Teacher’s Day: ಗುರಿ ತೋರೋ ಗುರುವೇ…


Team Udayavani, Sep 5, 2023, 7:00 AM IST

10-teacher-day

ಹಸಿ ಮಣ್ಣಿನಂತಿರುವ ಮಗುವಿನ ಮನಸ್ಸನ್ನು ಎರಡೂ ಕೈಗಳಿಂದ ಪ್ರೀತಿಯಿಂದ ತಟ್ಟಿ, ಸುಂದರವಾಗಿ, ಕಲಾತ್ಮಕವಾದ ವಿಗ್ರಹ ರೂಪಿಸುವುದು ಗುರುವಿನ ಗುರಿ. ನಮಗೆ ಗುರಿ ಮುಟ್ಟಲು ದಾರಿ ತೋರುವ, ಸದಾ ಕಾಲವೂ ಸಮಸ್ಯೆಗೆ ಸಮರ್ಪಕ ಪರಿಹಾರ ನೀಡುತ್ತಾ, ನಿಸ್ವಾರ್ಥ ಮನೋಭಾವದಿಂದ ದಾರಿದೀಪ ತೋರುವವ ಶಿಕ್ಷಕ.

ಯಾವುದೇ ಮಹಾನ್‌ ವ್ಯಕ್ತಿಗಳ ಕತೆಗಳನ್ನು ಓದಿದಾಗ ಆ ಕಾಲದಲ್ಲಿ ಗುರುಗಳ ಮಹತ್ವ ಮತ್ತು ಅವರ ಮಾರ್ಗದರ್ಶನದಲ್ಲಿ ತಯಾರಾದ ಯಶಸ್ಸಿನ ಕಥೆಗಳು ಅನೇಕ. ಶಿವಾಜಿ ಮಹಾರಾಜನು

ಆತ್ಮಸ್ಥೆ çರ್ಯವನ್ನು ಕಳೆದು ಕೊಂಡು ಕುಳಿತಿದ್ದಾಗ ಗುರು ರಾಮದಾಸರು ತುಂಬಿದ ಆತ್ಮವಿಶ್ವಾಸದಿಂದ ಮತ್ತೆ ಸಾಮ್ರಾಜ್ಯವನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಾನೆ. ಹಾಗೆಯೇ ಮಹಾಭಾರತದಲ್ಲಿ ಅರ್ಜುನ ಉತ್ತಮ ಬಿಲ್ವಿದ್ಯಾ ಪ್ರವೀಣನಾಗಲು ದ್ರೋಣಾಚಾರ್ಯರಂತಹ ಗುರುಗಳೇ ಕಾರಣ. ಇಂತಹ ವ್ಯಕ್ತಿಗಳು ಗುರು ಬೋಧನೆಯಿಂದಲೇ ಇಂದಿನ ಸಮಾಜಕ್ಕೆ ಸ್ಪೂರ್ತಿ ಚಿಲುಮೆಯಾಗಿರುವರು.

ಶಾಲೆಯಲ್ಲಿ ಪಾಠ ಕಲಿಸಿದವರು ಮಾತ್ರ ಶಿಕ್ಷಕರಲ್ಲ. ಬದುಕಿನ ಪ್ರತಿಯೊಂದು ಹೆಜ್ಜೆಯಲ್ಲೂ ನಮಗೊಬ್ಬ ಗುರು ಸಿಗುತ್ತಾನೆ. ಓದು ಮುಗಿಯಿತು, ಇನ್ನು ಶಿಕ್ಷಕರ ಆವಶ್ಯಕತೆ ಇಲ್ಲ ಎಂದುಕೊಳ್ಳುವಂತಿಲ್ಲ. ಶಿಕ್ಷಕರು ನೀಡಿದ ಅರಿವು ಮುಂದೆ ಜೀವನದಲ್ಲಿ ವಿದ್ಯಾರ್ಥಿ ತಪ್ಪು ದಾರಿ ಹಿಡಿದಾಗ, ಯಾವ ದಾರಿಯಲ್ಲಿ ಹೋದರೆ ಒಳ್ಳೆಯದು ಮತ್ತು ಯಶಸ್ಸು ಸಾಧಿಸಬಹುದು ಎಂದು ದಾರಿದೀಪ ವಾಗುತ್ತಿರುತ್ತದೆ.

