹಿರಿಯ ವಿದ್ಯಾರ್ಥಿಗಳಿಗೋ ತಮ್ಮ ಅಧಿಕಾರ ಚಲಾಯಿಸುವ ಸುಮಯ.

ಮಾತಾಡಿದರೆ ಸಾಕು ಬೆತ್ತ ಹಿಡಿದು ಅಂಗೈಗೆ ಒಂದೇಟು ಕೊಡಲೇಬೇಕು. ಸರಿಯಾಗಿ ಪಾಠವೂ ನಡೆಯದ, ಬಹಳಷ್ಟು ಸ್ನೇಹಿತರೂ ಬರದ ಈ ಉಸಿರುಗಟ್ಟಿಸುವ ಕ್ಲಾಸಿನಿಂದ ಪಾರಾದರೆ ಸಾಕು ಎನ್ನುವ ಆಲೋಚನೆ ಬರುತ್ತಿತ್ತು.

ಅಂದೂ ಸಹ ಹಾಗೇ ಆಗಿ ಇಂಟರ್ವೆಲ್‌ ವೇಳೆಗೆ ನನ್ನ ಬೇಸರವೂ ಹೆಚ್ಚಾಗಿ ನನ್ನಿಬ್ಬರು ಸ್ನೇಹಿತೆಯರ ಮುಂದೆ ಶಾಲೆಗೆ ಚಕ್ಕರ್‌ ಹಾಕುವ ದುಷ್ಟ ಉಪಾಯವನ್ನು ಬಿಚ್ಚಿಟ್ಟೆ. ಇದನ್ನು ಕೇಳಿಯೇ ಹಾವು ಕಂಡವರಂತೆ ಗಾಬರಿಯಾದ ಅವರ ಮನ ಒಲಿಸಲು, ಧೈರ್ಯ ತುಂಬಲು ನನ್ನ ಪುಟ್ಟ ತಲೆಯಲ್ಲಿದ್ದ ಬುದ್ಧಿಯನ್ನೆಲ್ಲ ಖರ್ಚು ಮಾಡಬೇಕಾಗಿ ಬಂತು.

ಊಟ ಆದ ಕೂಡಲೇ ಹೊರಟು ಬಿಡುವ ಸಂಚು ಹೂಡಿದ್ದಾಯ್ತು. ಅವರಿಬ್ಬರಿಗೆ ಇನ್ನು ಗೊಂದಲವಿತ್ತು. ತಮ್ಮ ನಿರ್ಧಾರವನ್ನು ಪುನರ್‌ ವಿಮರ್ಶಿಸಿಕೊಳ್ಳುತಿದ್ದರೆಂದು ಕಾಣುತ್ತದೆ. ಅದರಲ್ಲೂ ಕೊಂಚ ಪುಕ್ಕಲು ಸ್ವಭಾವದವಳಾದ ಯಾಸ್ಮಿನ್‌ ತನ್ನ ಸ್ವಂತ ನಿರ್ಧಾರದಂತೆ ಅಲ್ಲದೇ ನಮ್ಮ ಒತ್ತಾಯಕ್ಕೂ, ಸ್ನೇಹ ಕಳೆದುಕೊಂಡುಬಿಡುವ ಭಯಕ್ಕೂ ಹೂಂ ಗುಟ್ಟಿದ್ದಳು. ಅಂತೂ ಊಟ ಆದ ಕೂಡಲೇ ಪಾಠಿಚೀಲವನ್ನು ಯಾರಿಗೂ ಕಾಣದಂತೆ ಲಂಗದಲ್ಲಿ ಅಡಗಿಸಿಕೊಂಡು, ಶಾಲೆಯ ಒಂದು ಬದಿಯಲ್ಲಿದ್ದ ಕಾಂಪೌಂಡಿನ ಹತ್ತಿರ ಹೋದೆವು. ಕಟ್ಟಡಗಳನ್ನು ಕಟ್ಟಿ ಹೆಚ್ಚಿಗೆ ಉಳಿದ ಕಲ್ಲುಗಳನ್ನು ಕ್ರಮವಾಗಿ ಮೆಟ್ಟಿಲಿನಂತೆ ಕಾಂಪೌಂಡಿಗೆ ತಾಕಿಸಿ ಪೇರಿಸಿಟ್ಟಿದ್ದರು.

