Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ


Team Udayavani, Apr 21, 2024, 1:00 PM IST

6-uv-fusion

ಬಿಸಿಲ ಬೇಗೆಗೆ ಪರಿಸರವೆಲ್ಲಾ ನಾಶವಾಗುತ್ತಿದ್ದು, ನೀರಿಗೂ ಪರದಾಡುವಂತಹ ಸ್ಥಿತಿ ನಮ್ಮದಾಗಿದೆ. ಮುಂಚಿತವಾಗಿಯೇ ನಮ್ಮ ಜವಾಬ್ದಾರಿಯಲ್ಲಿ ನಾವಿದ್ದು, ನೀರನ್ನು ಸಂರಕ್ಷಿಸಿ ಇಡುತ್ತಿದ್ದರೆ ನಾವಿಂದು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿಯೇ ಬರುತ್ತಿರಲಿಲ್ಲ. ಹವಾಮಾನ ಇಲಾಖೆಯು ಮುಂದಿನ ದಿನಗಳಲ್ಲಿ ಬಿಸಿಲಿನ ತಾಪವು ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದರೂ, ನಾವು ಅದರ ಬಗೆಗೆ ಗಮನ ಹರಿಸಲಿಲ್ಲ. ಅದೇ ಕಾರಣಕ್ಕಾಗಿ ನಾವು ಒಂದು ಹನಿ ನೀರಿಗಾಗಿ ಕಷ್ಟ ಪಡುತ್ತಿರುವುದು.

ಈ ಬಿಸಿಲಿನ ಸಮಸ್ಯೆಯಿಂದ ಅದೆಷ್ಟೋ ಪ್ರಾಣಿ ಪಕ್ಷಿಗಳು ಸಾಯುವ ಸ್ಥಿತಿಗೆ ಬಂದು ತಲುಪಿವೆ. ಬೀದಿ ಬದಿಯಲ್ಲಿರುವ ಪ್ರಾಣಿಗಳೆಲ್ಲಾ ನೀರಿಗಾಗಿ ಚರಂಡಿ ಬದಿಯಲ್ಲಿ ತನ್ನ ದಾಹವನ್ನು ತೀರಿಸುವಂತಾಗಿದೆ. ಈ ಬಿಸಿಲಿನಿಂದ ಕೆರೆ, ನದಿಗಳೆಲ್ಲಾ ಬತ್ತಿ ಹೋಗಿದೆ. ಬಿಸಿಲಿನ ತಾಪದಿಂದ ಆರೋಗ್ಯದಲ್ಲಿ ಏರುಪೇರು ಆಗುವುದನ್ನು ನೋಡಬಹುದು.

ಬಿಸಿಲು ಎಂದ ಮೇಲೆ ತಾಪಗಳೆಲ್ಲಾ ಇದ್ದೇ ಇರುತ್ತದೆ. ಆದರೆ ಇದರಿಂದ ಶೆಕೆಯು ಹೆಚ್ಚಾಗಿದ್ದು, ಮನೆಯೊಳಗೂ ಇರಲು ಸಾಧ್ಯವಾಗುತ್ತಿಲ್ಲ. ಬಿಸಿಲಿನ ತಾಪಕ್ಕೆ ಮನುಷ್ಯರು ಮಾತ್ರ ಅಲ್ಲ, ಬದಲಿಗೆ ಪ್ರಾಣಿ ಪಕ್ಷಿಗಳು ಕಂಗಾಲಾಗಿವೆ. ಮನುಷ್ಯರು ನೀರಿಲ್ಲದೆ ಯಾವ ರೀತಿ ಕಷ್ಟಪಡುತ್ತಾರೋ, ಹಾಗೆಯೇ ಪ್ರಾಣಿ ಪಕ್ಷಿಗಳು ಕೂಡ ಕಷ್ಟಪಡುತ್ತಿವೆ.

ಆದರೆ ಮನುಷ್ಯರಿಗೆ ತಮ್ಮ ಕಷ್ಟಗಳು ಮಾತ್ರ ತಿಳಿಯುವುದೇ ಹೊರತು ಬೇರೆಯವರ ಕಷ್ಟಗಳು ತಿಳಿಯುವುದಿಲ್ಲ. ನಮ್ಮಂತೆಯೇ ಅವುಗಳಿಗೂ ಜೀವ ಇದೆ ಅಲ್ವಾ. ಅವುಗಳಿಗೂ ಬದುಕಬೇಕೆಂಬ ಆಸೆ ಇರುವುದಿಲ್ಲವೇ. ಅವುಗಳೇ ನಮ್ಮ ಹತ್ತಿರ ಆಹಾರಕ್ಕೋ ಅಥವಾ ನೀರಿಗಾಗಿಯೋ ಬರುವಾಗ ನಮ್ಮಿಂದಾಗುವ ಸಹಾಯವನ್ನು ಮಾಡಬೇಕು. ಅವುಗಳಿಗೂ ಬದುಕಲು ಅವಕಾಶ ಮಾಡಿಕೊಡಬೇಕು.

ಬೇಸಗೆ ಸಮಯದಲ್ಲಿ ಮನೆಗಳ ಕಾಂಪೌಂಡ್‌, ರಸ್ತೆ ಬದಿ, ಟೆರೇಸ್‌ಗಳಲ್ಲಿ ನೀರು ಮತ್ತು ಆಹಾರವನ್ನು ಇಟ್ಟು, ಎರಡು ದಿನಗಳಿಗೊಮ್ಮೆ ಬದಲಾಯಿಸುತ್ತಿರಬೇಕು. ಮರದ ಕೆಳಗೆ ನೀರನ್ನು ಇಡುವುದರಿಂದ ಪಕ್ಷಿಗಳು ದಿನಾಲು ನೀರಿಗಾಗಿ ಬರುತ್ತವೆ.

ಅವುಗಳ ಜೀವವನ್ನು ಉಳಿಸಲು ಸಹಾಯಕವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತ ಇರುವ ಪ್ರಾಣಿ ಪಕ್ಷಿಗಳಿಗೆ ಸ್ವಲ್ಪ ನೀರು ಮತ್ತು ಆಹಾರವನ್ನು ಇಟ್ಟು ಪ್ರಾಣಿ ಪಕ್ಷಿಗಳನ್ನು ಉಳಿಸಬೇಕು. ತಮ್ಮ ತಮ್ಮ ಮನೆಯ ಮುಂದೆ ಅಥವಾ ಅಂಗಡಿ ಮುಂದೆ ಒಂದು ಸಣ್ಣ ತೊಟ್ಟಿ ಮಾಡಿ ಅದರಲ್ಲಿ ನೀರನ್ನು ತುಂಬಿಸಿಡಬೇಕು. ಆಗ ಬೀದಿ ನಾಯಿಗಳು, ದನಗಳು, ಪಕ್ಷಿಗಳು ಎಲ್ಲ ನೀರಿಗಾಗಿ ಬರುತ್ತವೆ. ನಮ್ಮಿಂದಾಗುವ ಎಲ್ಲ ಸಹಾಯವನ್ನು ಮಾಡಿ ಕಂಗಾಲಾಗಿರುವ ಜೀವ ಸಂಕುಲಗಳನ್ನು ಸಂರಕ್ಷಿಸಬೇಕು.

-ಧನ್ಯಶ್ರೀ

ವಿವೇಕಾನಂದ ಸ್ವಾಯತ್ತ, ಕಾಲೇಜು ಪುತ್ತೂರು

ಟಾಪ್ ನ್ಯೂಸ್

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.