ಎಷ್ಟೋ ಜನರು ತಮ್ಮ ಗುರುಗಳಿಂದಾಗಿ ನಾವು ಉತ್ತಮ ಸ್ಥಾನವನ್ನು ಪಡೆಯಲು ಸಾಧ್ಯವಾಗಿದೆಯೆಂದು ಆಗಾಗ ಹೇಳುತ್ತಾರೆ. ನನ್ನ ಶಿಕ್ಷಕರು ಒಂದೆರಡು ಪೆಟ್ಟು ಕೊಟ್ಟಿದ್ದರಿಂದ ನಾನು ಇಂದು ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದೇನೆ ಎಂದು ಕೆಲವರು ಹೇಳುತ್ತಾರೆ. ಪೆಟ್ಟಿನ ಜತೆಗೆ ತಮ್ಮ ಶಿಕ್ಷಕರು ನೀಡಿದ ತಾಯಿಯ ಪ್ರೀತಿಗಿಂತಲೂ ಮಿಗಿಲಾದ ಪ್ರೀತಿಯನ್ನು ಮಕ್ಕಳು ಅನುಭವಿಸುವುದೇ ಇದಕ್ಕೆ ಮುಖ್ಯ ಕಾರಣವಾಗಿರುತ್ತದೆ.

ಶಿಕ್ಷಕರೆಂದರೆ ಪಾಠ ಬೋಧಿಸುವವರು ಮಾತ್ರವಲ್ಲ; ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು. ತನ್ನ ಅರಿವಿನ ಲೋಕದಲ್ಲಿ ಒಂದಷ್ಟನ್ನು ತನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ಭವಿಷ್ಯದಲ್ಲಿ ಅವರ ಬಾಳು ಬೆಳಗುವಂತೆ ಮಾಡುವ ಗುರುಗಳ ಋಣವನ್ನು ತೀರಿಸಲು ಸಾಧ್ಯವೇ? ತನ್ನ ವಿದ್ಯಾರ್ಥಿ ತನಗಿಂತ ಉನ್ನತ ಮಟ್ಟಕ್ಕೆ ತಲುಪಿದರೆ ಅತ್ಯಂತ ಸಂತೋಷ ಪಡುವ ಏಕೈಕ ವ್ಯಕ್ತಿ ಎಂದರೆ ಗುರು ಮಾತ್ರ. ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ಒಳಮನಸ್ಸಿನ ರೂಪದಲ್ಲಿ ಜತೆಯಾಗಿದ್ದು ಮುನ್ನಡೆಸುವ ಗುರಿ ಇಲ್ಲದಾಗ ಗುರುವಾಗುವ ಮತ್ತು ಗುರುವಾಗಿದ್ದುಕೊಂಡು ಗುರಿ ತೋರುವ ಆ ಎಲ್ಲ ಶಿಕ್ಷಕರಿಗೆ ಹೃದಯದಾಳದ ನಮನ. -ರಶ್ಮಿ ಉಡುಪ, ಡಾ.ಬಿಬಿ.ಹೆಗ್ಡೆ ಕಾಲೇಜು, ಕುಂದಾಪುರ

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-uv-fusion

Life: ಬಯಸಿದಂತೆಲ್ಲಾ ಇರುವುದಿಲ್ಲ ಬದುಕು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

6-uv-fusion

UV Fusion: ಸಹವಾಸ ದೋಷ

5-uv-fusion

UV Fusion: ಬೆಳವಣಿಗೆ ಯಾವುದು?

4-uv-fusion

Women: ಹೆಣ್ಣು ಹೊರೆಯಲ್ಲ ಶಕ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.