ಹೀಗಾಗಿ ಈ ಕಡೆಯಿಂದ ಕಾಂಪೌಂಡ್‌ ಹತ್ತುವುದು ಸುಲಭವಾದರೂ ಆ ಕಡೆ ಮಾತ್ರ ಅನಾಮತ್ತಾಗಿ ಐದಾರು ಅಡಿ ಕೆಳಗೆ ಜಿಗಿಯಬೇಕಿತ್ತು. ಮೆಟ್ಟಿಲ ಪಕ್ಕದಲ್ಲೇ ದೊಡ್ಡದಾದ ಚರಂಡಿ ಬಾಯಿ ತೆರೆದು ಮಲಗಿತ್ತಾದ್ದರಿಂದ ಅದರಲ್ಲಿ ಬೀಳುವ ಭಯವೇ ಹಿಂದೇಟು ಹಾಕಿಸುವಂತಿತ್ತು. ನಮ್ಮ ಮೂವರಲ್ಲಿ ರಶ್ಮಿ ದಪ್ಪ ಇದ್ದುದರಿಂದ ಮೊದಲು ಅವಳೇ ಇಳಿಯಬೇಕು ಎಂದು ಸಮಾಲೋಚಿಸಿಯಾಗಿತ್ತು. ಅದರಂತೆ ಮೊದಲು ಅವಳು ಕಾಂಪೌಂಡಿನಿಂದ ಸರಿಯಾದ ಸ್ಥಳದಲ್ಲಿ ಅನಾಯಾಸವಾಗಿ ಜಿಗಿದದ್ದರಿಂದ ನಮ್ಮ ಅನುಮಾನಗಳು, ಭಯಗಳೆಲ್ಲ ಕರಗಿ ಪುಟ್ಟದೊಂದು ಹರ್ಷ ಮನೆ ಮಾಡಿತ್ತು.

ಅವಳೆಡೆಗೆ ನಮ್ಮ ಮೂರು ಜನರ ಪಾಠಿಚೀಲ ಎಸೆದೆ. ಅವಳು ಒಂದು ಬದಿಗಿಟ್ಟು ಸರಿದು ನಿಂತಳು. ಅನಂತರ ಸರದಿ ಯಾಸ್ಮಿನಳದ್ದು. ಅವಳು ಮೊದಲೇ ಪುಕ್ಕಲು, ಕೋಲಿನಷ್ಟು ತೆಳ್ಳಗಿನ ಶರೀರ. ಮೇಲಾಗಿ ಇಷ್ಟವಿಲ್ಲದೇ ಕೈಜೋಡಿಸಿದ್ದರಿಂದ ಅವಳನ್ನು ಕೊನೆಗೆ ಬಿಟ್ಟರೆ ಕೆಳಗೆ ಜಿಗಿಯದೇ ಹಿಂತಿರುಗಿ ಕ್ಲಾಸಿಗೆ ಹೋಗಿಬಿಟ್ಟರೆ ಎಂಬ ಭಯ ನಮಗೆ. ಹೀಗಾಗಿ ಅವಳನ್ನು ನಂಬುವಂತಿರಲಿಲ್ಲ. ಅವಳ ಸರದಿ ಬಂದದ್ದೇ ಭಯದಿಂದ ಸಣ್ಣಗೆ ನಡುಗುತ್ತಿದ್ದಳು. ನಾವಿಬ್ಬರು ಎಷ್ಟು ಧೈರ್ಯಕೊಟ್ಟರೂ ಕೆಳಗೆ ಇಳಿಯಲೊಲ್ಲಳು. ನಮಗೋ ಆದಷ್ಟು ಬೇಗ ಪಾರಾಗಬೇಕು. ನನ್ನ ಸಹನೆ ಕರಗಿ ಅವಳ ಮೇಲೆ ಕೋಪ ಬಂದು ನಾನೇ ದೂಡಿ ಬಿಡಲೇ ಎಂಬ ಭಯಂಕರ ಆಲೋಚನೆ ಬಂದು ಕೈಗೆತ್ತಿಕೊಳ್ಳುವ ಮೊದಲೇ ಅವಳು ಕೊಸರುತ್ತಲೇ ಹಾರಿದಳು. ಎಡವಟ್ಟಾದ್ದೇ ಅಲ್ಲಿ.

ಅವಳು ಭಯದಿಂದ ಸರಿಯಾದ ಜಾಗದಲ್ಲಿ ಜಿಗಿಯದಿದ್ದರಿಂದ ಸೆಲೂನಿನ ಹೆಸರು ಬರೆದಿದ್ದ ಕಬ್ಬಿಣದ ಬೋರ್ಡಿನ ಒಂದು ತುದಿಗೆ ಅವಳ ಅಂಗಿಯ ತೋಳು ಸಿಲುಕಿ ಅಕ್ಷರಶಃ ಬಾವುಲಿಯಂತೆ ನೇತಾಡುತಿದ್ದಳು. ನಮ್ಮಿಬ್ಬರ ಜಂಘಾಬಲವೇ ಹುಡುಗಿ ಹೋಯ್ತು. ರಶ್ಮಿ ನಮ್ಮಿಬ್ಬರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಬಹುದಿತ್ತಾದರೂ ಮಿತ್ರ ದ್ರೋಹ ಮಾಡದೇ ಕಂಗಾಲಾಗಿ ನಿಂತೇ ಇದ್ದಳು. ನನಗೆ ಕೆಳಗೆ ಇಳಿಯುವಂತೆಯೂ ಇಲ್ಲ, ಪಾಠಿಚೀಲ ಇಲ್ಲದ್ದರಿಂದ ಶಾಲೆಗೂ ಹೋಗುವಂತಿಲ್ಲ. ಅಲ್ಲದೇ ಯಾರಾದರೂ ನೋಡಿ ಶಿಕ್ಷಕರಿಗೆ ಹೇಳಿದರೆ ಮೊದಲು ಅವರ ಕೈಗೆ ಸಿಗುತಿದ್ದವಳು ನಾನೇ.

ಯಾಸ್ಮಿನ್‌ ಒಂದೇ ಸಮ ಅಳಲು ಶುರು ಮಾಡಿದಳು. ಕ್ರಮೇಣ ಅವಳ ಅಳು ಜೋರಾಗಿ ಒಳಗಿರುವ ಸಲೂನಿನವನಿಗೆ ಅದು ಕೇಳಿ ಹೊರ ಬಂದ. ನೇತಾಡುತ್ತಿರುವ ಅವಳ ಸ್ಥಿತಿ ನೋಡಿ ಅವನಿಗೆ ಅಳಬೇಕೋ ನಗಬೇಕೊ ಗೊತ್ತಾಗಿರಲಿಕ್ಕಿಲ್ಲ. ಒಟ್ಟಾರೆ ಆ ಮನುಷ್ಯ ಅವಳನ್ನು ಬೋರ್ಡಿನ ತುದಿಯಿಂದ ಮುಕ್ತಗೊಳಿಸಿದ. ಅವರಿಬ್ಬರೂ ಭಯದಿಂದ ನಡುಗುತ್ತಿದ್ದರು. ನನಗಂತೂ ಇನ್ನೂ ಗೊಂದಲ. ಕೆಳಗೆ ಹಾರಲು ಆ ವ್ಯಕ್ತಿ ಇದ್ದಾನೆ. ವಾಪಸ್ಸು ಹೋಗುವ ಮನಸ್ಸಿಲ್ಲ. ನನ್ನ ಗೊಂದಲ ಅರಿತವನಂತೆ ಸಣ್ಣಗೆ ನಗೆ ಹರಿಸಿ ನನ್ನನ್ನು ಅವನೇ ಕೆಳಗಿಳಿಸಿದ. ಈಗ ಭಯ ಇದದ್ದು ನಮ್ಮ ಮೂವರನ್ನೂ ಶಾಲೆಗೆ ಎಳೆದುಕೊಂಡು ಹೋಗಿ ಒಂದು ಗತಿ ಕಾಣಿಸುತ್ತಾನೆಂದು. ನಾವು ಒಬ್ಬರ ಮುಖ ಒಬ್ಬರು ನೋಡಲೂ ಭಯವಾಗಿ ಅಪರಾಧಿಗಳಂತೆ ತಲೆಕೆಳಹಾಕಿ ನಿಂತೆವು. ಆ ವ್ಯಕ್ತಿ ನಮ್ಮ ಊಹೆಗೂ ನಿಲುಕದಂತೆ ಇನ್ನೊಮ್ಮೆ ಹೀಗೆಲ್ಲ ಮಾಡಬೇಡಿ. ಆ ಕಡೆ ಚರಂಡಿಯಲ್ಲಿ ಬಿದ್ದರೆ ಕೈಕಾಲು ಉಳಿಯಲಿಕ್ಕಿಲ್ಲ ಎಂದು ತೀರಾ ಸಾವಧಾನವಾಗಿ ಏನೂ ನಡೆದೇ ಇಲ್ಲ, ನಮ್ಮದು
ಅಸಲಿಗೆ ತಪ್ಪೇ ಇಲ್ಲ ಎನ್ನುವಂತೆ ಹೇಳಿ ಸಲೂನಿನ ಒಳ ಹೊಕ್ಕ.

ನಮ್ಮ ಮೂರೂ ಜನಕ್ಕೂ ಆದ ಹಿಗ್ಗು ಅಷ್ಟಿಷ್ಟಲ್ಲ. ಅಳುಬುರುಕಿ ಯಾಸ್ಮಿನ್‌ ಕೂಡ ತರಚಿ ಗಾಯವಾದ ನೋವನ್ನೂ ಮರೆತು ಆರಾಮವಾಗಿದ್ದಳು. ಅಲ್ಲಿಂದ ನಮ್ಮ ಸಾಹಸಕ್ಕೆ ನಾವೇ ಮೆಚ್ಚುತ್ತ ಮನೆ ಸೇರಿ ನಿರಾಳವಾದೆವಾದರೂ ಮಾರನೇ ದಿನ ಶಾಲೆಗೆ ಹೋದ ಕೂಡಲೇ, ಕ್ಲಾಸ್‌ ಟೀಚರ್‌ ಮೂರು ಜನಕ್ಕೆ ಬೆತ್ತದ ರುಚಿ ಕಾಣಿಸಿಯೇ ಒಳಬಿಟ್ಟದ್ದು. ನಾವು ಕಣ್ಣು ಮುಚ್ಚಿ ಹಾಲು ಕುಡಿದರೂ ತರಗತಿಯಿಂದ ಹೊರ ಹೋದದ್ದನ್ನು ನೋಡಿದ ಯಾರೋ ಚಾಡಿ ಹೇಳಿಯಾಗಿತ್ತು.

ಕವಿತಾ ಭಟ್‌, ಹೊನ್ನಾವರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.